Karkala: ಕಾರ್ಮಿಕ ಸಾವು; ಇಬ್ಬರ ವಿರುದ್ಧ ಪ್ರಕರಣ ದಾಖಲು
Team Udayavani, Aug 2, 2023, 11:14 PM IST
ಕಾರ್ಕಳ: ಮುನ್ನೆಚ್ಚರಿಕೆ ಕ್ರಮ ವಹಿಸದೆ ಕಲ್ಲು ಸ್ಫೋಟಗೊಳಿಸಿರುವ ಬಗ್ಗೆ ಇಬ್ಬರ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳವಾರ ಮಧ್ಯಾಹ್ನದ ವೇಳೆಯಲ್ಲಿ ವೆಂಕಟೇಶ ಹಾಗೂ ಇತರ ಕಾರ್ಮಿಕರು ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿ ಅವರ ಮಾಲಕತ್ವದ ಗುಂಡ್ಯಡ್ಕ ಶ್ರೀ ಮಹಾಗಣಪತಿ ಕ್ರಷರ್ನಲ್ಲಿ ಕೆಲಸ ಮಾಡಿಕೊಂಡಿದ್ದು, ಈ ವೇಳೆ ಕ್ರಷರ್ನಿಂದ ಸುಮಾರು 150 ಮೀಟರ್ ದೂರದಲ್ಲಿ ಮಣಿಪಾಲದ ಬಾಲಾಜಿ ಎಕ್ಸ್ಪ್ಲೋಸಿವ್ನ ಯತೀಶ್ ಕುಮಾರ್ ದೇವಾಡಿಗ ಅವರು ಕಾರ್ಮಿಕರೊಂದಿಗೆ ಕಲ್ಲುಗಳನ್ನು ಬ್ಲಾಸ್ಟ್ ಮಾಡುತ್ತಿದ್ದರು. ಈ ವೇಳೆ ಕಲ್ಲು ಸ್ಫೋಟಗೊಂಡಿದ್ದು, ವೆಂಕಟೇಶ ಅವರ ತಲೆಯ ಮೇಲೆ ಬಿದ್ದಿದೆ. ಪರಿಣಾಮ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಅನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ಗಾಯಾಳು ವೆಂಕಟೇಶ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಘಟನೆಗೆ ಮುಂಜಾಗ್ರತ ಕ್ರಮ ವಹಿಸದೇ ಕಲ್ಲನ್ನು ಸ್ಫೋಟಗೊಳಿಸಿರುವುದೇ ಕಾರಣವಾಗಿದೆ ಎನ್ನುವ ದೂರಿನಂತೆ ಕ್ರಷರ್ ಮಾಲಕ ದಿನೇಶ್ ಶೆಟ್ಟಿ ಹಾಗೂ ಮಣಿಪಾಲದ ಬಾಲಾಜಿ ಎಕ್ಸ್ಪ್ಲೋಸಿವ್ನ ಯತೀಶ್ ಕುಮಾರ್ ದೇವಾಡಿಗ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!