ಟೋಲ್ ಸಂಗ್ರಹ ವಿರೋಧಿಸಿ ನಾಳೆ ಕಾರ್ಕಳ-ಪಡುಬಿದ್ರಿ ಬಂದ್
Team Udayavani, Dec 19, 2018, 9:42 AM IST
ಉಡುಪಿ: ಕಾರ್ಕಳ – ಪಡುಬಿದ್ರಿ ರಾಜ್ಯ ಹೆದ್ದಾರಿಯ ಟೋಲ್ ಗೇಟ್ ಪ್ರಸ್ತಾವನೆ ವಿರುದ್ಧ ಡಿ. 20ರಂದು ಕಾರ್ಕಳದಿಂದ ಪಡುಬಿದ್ರಿವರೆಗೆ ಹೆದ್ದಾರಿಯನ್ನು ಸಂಪೂರ್ಣ ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು
ಟೋಲ್ ಗೇಟ್-ಸುಂಕ ವಸೂಲಾತಿ ಕೇಂದ್ರ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ನಂದಳಿಕೆ ಸುಹಾಸ್ ಹೆಗ್ಡೆ ತಿಳಿಸಿದ್ದಾರೆ.
ಅಕ್ಟೋಬರ್ನಲ್ಲಿ ಬೆಳ್ಮಣ್ಣಿನಲ್ಲಿ ಸಾವಿರಾರು ಜನರು ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿದ್ದರು. ಆದರೆ ಶಾಂತಿಯುತ ಹೋರಾಟಕ್ಕೆ ಯಾವುದೇ ಸ್ಪಂದನೆ ಇಲ್ಲ. ಈಗ ಪೊಲೀಸ್ ಸಹಾಯದಿಂದ ಟೋಲ್ ಗೇಟ್ ನಿರ್ಮಿಸಿ ಸಾರ್ವಜನಿಕರನ್ನು ಲೂಟಿ ಮಾಡಲು ಸರಕಾರ ಮುಂದಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ಸಮಿತಿ ಪದಾಧಿಕಾರಿಗಳಾದ ಶಶಿಧರ ಶೆಟ್ಟಿ, ಸರ್ವಜ್ಞ ತಂತ್ರಿ, ಹರಿಪ್ರಸಾದ್ ಉಪಸ್ಥಿತರಿದ್ದರು.
27 ಕಿ.ಮೀ.ಗೆ 37 ಹಂಪ್!
27 ಕಿ.ಮೀ. ಉದ್ದದ ಈ ಹೆದ್ದಾರಿಗೆ 37 ಹಂಪ್ಗ್ಳನ್ನು ಹಾಕಲಾಗಿದೆ. ನಾವು ರಸ್ತೆಗೆ ಬೇರೆ ಬೇರೆ ರೀತಿಯಲ್ಲಿ ತೆರಿಗೆ ಪಾವತಿಸುತ್ತಿದ್ದೇವೆ. ಹೆಜಮಾಡಿ, ಸುರತ್ಕಲ್, ಬೆಳ್ಮಣ್ಣು ನಡುವೆ 37 ಕಿ.ಮೀ.ಗೆ ಮೂರು ಟೋಲ್ ವಸೂಲಿ ಕೇಂದ್ರ ಗಳಿವೆ. ಸುಂಕದ ಹೊರೆ ಜನಸಾಮಾನ್ಯರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಡಿ. 20ರಂದು ಬೆಳಗ್ಗೆ 9ಕ್ಕೆ ಬೆಳ್ಮಣ್ಣು ಬಸ್ ನಿಲ್ದಾಣದಲ್ಲಿ ಪ್ರತಿಭಟನ ಸಭೆ ಮತ್ತು ಮೆರವಣಿಗೆ ನಡೆಯಲಿದೆ. ಉದ್ಯಮಿ ಗಳು, ವರ್ತಕರು, ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು, ಬಸ್-ರಿಕ್ಷಾ-ಟ್ಯಾಕ್ಸಿ ಮಾಲಕರು, ಚಾಲಕರು, ಕೃಷಿಕರು ಬೆಂಬಲ ಸೂಚಿಸಿದ್ದಾರೆ ಎಂದು ಸುಹಾಸ್ ಹೆಗ್ಡೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ