ಕಾರ್ಕಳ ರೋಟರಿ ಆ್ಯನ್ಸ್ ಕ್ಲಬ್ ಪದಗ್ರಹಣ
Team Udayavani, Aug 3, 2017, 7:55 AM IST
ಕಾರ್ಕಳ: ರೋಟರಿ ಆ್ಯನ್ಸ್ ಕ್ಲಬ್ನ 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು. 26 ರಂದು ಕಾರ್ಕಳ ರೋಟರಿ ಬಾಲಭವನದಲ್ಲಿ ಜರಗಿತು.
ಕಾರ್ಕಳ ರೋಟರಿ ಕ್ಲಬ್ನ ಅಧ್ಯಕ್ಷ ಡಾ| ಮಹದೇವ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಮೂಡಬಿದಿರೆ ಇನ್ನರ್ ವ್ಹೀಲ್ ಕ್ಲಬ್ನ ಕೋಶಾಧ್ಯಕ್ಷೆ ಪ್ರಕಾಶಿಣಿ ಹೆಗ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ನಿರ್ಗಮನ ಕಾರ್ಯದರ್ಶಿ ಜಯಂತಿ ನಾೖಕ್ ವರದಿ ವಾಚಿಸಿದರು. ನಿರ್ಗಮನ ಅಧ್ಯಕ್ಷೆ ರಾಜೇಶ್ವರಿ ಆಚಾರ್ ಅವರು ನೂತನ ಆ್ಯನ್ಸ್ ಅಧ್ಯಕ್ಷೆ ಸ್ವಾತಿ ಆಚಾರ್ ಅವರಿಗೆ ಹಾಗೂ ನಿರ್ಗಮನ ಕಾರ್ಯದರ್ಶಿ ಜಯಂತಿ ನಾೖಕ್ ಅವರು ನೂತನ ಕಾರ್ಯದರ್ಶಿ ರಕ್ಷಾ ಪ್ರಭಾತ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಕೋಶಾಧ್ಯಕ್ಷೆ ಶಶಿಕಲಾ ಗೌಡ 2016-17 ನೇ ಸಾಲಿನ ಲೆಕ್ಕಪತ್ರವನ್ನು ಮಂಡಿಸಿ, ನೂತನ ಕೋಶಾಧ್ಯಕ್ಷೆ ನವ್ಯ ಶೆಟ್ಟಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಆ್ಯನ್ಸ್ ಕ್ಲಬ್ನ ಸಭಾಪತಿ ಶಶಿಕಲಾ ಹೆಗ್ಡೆ , ಆ್ಯನ್ಸ್ ಕ್ಲಬ್ನ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ನಿರ್ಗಮನ ಅಧ್ಯಕ್ಷೆ ರಾಜೇಶ್ವರಿ ಆಚಾರ್ ಹಾಗೂ ನಿರ್ಗಮನ ಕಾರ್ಯದರ್ಶಿ ಜಯಂತಿ ನಾೖಕ್ ಹಾಗೂ ಆ್ಯನ್ಸ್ ಕ್ಲಬ್ನ 10 ಮಂದಿ ಪೂರ್ವಾಧ್ಯಕ್ಷರುಗಳನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು. ರಾಜೇಶ್ವರಿ ಆಚಾರ್ ಸ್ವಾಗತಿಸಿದರು.
ಅಶ್ವಿನಿ ವೇಣುಗೋಪಾಲ್ ಮತ್ತು ಗೀತಾ ಕಾಮತ್ ಕಾರ್ಯಕ್ರಮ ನಿರೂಪಿಸಿ, ರಕ್ಷಾ ಪ್ರಭಾತ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ