ಹಂಪಿ ಮಾದರಿಯಲ್ಲೇ ಕಾರ್ಕಳ ಉತ್ಸವಕ್ಕೆ ಸಕಲ ಸಿದ್ಧತೆ

 70 ಕಿ.ಮೀ. ವ್ಯಾಪ್ತಿ ಯಲ್ಲಿ 1.20 ಲಕ್ಷ ವಿದ್ಯುತ್‌ ದೀಪ ಅಳ ವಡಿಕೆ

Team Udayavani, Mar 8, 2022, 1:10 PM IST

ಹಂಪಿ ಮಾದರಿಯಲ್ಲೇ ಕಾರ್ಕಳ ಉತ್ಸವಕ್ಕೆ ಸಕಲ ಸಿದ್ಧತೆ

ಕಾರ್ಕಳ : ಕಾರ್ಕಳ ಉತ್ಸವ ಅಧಿಕೃತ ಆರಂಭಕ್ಕೆ ಇನ್ನು ಮೂರು ದಿನಗಳಷ್ಟೇ ಬಾಕಿಯಿವೆೆ. ಸಿದ್ಧತೆ ಅಂತಿಮ ಹಂತಕ್ಕೆ ತಲುಪಿದ್ದು, ಕಾರ್ಕಳ ಉತ್ಸವಕ್ಕೆ ಮದುವಣಗಿತ್ತಿಯಂತೆ ಕಾರ್ಕಳ ಸಿಂಗಾರಗೊಳ್ಳುತ್ತಿದೆ. ತಾಲೂಕಿನಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಂಪಿ ಮಾದರಿಯಲ್ಲೇ ಸಕಲ ಸಿದ್ಧತೆಗಳಾಗುತ್ತಿವೆ.

ಉತ್ಸವ ಹಿನ್ನೆಲೆಯಲ್ಲಿ ನಗರವನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸ ಲಾಗುತ್ತಿದೆ. ಮೈಸೂರಿನ ಚೆಸ್ಕಾಂ ವಿಭಾಗದ 170 ಕಾರ್ಮಿಕರು ಅಳವಡಿಕೆ ಕಾರ್ಯ ನಡೆಸುತ್ತಿದ್ದಾರೆ. 70 ಕಿ.ಮೀ. ವ್ಯಾಪ್ತಿಯಲ್ಲಿ 1.20 ಲಕ್ಷ ವಿದ್ಯುತ್‌ ದೀಪಗಳು ಅಳವಡಿಕೆಯಾಗಲಿದೆ. ಇದಲ್ಲದೆ ಮನೆ, ಕಟ್ಟಡ, ಕಚೇರಿಗಳು ವಿವಿಧ ಬಣ್ಣಗಳ ವಿದ್ಯುತ್‌ ದೀಪಗಳಿಂದ ಅಲಂಕೃತಗೊಳ್ಳಲಿದೆ.

ವರ್ಲಿ ಚಿತ್ರದ ಮೆರುಗು
ಉತ್ಸವಕ್ಕೆ ಅಲ್ಲಲ್ಲಿ ಬಣ್ಣ ಬಳಿದು ಶೃಂಗರಿಸುವ ಕೆಲಸ ನಡೆಯುತ್ತಿದೆ. ರಸ್ತೆಗಳ ಡಿವೈಡರ್‌, ಗೋಡೆಗಳಲ್ಲಿ ವರ್ಲಿ ಚಿತ್ರದ ಚಿತ್ತಾರ ಮೂಡುತ್ತಿದೆ. ಸ್ವರಾಜ್‌ ಮೈದಾನದಲ್ಲಿ ವೇದಿಕೆ, ಮಳಿಗೆಗಳು ಅತ್ಯಾಕರ್ಷಕವಾಗಿ ನಿರ್ಮಾಣಗೊಳ್ಳುತ್ತಿವೆ. ಈ ಬಾರಿ ವಿಶೇಷ ಗಮನ ಸೆಳೆಯುತ್ತಿರುವ ಹೆಲಿಕಾಪ್ಟರ್‌ ವಿಹಾರಕ್ಕಾಗಿ ತಾಲೂಕು ಮೈದಾನದಲ್ಲಿ ಹೆಲಿಪ್ಯಾಡ್‌ ನಿರ್ಮಾಣ ಕಾರ್ಯ ನಡೆಯುತ್ತಿದೆ.

ನಿರಂತರ ಸಾಂಸ್ಕೃತಿಕ ಸವಿ
ಮಾ.10ರಂದು ಕಾರ್ಕಳ ಉತ್ಸವವು ಕೋಟಿ ಚೆನ್ನಯ ಥೀಂ ಪಾರ್ಕ್‌ ಆವರಣದಲ್ಲಿ ಯಕ್ಷ ರಂಗಾಯಣಕ್ಕೆ ಭೂಮಿ ಪೂಜೆ ನಡೆಯುವ ಮೂಲಕ ಉದ್ಘಾಟನೆಯಾಗಲಿದೆ. ಬಳಿಕ ನಿರಂತರ ಸ್ವರಾಜ್‌ ಮೈದಾನ, ಗಾಂಧಿ ಮೈದಾನದಲ್ಲಿ ಕಲೆ ಸಾಹಿತ್ಯ ಸಂಸ್ಕೃತಿ ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ. ಕಾರ್ಕಳ ಉತ್ಸವದೊಂದಿಗೆ ಕನ್ನಡ ಸಾಹಿತ್ಯದ ಚಿಂತನೆಗಳ ವಿಚಾರ ಸಂಕಿರಣ, ಉತ್ಸವ ಚಲನ ಚಿತ್ರೋತ್ಸವ, ಕರಕುಶಲ ವಸ್ತು ಪ್ರದರ್ಶನ, ನೂರಾರು ಮಳಿಗೆಗಳಲ್ಲಿ ನಡೆಯಲಿದೆ. ಚಿತ್ರ ಸಂತೆ, ಆಹಾರೋತ್ಸವ, ಗಾಳಿಪಟ ಉತ್ಸವ ಹಾಗೂ ಶ್ವಾನ ಪ್ರದರ್ಶನ ಇರಲಿದೆ. ಗೂಡುದೀಪ ಉತ್ಸವ ಹಾಗೂ ಮಾ. 18ರಿಂದ 20ರ ವರೆಗೆ ಬಸ್‌ ನಿಲ್ದಾಣ-ಆನೆಕೆರೆ- ಜೋಡುರಸ್ತೆ ಉಪ ವೇದಿಕೆಗಳಲ್ಲಿ ನಾಗಪುರ ಮತ್ತು ತಂಜಾವೂರು ಕೇಂದ್ರಗಳ ಹೊರರಾಜ್ಯದ ಕಲಾವಿದರಿಂದ ಜಾನಪದ ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆೆ.

ಇದನ್ನೂ ಓದಿ : ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಜಯ ಖಚಿತ: ಸಿಎಂ ಬೊಮ್ಮಾಯಿ ವಿಶ್ವಾಸ

ಬ್ಯಾನರ್‌ ಅಬ್ಬರ!
ತಾಲೂಕು ಹಾಗೂ ಹೊರಭಾಗದಲ್ಲಿ ಭರ್ಜರಿ ಪ್ರಚಾರ ನಡೆದಿದ್ದು ತಾಲೂಕಿನ ಪ್ರತೀ ಮನೆಗೂ ಆಮಂತ್ರಣ ತಲುಪಿಸುವ ಅಭಿಯಾನ ನಡೆಯುತ್ತಿದೆ. ತಾಲೂಕಿನಲ್ಲಿ ಬ್ಯಾನರ್‌ ಅಬ್ಬರ ಹೆಚ್ಚಾಗಿದ್ದು ಎಲ್ಲೆಲ್ಲೂ ಬ್ಯಾನರ್‌ ರಾರಾಜಿಸುತ್ತಿದೆ. ವಿಶೇಷವಾಗಿ ಪ್ರಮುಖ ಕಡೆಗಳಲ್ಲಿ ರಸ್ತೆಗಳಲ್ಲಿ ದ್ವಾರಗಳನ್ನು ನಿರ್ಮಿಸಲಾಗಿದೆ. ಕಾರ್ಕಳ ತಾಲೂಕಿನಲ್ಲಿ ಸಂಪೂರ್ಣ ಹಬ್ಬದ ವಾತಾವರಣ ಸೃಷ್ಟಿಗೊಂಡಿದ್ದು. ಹತ್ತು ದಿನಗಳಲ್ಲಿ ನಾಡಿನ ವಿವಿಧ ಗಣ್ಯರು ಕೂಡ ಕಾರ್ಕಳಕ್ಕೆ ಆಗಮಿಸುತ್ತಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.