ಉಡುಪಿ: ಈಡೇರಿಕೆಗೆ ಕಾದಿವೆ ಹತ್ತು ಹಲವು


Team Udayavani, Apr 20, 2018, 8:20 AM IST

Namma-Pranalike-600.jpg

ತುಳು ಮತ್ತು ಕನ್ನಡ ಭಾಷಿಕ ಸಂಸ್ಕೃತಿಗಳ ಸಂಗಮ ಸ್ಥಾನ ಉಡುಪಿ ವಿಧಾನಸಭಾ ಕ್ಷೇತ್ರ ರಾಜ್ಯದ ಶೈಕ್ಷಣಿಕ, ಆರೋಗ್ಯ, ಔದ್ಯಮಿಕ ರಂಗಗಳಲ್ಲಿ ಗಮನಾರ್ಹ ಸ್ಥಾನವನ್ನು ಹೊಂದಿದೆ. ಪ್ರವಾಸೋದ್ಯಮ ಈ ಭಾಗದಲ್ಲಿ ಅಭಿವೃದ್ಧಿಯ ಸರ್ವ ಅವಕಾಶಗಳನ್ನು ಹೊಂದಿರುವ ಕ್ಷೇತ್ರ. ಉಡುಪಿ ವಿಧಾನಸಭಾ ಕ್ಷೇತ್ರ ನಗರದ ಕೇಂದ್ರವನ್ನೇ ಬಹ್ವಂಶ ಹೊಂದಿದ್ದು, ಇಲ್ಲಿಯ ಬೇಡಿಕೆಗಳು ಹತ್ತು ಹಲವು.

1. ಕುಡಿಯುವ ನೀರು
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಮಾನ್ಯ. ವಾರಾಹಿಯ ನೀರು ತರುವ ಯೋಜನೆ ಕಾರ್ಯಗತಗೊಂಡರೆ ಸಮಸ್ಯೆ ಬಗೆಹರಿದೀತು ಎಂಬ ನಿರೀಕ್ಷೆ ಇದೆ. ಗ್ರಾಮಾಂತರದಲ್ಲಿ ಬಹುಗ್ರಾಮ ನೀರಿನ ಯೋಜನೆ ಬೇಡಿಕೆ ಬಹುಕಾಲದ್ದು.

2. ಮರಳುಗಾರಿಕೆ
ಮರಳುಗಾರಿಕೆಯ ಗೊಂದಲದಿಂದಾಗಿ ಬೆಲೆ ಏರಿಕೆಯನ್ನು ನಿಯಂತ್ರಿಸುವುದು ಸವಾಲು. ಪ್ರತ್ಯೇಕ ಮರಳು ನೀತಿ ಜಾರಿಗೆ ಬಂದರೆ ಮರಳು ಸಮಸ್ಯೆಗೆ ಮುಕ್ತಿ ದೊರೆತೀತು. ನಿರ್ಮಾಣ ಚಟುವಟಿಕೆಗಳು ಹೆಚ್ಚಾಗಬಹುದು. 

3. ಶಿಕ್ಷಣ
ಉಡುಪಿಯಲ್ಲಿ ಸರಕಾರಿ ವೈದ್ಯ ಕಾಲೇಜು ಎಂಜಿನಿಯರಿಂಗ್‌ ಕಾಲೇಜು ಆರಂಭಿಸಬೇಕು ಎಂಬ ಬೇಡಿಕೆ ಈಡೇರಿಲ್ಲ. ಸರಕಾರಿ ವೃತ್ತಿಪರ ಕಾಲೇಜುಗಳು ಕೂಡ ಇದ್ದರೆ ಬಡವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ.

4. ಒಳಚರಂಡಿ
ನಗರಸಭೆ ವ್ಯಾಪ್ತಿ ಮತ್ತು ಹೊರವಲಯದಲ್ಲಿ ಒಳಚರಂಡಿ ಕಾಮಗಾರಿ ನಡೆದಿಲ್ಲ. ಈ ಹಿಂದಿನ ಸಂಪರ್ಕಗಳ ಸಾಮರ್ಥ್ಯ ಸಾಕಾಗುತ್ತಿಲ್ಲ. ಹಾಗಾಗಿ ಕೊಳಚೆ ನೀರು ಸಾರ್ವಜನಿಕ ರಸ್ತೆ, ಹೊಳೆ, ಬಾವಿಗಳಿಗೆ ಹರಿದು ಹೋಗುತ್ತದೆ.

5. ಬಂದರು ಅಭಿವೃದ್ಧಿ
ಸರ್ವಋತು ಮಲ್ಪೆ ಬಂದರಿನಲ್ಲಿ ದೋಣಿಗಳಿಗೆ ತಂಗಲು ಸಾಕಷ್ಟು ಜಾಗವಿಲ್ಲ. 4ನೇ ಹಂತದ ಅಭಿವೃದ್ಧಿ ಕಾಮಗಾರಿ ಪ್ರಸ್ತಾವನೆ ಕಳುಹಿಸಲಾಗಿದೆ. ಅದು ಕಾರ್ಯಗತಗೊಂಡರೆ ಮೀನುಗಾರಿಕಾ ಚಟುವಟಿಕೆ ವೃದ್ಧಿಯಾಗಲು ಸಾಧ್ಯವಿದೆ.

6. ಜಿಲ್ಲಾ ರಂಗಮಂದಿರ
ಉಡುಪಿ ಹೆಚ್ಚು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿದ್ದೂ ಜಿಲ್ಲಾ ರಂಗಮಂದಿರ ಇಲ್ಲಿಲ್ಲ. ಪುರಭವನವನ್ನು ಖಾಸಗಿಯವರಿಗೆ ವಹಿಸಿರುವುದರಿಂದ ದುಬಾರಿಯಾಗಿದೆ. ರಂಗಮಂದಿರ ನಿರ್ಮಾಣಕ್ಕೆ ಸರಕಾರಗಳು ಆಸ್ಥೆ ವಹಿಸಿಲ್ಲ.

7. ಮಲ್ಪೆ ರಸ್ತೆ ವಿಸ್ತರಣೆ
ಕರಾವಳಿ ಬೈಪಾಸ್‌ನಿಂದ ಮಲ್ಪೆವರೆಗಿನ 4 ಕಿ.ಮೀ. ರಸ್ತೆ ವಿಸ್ತರಿಸುವ ಬೇಡಿಕೆ ಹಾಗೆಯೇ ಇದೆ. ಈ ರಸ್ತೆ ಮಲ್ಪೆ-ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಣೆಯಾದ ಅನಂತರ ಈ ರಸ್ತೆಯ ವಿಸ್ತರಣೆ ಯೋಜನೆಗೆ ಹಿನ್ನಡೆಯಾಗಿದೆ.

8. ಗ್ರಾಮೀಣ ಸಾರಿಗೆ
ಮತ್ತಷ್ಟು ಸರಕಾರಿ ಬಸ್‌ಗಳನ್ನು ಗ್ರಾಮಾಂತರ ಭಾಗಗಳಲ್ಲಿ ಓಡಿಸಬೇಕು. ಸರಕಾರಿ ಬಸ್‌ಗಳ ಸೌಲಭ್ಯ ವಿಶೇಷವಾಗಿ ಈ ಭಾಗದ ಹಿರಿಯ ನಾಗರಿಕರು, ವಿದ್ಯಾರ್ಥಿಗಳಿಗೂ ದೊರೆಯಬೇಕು ಎಂಬ ಬೇಡಿಕೆ ಜನತೆಯದ್ದು.

9. ಜಿಲ್ಲಾಸ್ಪತ್ರೆ
ಅಜ್ಜರಕಾಡು ಸರಕಾರಿ ಆಸ್ಪತ್ರೆ ಜಿಲ್ಲಾಸ್ಪತ್ರೆ ಯಾಗಿ ಮೇಲ್ದರ್ಜೆಗೇರಿದ್ದರೂ ಅಗತ್ಯ ಸೌಲಭ್ಯಗಳಿಲ್ಲ. ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತ ಸರಕಾರಿ ಆಸ್ಪತ್ರೆ ಇದ್ದರೆ ಇದರ ಹೆಚ್ಚಿನ ಲಾಭ ಉಡುಪಿ ಕ್ಷೇತ್ರದ ಸಾಮಾನ್ಯರಿಗೆ ದೊರೆತಂತಾಗುತ್ತದೆ.

10. ಸಂಚಾರ ದಟ್ಟಣೆ
ಸುಗಮ ರಸ್ತೆ ಸಂಚಾರಕ್ಕೆ ಬೇಕಾದ ಸೌಲಭ್ಯ ಒದಗಿಸಬೇಕು. ಪಾದಚಾರಿಗಳಿಗೆ ಮಾರ್ಗ, ರಸ್ತೆ ದಾಟಲು ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎನ್ನುವ ಬೇಡಿಕೆ ಇದೆ. ಸುವ್ಯವಸ್ಥಿತ ಸರಕಾರಿ ಬಸ್‌ ನಿಲ್ದಾಣ ನಿರ್ಮಾಣಗೊಂಡಿಲ್ಲ. 

11. ಪರಿಸರ ಪೂರಕ ಉದ್ದಿಮೆ
ಪರಿಸರ ಪೂರಕ ಉದ್ಯಮಗಳನ್ನು, ಮುಖ್ಯವಾಗಿ ಮಾಹಿತಿ ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಿ ಉದ್ಯೋಗ ಬೇಡಿಕೆಯನ್ನು ಈಡೇರಿಸುವತ್ತ ಇದುವರೆಗೆ ಗಮನಹರಿಸಿಲ್ಲ. ಹಾಗಾಗಿ ಈಗ  ಈ ಬೇಡಿಕೆ ಮಹತ್ವ ಪಡೆದುಕೊಂಡಿದೆ.

12. ಹಕ್ಕುಪತ್ರ
ಡೀಮ್ಡ್ ಫಾರೆಸ್ಟ್‌ನಿಂದಾಗಿ ಹಕ್ಕುಪತ್ರ ವಂಚಿತರಾದವರು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿಯೂ ಇದ್ದಾರೆ. ಡೀಮ್ಡ್ ಫಾರೆಸ್ಟ್‌ ಸಮಸ್ಯೆಗೆ ಪರಿಹಾರ ಕಂಡುಕೊಂಡರೆ ಹಲವರಿಗೆ ಹಕ್ಕುಪತ್ರ ದೊರೆಯಲಿದೆ. 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.