ಕಾರ್ಕಳ: ತೇಜೋವಧೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
Team Udayavani, Feb 8, 2018, 8:15 AM IST
ಕಾರ್ಕಳ: ಕಾಂಗ್ರೆಸ್ನ ಹಿರಿಯ ನಾಯಕರಾದ ವೀರಪ್ಪ ಮೊಲಿ, ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಹಾಗೂ ಜಿಲ್ಲಾ ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮುನಿಯಾಲು ಅವರನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹಾಗೂ ಬಿಜೆಪಿ ಮುಖಂಡರು ತೇಜೋವಧೆ ಮಾಡಿರುವುದಕ್ಕೆ ಖಂಡನೆ ವ್ಯಕ್ತಪಡಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಬುಧ ವಾರ ಬಂಡೀಮಠದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮುನಿಯಾಲು ಮಾತನಾಡಿ, ಕಾಂಗ್ರೆಸ್ನ ಹಿರಿಯ ನಾಯಕ ವೀರಪ್ಪ ಮೊಲಿ ಹಾಗೂ ಗೋಪಾಲ ಭಂಡಾರಿ ಅವರನ್ನು ಬಿಜೆಪಿ ಮುಖಂಡರು ತೇಜೋವಧೆ ಮಾಡಿರುವುದು ಖಂಡನೀಯ. ಮೊಲಿ ಅವರು ಕಾರ್ಕಳಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹೀಗಾಗಿ ಅವರ ವೈಯಕ್ತಿಕ ನಿಂದನೆ ಸರಿಯಲ್ಲ. ಮೊಲಿ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಮುಂದುವರಿಯಲಿದೆ. ಬಿಜೆಪಿಯಂತೆ ಶವದ ಮೇಲೆ ರಾಜಕೀಯ ನಡೆಸುವುದಿಲ್ಲ. ರಾಜ್ಯದಲ್ಲಿ ಮತ್ತೂಮ್ಮೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದರು.
ಸುರತ್ಕಲ್ನ ಕಾರ್ಪೊರೇಟರ್ ಪ್ರತಿಭಾ ಕುಳಾ, ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಮಾತನಾಡಿದರು. ಅನಂತಶಯನದಿಂದ ಬಂಡೀಮಠದವರೆಗೆ ಪ್ರತಿ ಭಟನ ಮೆರವಣಿಗೆ ನಡೆಯಿತು. ಸಾವಿರಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು.
ಗೋದಾನ: ಈ ಸಂದರ್ಭ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮುನಿಯಾಲು ಅವರು ಗೋಪಿನಾಥ ಪುರಾಣಿಕ್ ಅವರಿಗೆ ಗೋದಾನ ಮಾಡಿದರು. ಪುರಸಭೆಯ ಸದಸ್ಯ ಶುಭದ ರಾವ್ ಪ್ರಸ್ತಾವನೆಗೈದರು. ಕಾಂಗ್ರೆಸ್ನ ಪ್ರಮುಖರಾದ ಸಂತೋಷ್ ಶೆಟ್ಟಿ, ಶೈಲೇಶ್ ಸುವರ್ಣ, ತಾ.ಪಂ. ಸದಸ್ಯ ಸುಧಾಕರ ಶೆಟ್ಟಿ, ವೆರೋನಿಕಾ ಕರ್ನೇಲಿಯೋ, ಗೀತಾ ವಾಗೆ, ಜ್ಯೋತಿ ಹೆಬ್ಟಾರ್, ಡಾ| ವರ್ಷಾ ಶೈಲೇಶ್ ಸುವರ್ಣ, ಯುವ ಮೋರ್ಚಾದ ವಿಶ್ವಾಸ್ ಅಮೀನ್, ದೀಪಕ್ ಕೋಟ್ಯಾನ್, ಪುರಸಭೆಯ ಸದಸ್ಯರಾದ ಶರೀಫ್, ಪ್ರತಿಮಾ, ಅಶಕ್, ರೆಹಮತ್ ಶೇಖ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ