61 ವರ್ಷಗಳ ಹಿಂದಿನ ಪರಪ್ಪು ಸೇತುವೆಗೆ ಬೇಕಿದೆ ಮುಕ್ತಿ


Team Udayavani, Nov 6, 2018, 9:32 AM IST

parappu.jpg

ಕಾರ್ಕಳ: ಕಾರ್ಕಳ ಮುಖ್ಯ ಪೇಟೆಯಿಂದ ಪಳ್ಳಿ-ರಂಗನಪಲ್ಕೆ ಭಾಗಕ್ಕೆ ಸಂಪರ್ಕಿಸುವ ಕಿರಿದಾಗಿರುವ ಪರಪ್ಪು ಸೇತುವೆಯಲ್ಲಿ ಪ್ರತಿನಿತ್ಯವೂ ಸಂಚಾರಕ್ಕೆ ತೊಂದರೆ ಉಂಟಾಗುತಿದೆ. ಸುಮಾರು 61 ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಈ ಸದ್ಯದ ಅಧಿಕ ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ.

ಈ ಕಿರು ಸೇತುವೆ ನಿರ್ಮಾಣಗೊಂಡಾಗ ಅಂದಿನ ರಸ್ತೆಗೆ ಪೂರಕವಾಗಿ ನಿರ್ಮಾಣಗೊಂಡಿದೆ. ಆದರೆ ಅನಂತರ ಸೇತುವೆಯ ಎರಡೂ ಭಾಗದ ರಸ್ತೆಗಳು ಅಗಲಗೊಂಡಿವೆ. ವಾಹನ ಸಂಚಾರ ಅಧಿಕವಾಗಿದೆ. ಹೀಗಾಗಿ ಸೇತುವೆ ತೀರ ಇಕ್ಕಟ್ಟಾಗಿ ವಾಹಗಳ ಸುಗಮ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಎರಡೂ ಕಡೆಯಿಂದ ವಾಹನಗಳು ಬಂದರೆ ಒಂದರ ಅನಂತರ ಮತ್ತೂಂದು ಸಂಚರಿಸಬೇಕಾಗುತ್ತದೆ.

ಉಡುಪಿಗೆ 6 ಕಿ.ಮೀ. ಸಮೀಪ..|
ಕಾರ್ಕಳದಿಂದ ಉಡುಪಿ ನಗರಕ್ಕೆ ಪರಪ್ಪು ಸೇತುವೆಯ ಮೂಲಕ ರಂಗನಪಲ್ಕೆ, ಪಳ್ಳಿಯಿಂದ ತೆರಳಲು ಸಾಧ್ಯವಿದೆ. ಅಲ್ಲದೇ ಬೈಲೂರು, ಹಿರಿಯಡ್ಕ ಮಾರ್ಗವಾಗಿ ಉಡುಪಿ ಸಂಚರಿಸುವುದಕ್ಕಿಂತ 6 ಕಿ.ಮೀ. ಸಂಪರ್ಕವೂ ಹತ್ತಿರವಾಗುತ್ತದೆ. ಸದ್ಯ ಬೈಲೂರು ಭಾಗದ ಮುಖ್ಯ ರಸ್ತೆ ಅಲ್ಲಲ್ಲಿ ಹೊಂಡಗುಂಡಿಗಳಿಂದ ತುಂಬಿದೆ. ಹೀಗಾಗಿ ಹಲವು ಖಾಸಗಿ ವಾಹನಗಳು ಈ ಸೇತುವೆ ಅವಲಂಬಿಸಿ ರಂಗನಪಲ್ಕೆ ಮೂಲಕ ಉಡುಪಿ ತೆರಳುತ್ತದೆ.

ಅಡಿಭಾಗ ಬಿರುಕು…
ಸುಮಾರು 61 ವರ್ಷಗಳ ಹಿಂದಿನ ಸೇತುವೆ ಇದಾಗಿದ್ದು, ಶಿಥಿಲಗೊಳ್ಳುತ್ತಿದೆ. ಸೇತುವೆ ಅಡಿಭಾಗದ ಕೆಲವು ಕಡೆ ಬಿರುಕುಬಿಟ್ಟಿದ್ದು, ಅಪಾಯ ಆಹ್ವಾನಿಸುತ್ತಿದೆ. ಕೆಲವೊಂದು ವಾಹನಗಳು ಸೇತುವೆಗೆ ಢಿಕ್ಕಿ ಹೊಡೆದ ಉದಾಹರಣೆಗಳೂ ಇವೆ.

ಕಾರ್ಕಳ ನಗರದ ಪ್ರತಿಯೊಂದು ಶಾಲೆಯ ವಾಹನಗಳು ಈ ಸೇತುವೆ ಮೂಲಕ ಸಂಚರಿಸುತ್ತಿವೆ. 
ಸಮೀಪದಲ್ಲೇ ಗೇರುಬೀಜ ಕಾರ್ಖಾನೆ, ಕಲ್ಲುಗಣಿಗಾರಿಕೆ ಇರುವುದರಿಂದ ಘನವಾಹನಗಳು ತೆರಳುತ್ತವೆ. ಹಲವು ಬಾರಿ ಅಪಘಾತಗಳೂ ಸಂಭವಿಸಿ ಗಾಯಗೊಂಡಿದ್ದಾರೆ.  ಹೀಗಾಗಿ ಇಲ್ಲಿ ಅಗಲವಾಗಿ ಹೊಸ ಸೇತುವೆ ನಿರ್ಮಾಣ ಆಗಬೇಕು ಎನ್ನುವುದು ಸ್ಥಳೀಯರ ಆಗ್ರಹವಿದೆ.

ಮನವಿ ಮಾಡಲಾಗಿದೆ 
ಪರಪ್ಪು ಹೊಸ ಸೇತುವೆ ನಿರ್ಮಾಣಕ್ಕೆ ಈಗಾಗಲೇ ಶಾಸಕರಿಗೆ ಪ್ರಸ್ತಾವನೆ ಮಾಡಲಾಗಿದೆ. ಘನ ವಾಹನಗಳು ಸೇರಿದಂತೆ ಪ್ರತೀದಿನ ಸಾವಿರಾರು ವಾಹನಗಳು ಈ ಸೇತುವೆಯನ್ನು ಅವಲಂಭಿಸಿವೆ. ಸೇತುವೆಯ ಸುತ್ತಮುತ್ತಲು ಪೊದೆಗಳು ತುಂಬಿತ್ತು. ಅದನ್ನು ತೆಗೆಯುವ ಕಾರ್ಯ ಮಾಡಲಾಗಿದೆ.
ರಾಜೇಶ್‌ ರಾವ್‌ ಕುಕ್ಕುಂದೂರು ಗ್ರಾ.ಪಂ. ಉಪಾಧ್ಯಕ್ಷ.

 ಸೇತುವೆ ನಿರ್ಮಾಣವಾಗಲಿ
ರಸ್ತೆಗೆ ಸರಿಯಾಗಿ ಅಗಲವಾದ ಸೇತುವೆ ನಿರ್ಮಾಣಗೊಂಡರೆ ಸಾಕಷ್ಟು ರೀತಿಯಲ್ಲಿ ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ. ಈ ಭಾಗದಲ್ಲಿ ಪ್ರತಿದಿನ ಅಧಿಕ ಸಂಖ್ಯೆಯಲ್ಲಿ ವಾಹನಗಳು ತೆರಳುತ್ತವೆ. ರಸ್ತೆ ಅಗಲವಾಗಿದ್ದು, ಸೇತುವೆ ಕಿರಿದಾಗಿದೆ. ಹೀಗಾಗಿ ಕೆಲವೊಂದು ಅಪಘಾತಗಳೂ ಕೂಡ ಹೀಗಾಗಲೇ ಸಂಭವಿಸಿದೆ.
 ಸಂದೀಪ್‌ ಪೂಜಾರಿ,  ಪರಪ್ಪು.

ಜಿವೇಂದ್ರ ಶೆಟ್ಟಿ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.