ಕಾರ್ಕಳ: ಬಳಕೆಯಾಗದ ಕುಡಿಯುವ ನೀರಿನ ಘಟಕಗಳು

ತಾಲೂಕಿನಲ್ಲಿವೆ 11 ಘಟಕಗಳು; ನೀರು ಪಡೆಯುವವರಿಲ್ಲದೆ ಸರಕಾರದ ಹಣ ಪೋಲು

Team Udayavani, Apr 13, 2019, 6:30 AM IST

123

ಕಾರ್ಕಳ: ಪ್ರಾಯೋಗಿಕವಾಗಿ ಚಿಂತಿಸದೆ ಯೋಜನೆ ಅನುಷ್ಠಾನಗೊಳಿಸಿದಲ್ಲಿ ಸರಕಾರದ ಹಣ ಯಾವ ರೀತಿ ಪೋಲಾಗಲಿದೆ ಎನ್ನುವುದಕ್ಕೆ ಕಾರ್ಕಳ ತಾಲೂಕಿನಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳೇ ಉತ್ತಮ ಉದಾಹರಣೆ.

ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ 2017-18ರಲ್ಲಿ ರಾಜ್ಯ ಸರಕಾರ ರಾಜ್ಯಾದ್ಯಂತ ಶುದ್ಧ ಕುಡಿಯುವ ನೀರಿನ ಘಟಕ ತೆರೆಯುವ ಯೋಜನೆ ರೂಪಿಸಿತು. 1 ರೂ.ಗೆ 10 ಲೀಟರ್‌ ನೀರು ನೀಡುವ ಈ ಯೋಜನೆಯ ಅನುಷ್ಠಾನಕ್ಕೆ ಸ್ಥಳಗಳನ್ನು ಗುರುತಿಸಿ ಘಟಕವೊಂದನ್ನು ಸುಮಾರು 7-8 ಲಕ್ಷ ರೂ. ವೆಚ್ಚದಲ್ಲಿ ಹಲವೆಡೆ ನಿರ್ಮಾಣ ಮಾಡಲಾಗಿತ್ತು.

11 ಘಟಕಗಳು
ಕಾರ್ಕಳದಲ್ಲೂ ಇಂತಹ 11 ಘಟಕಗಳನ್ನು ವರ್ಷದ ಹಿಂದೆ ನಿರ್ಮಿಸಲಾಗಿತ್ತು. ಘಟಕ ಸುಸ್ಥಿತಿಯಲ್ಲಿದ್ದು, ಕಾರ್ಯಾರಂಭಿಸಿದ್ದರೂ ಜನರು ಮಾತ್ರ ಘಟಕದತ್ತ ಹೋಗುತ್ತಿಲ್ಲ. ಹೀಗಾಗಿ ಸರಕಾರದ ಹಣ ವ್ಯರ್ಥವಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕಾರ್ಕಳ ಗ್ರಾಮಾಂತರ ಪ್ರದೇಶವಾದ ನಿಟ್ಟೆಯ ಕೆಮ್ಮಣ್ಣು ಹಾಗೂ ಮಿಯ್ನಾರಿನಲ್ಲಿ ಆರ್‌ಡಬ್ಲ್ಯುಎಸ್‌ಆರ್‌ (ರೂರಲ್‌ ವಾಟರ್‌ ಸಪ್ಲೆ„ ಸಬ್‌ ಡಿವಿಜನ್‌) ವತಿಯಿಂದ ಹಾಗೂ ಉಳಿದ 9 ಘಟಕಗಳನ್ನು ಕೆಆರ್‌ಐಡಿಎಲ್‌ (ಕರ್ನಾಟಕ ರೂರಲ್‌ ಇನ್‌ಫ್ರಾಸ್ಟ್ರಕ್ಚರ್‌ ಡೆವೆಲಪ್‌ಮೆಂಟ್‌ ಲಿ.) ವತಿಯಿಂದ ನಿರ್ಮಿಸಲಾಗಿದೆ.

ಮುಡಾರುವಿನ ದಿಡಿಂಬಿರಿ, ಹಿರ್ಗಾನದ ಪಾಲಿಜೆ, ಬೆಳ್ಮಣ್‌ನ ಜಂತ್ರ, ಮುಂಡ್ಕೂರಿನ ಅಲಂಗಾರುಗುಡ್ಡೆ, ನಿಟ್ಟೆಯ ಚೇತನಹಳ್ಳಿ, ಕುಕ್ಕುಂದೂರುವಿನ ಪೊಸನಟ್ಟು, ಚಾರದ ಪುತ್ತುರ್ಕೆ, ಹೆಬ್ರಿಯ ಬಡ ಗುಡ್ಡೆ ಹಾಗೂ ಹೊಸ್ಮಾರು ಪೇಟೆಯಲ್ಲಿ ಘಟಕಗಳಿವೆ. ಘಟಕ ಕೆಟ್ಟು ಹೋದಲ್ಲಿ ಸಂಬಂಧ ಪಟ್ಟವರು ದುರಸ್ತಿ ಕಾರ್ಯ ಮಾಡುವುದಿಲ್ಲ ಎನ್ನುವ ಆರೋಪಗಳಿವೆ. ಆದರೆ, ಕಾರ್ಕಳದಲ್ಲಿ ಅಂತಹ ಪರಿಸ್ಥಿತಿ ಬಂದೊದಗಿಲ್ಲ.

ಆರ್‌ಡಬ್ಲ್ಯುಎಸ್‌ಆರ್‌ ನಿರ್ಮಾಣ ಮಾಡಿದ ಘಟಕವನ್ನು ಸ್ಥಳೀಯ ಆಡಳಿತ ವ್ಯವಸ್ಥೆಗೆ ನೀಡುತ್ತದೆ. ಗ್ರಾಮ ಪಂಚಾಯತ್‌ ನಿರ್ವಹಣೆ ಜವಾಬ್ದಾರಿ ಹೊರುವುದು ಮಾತ್ರವಲ್ಲದೇ ವಿದ್ಯುತ್‌ ಬಿಲ್‌ ಕೂಡ ಭರಿಸಬೇಕಾಗಿದೆ. ಕೆಆರ್‌ ಐಡಿಎಲ್‌ ಘಟಕವನ್ನು 5 ವರ್ಷಗಳ ಕಾಲ ಅವರೇ ನಿರ್ವಹಣೆ ಮಾಡಬೇಕೆಂಬ ನಿಯಮವಿದೆ. ಹೀಗಾಗಿ ಪುರಸಭೆಗೆ ನಿರ್ವಹಣೆ ಹೊಣೆ ಇಲ್ಲದಿದ್ದರೂ ವಿದ್ಯುತ್‌ ಬಿಲ್‌ ಪಾವತಿಸಬೇಕಾಗಿದೆ.

ಪ್ರಯೋಜನ ಪಡೆಯಿರಿ
ಕಾರ್ಕಳ ತಾಲೂಕಿನಲ್ಲಿ ಒಟ್ಟು 11 ಘಟಕಗಳು ನಿರ್ಮಾಣಗೊಂಡಿದ್ದು ಜನತೆ ಘಟಕದ ಪ್ರಯೋಜನ ಪಡೆದುಕೊಳ್ಳಬೇಕು. ಸಾರ್ವಜನಿಕರ ಸಹಭಾಗಿತ್ವ ವಿಲ್ಲದೆ ಸರಕಾರದ ಯೋಜನೆ ಯಶಸ್ವಿಯಾಗಲು ಸಾಧ್ಯವಿಲ್ಲ.
-ಶ್ರೀಧರ್‌ ನಾಯಕ್‌,
ಪ್ರ.ಸ.ಕಾ.ನಿ. ಎಂಜಿನಿಯರ್‌, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಕಾರ್ಕಳ

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.