ಕಾರ್ಕಳ: 52 ಸರಕಾರಿ ಶಾಲೆಗಳಲ್ಲಿ ದೈಹಿಕ ಶಿ. ಶಿಕ್ಷಕರೇ ಇಲ್ಲ !

ಶಿಕ್ಷಕರೇ ಇಲ್ಲದೆ ಕ್ರೀಡೆಯಲ್ಲಿ ಹಿನ್ನಡೆ; ಶಿಕ್ಷಕರ ಕಡ್ಡಾಯ ನೇಮಕಕ್ಕೆ ಆಗ್ರಹ

Team Udayavani, Jun 26, 2019, 5:35 AM IST

pt-teacher

ಬೆಳ್ಮಣ್‌: ಹಲವು ರಂಗಗಳಲ್ಲಿ ನಾವು ಮುಂದುವರಿಯುತ್ತಿದ್ದರೂ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಫ‌ಲಿತಾಂಶ ಸಾಧ್ಯವಾಗಿಲ್ಲ. ಇದಕ್ಕೆ ಕಾರಣ ಪ್ರಾಥಮಿಕ ಹಂತದಲ್ಲೇ ಪ್ರತಿಭೆಗಳನ್ನು ಗುರುತಿಸುವ, ತರಬೇತಿ ನೀಡುವ ಕೊರತೆ. ಗ್ರಾಮೀಣ ಪ್ರದೇಶದಲ್ಲಂತೂ ಕ್ರೀಡಾ ಶಿಕ್ಷಕರೂ ಇಲ್ಲದೆ ಗ್ರಾಮೀಣ ಪ್ರತಿಭೆಗಳು ಮಂಕಾಗುತ್ತಿವೆ.

ಕಾರ್ಕಳ ತಾಲೂಕಿನಲ್ಲಿ ಒಟ್ಟು 85 ಸರಕಾರಿ ಪ್ರಾಥಮಿಕ ಶಾಲೆಗಳಿದ್ದು 33 ಶಾಲೆಗಳಲ್ಲಿ ದೈಹಿಕ ಶಿಕ್ಷಕರಿದ್ದರೆ, ಉಳಿದ 52 ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರೇ ಇಲ್ಲ. ಅಷ್ಟೇ ಅಲ್ಲ ಸಾಮಾನ್ಯ ಶಿಕ್ಷಕರೇ ಮೈದಾನದಲ್ಲೂ ಮಕ್ಕಳ ಆಟೋಟ ಚಟುವಟಿಕೆಗಳನ್ನು ನಿರ್ವಹಿಸಬೇಕಾಗಿದೆ.

ದೈ.ಶಿ. ಶಿಕ್ಷಕರೂ ಪಾಠ ಮಾಡಬೇಕು!
ದೈ. ಶಿ. ಶಿಕ್ಷಕರು ಇಲ್ಲದ ಶಾಲೆಗಳದ್ದು ಒಂದು ಕಥೆಯಾದರೆ, ದೈ. ಶಿ. ಶಿಕ್ಷಕರು ಇರುವ ಶಾಲೆಗಳ ಕಥೆ ವಿಭಿನ್ನ. ಕೆಲವೆಡೆ ಶಿಕ್ಷಕರ ಕೊರತೆ ಬಾಧಿಸುತ್ತಿರುವುದರಿಂದ ಅವರು ಪಾಠವನ್ನೂ ಮಾಡಬೇಕಿದೆ. ಶಾಲೆ ಒಳಗೆ ಮತ್ತು ಹೊರಗೂ ಅವರು ತೊಡಗಿಸಿಕೊಳ್ಳಬೇಕಾದ ಅನಿವಾರ್ಯವಿದೆ.

ಸರಕಾರದ ಧೋರಣೆಯಿಂದ ಸಮಸ್ಯೆ
ಶಿಕ್ಷಕರ ಕೊರತೆ ಇರುವ ಶಾಲೆಗಳಲ್ಲಿ ದೈ. ಶಿ. ಶಿಕ್ಷಕರನ್ನು ಸರಕಾರ ಹೆಚ್ಚುವರಿ ಶಿಕ್ಷಕರೆಂದು ಕಳೆದ ವರ್ಷ ಗುರುತಿಸಲು ಶುರು ಮಾಡಿತ್ತು. ಆದರೆ ದೈ. ಶಿ. ಶಿಕ್ಷಕರ ಅಗತ್ಯ ಮನವರಿಕೆಯಾದ ಬಳಿಕ ಆ ಪ್ರಕ್ರಿಯೆ ಕೈಬಿಡಲಾಗಿತ್ತು. ಇನ್ನು, 200 ವಿದ್ಯಾರ್ಥಿಗಳಿಗಿಂತ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳಿಗೆ ದೈ. ಶಿ. ಶಿಕ್ಷಕರ ನೇಮಕಾತಿ ಇಲ್ಲ ಎಂಬ ಮಸೂದೆ ಮಾಡಿದ್ದರೂ ಕಳೆದ ವರ್ಷ ಸರಕಾರಿ ಶಾಲೆಗಳಲ್ಲಿ ದೈ.ಶಿ. ಶಿಕ್ಷಕರಿರಬೇಕೆಂಬ ಮೌಖೀಕ ಆದೇಶವನ್ನು ಶಿಕ್ಷಣ ಇಲಾಖೆ ಹೊರಡಿಸಿತ್ತು. ಇನ್ನು ಕೆಲವು ಶಾಲೆಗಳಲ್ಲಿ 200ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದು ಅಲ್ಲಿ ದೈಹಿಕ ಶಿ. ಶಿಕ್ಷಕರು ವಯೋ ನಿವೃತ್ತಿ ಹೊಂದಿದರೂ ಮತ್ತೆ ಆ ಸ್ಥಾನವನ್ನು ಉಳಿಸಲಾಗುತ್ತಿಲ್ಲ.

ನೇಮಕಾತಿಯಾದರೆ ಉತ್ತಮ
ಕಾರ್ಕಳದ 52 ಪ್ರಾ. ಶಾಲೆಗಳಲ್ಲಿ ದೈ. ಶಿ. ಶಿಕ್ಷಕರಿಲ್ಲ. ಶಿಕ್ಷಕರ ಕೊರತೆ ಇರುವ ಶಾಲೆಗಳಲ್ಲಿ ಪಾಠ ಬೋಧಿಸುವ ಹೊರೆಯಿದೆ. ಎಲ್ಲ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಯಾದರೆ ಉತ್ತಮ. ಇದರಿಂದ ಕ್ರೀಡೆಯನ್ನೂ ಪ್ರೋತ್ಸಾಹಿಸಿದಂತಾಗುತ್ತದೆ.
-ಆನಂದ ಪೂಜಾರಿ, ಅಧ್ಯಕ್ಷರು, ಕಾರ್ಕಳ ತಾ. ದೈ. ಶಿ. ಶಿಕ್ಷಕರ ಸಂಘ

ಕಡ್ಡಾಯ ನೇಮಕ
ಗ್ರಾಮೀಣ ಸರಕಾರಿ ಶಾಲೆಗಳಲ್ಲಿ ಕ್ರೀಡಾಸಕ್ತ ವಿದ್ಯಾರ್ಥಿಗಳು ಇರುತ್ತಾರೆ. ಇವರಿಗೆ ಉತ್ತಮ ತರಬೇತಿ ನೀಡಿದರೆ, ಉನ್ನತ ಮಟ್ಟಕ್ಕೇರಬಹುದು. ಆದ್ದರಿಂದ ಶಾಲೆಗಳಲ್ಲಿ ದೈ. ಶಿ. ಶಿಕ್ಷಕರ ಅನಿವಾರ್ಯತೆ ಇದೆ. ಕಾರ್ಕಳ ತಾ. ನ ವಿದ್ಯಾರ್ಥಿಗಳು ಈಗಾಗಲೇ ಕ್ರೀಡಾರಂಗದಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೇರಿದ್ದಾರೆ. ಆದ್ದರಿಂದ ಸರಕಾರ ಪ್ರಾ. ಶಾಲೆಗಳಿಗೆ ಕಡ್ಡಾಯವಾಗಿ ಶಿಕ್ಷಕರನ್ನು ನೇಮಿಸಬೇಕಿದೆ.
-ಸಿದ್ದಪ್ಪ, ತಾ. ದೈ.ಶಿ. ಪರಿವೀಕ್ಷಣಾಧಿಕಾರಿ ಕಾರ್ಕಳ

– ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.