ಉಡುಪಿ: ಐದು ಕ್ಷೇತ್ರಗಳ ಮತ ಎಣಿಕೆ ಬೆಳಗ್ಗೆ 8ರಿಂದ ಆರಂಭ: ಜಿಲ್ಲಾಧಿಕಾರಿ ಕೂರ್ಮಾ ರಾವ್
ಸೈಂಟ್ ಸಿಸಿಲೀಸ್ ಶಾಲೆಯಲ್ಲಿ ಮತ ಎಣಿಕೆ
Team Udayavani, May 13, 2023, 6:44 AM IST
ಉಡುಪಿ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಶನಿವಾರ ಬೆಳಗ್ಗೆ 8ರಿಂದ ಉಡುಪಿಯ ಸೈಂಟ್ ಸಿಸಿಲೀಸ್ ಶಾಲೆಯಲ್ಲಿ ನಡೆಯಲಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆದು, ಅನಂತರ ಇವಿಎಂ ಮತಗಳ ಎಣಿಕೆಯಾಗಲಿದೆ. ಇದಕ್ಕಾಗಿ ಪ್ರತಿ ಕ್ಷೇತ್ರಕ್ಕೂ ಪ್ರತ್ಯೇಕ ಟೇಬಲ್ ವ್ಯವಸ್ಥೆ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ತಿಳಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಕ್ಷೇತ್ರದ ಅಂಚೆ ಮತಗಳ ಎಣಿಕೆಗೆ ಪ್ರತ್ಯೇಕ ತಲಾ 4 ಟೇಬಲ್ ಹಾಗೂ ಇವಿಎಂ ಮತ ಎಣಿಕೆಗೆ ತಲಾ 14 ಟೇಬಲ್ಗಳನ್ನು ಒದಗಿಸಲಾಗಿದೆ. ಬೈಂದೂರು ಕ್ಷೇತ್ರದ ಮತ ಎಣಿಕೆ 18 ಸುತ್ತಿನಲ್ಲಿ ನಡೆದರೆ, ಕುಂದಾಪುರ 16, ಉಡುಪಿ 17 ಹಾಗೂ ಕಾಪು ಮತ್ತು ಕಾರ್ಕಳ ತಲಾ 15 ಸುತ್ತಿನಲ್ಲಿ ನಡೆಯಲಿದೆ. ಇದಕ್ಕಾಗಿ 375 ಅಧಿಕಾರಿ ಹಾಗೂ ಸಿಬಂದಿ ನಿಯೋಜಿಸಲಾಗಿದೆ ಎಂದರು.
ಮೊಬೈಲ್ ನಿಷಿದ್ಧ
ಎಣಿಕೆ ಕೇಂದ್ರದಲ್ಲಿ ಚುನಾವಣಾ ಧಿಕಾರಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಮೊಬೈಲ್ ಸಹಿತ ಯಾವುದೇ ಎಲೆಕ್ಟ್ರಾನಿಕ್ಉಪಕರಣ ಬಳಕೆಗೆ ಅವಕಾಶ ಇಲ್ಲ. ಮೊಬೈಲ್ಗಳನ್ನು ತಪಾಸಣೆ ವೇಳೆಯೆ ನೀಡಬೇಕು. ಮತ ಎಣಿಕೆ ಪರಿಶೀಲನೆಗೆ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಮೇಜಿಗೆ ತಲಾ ಒಬ್ಬರು ಏಜೆಂಟರನ್ನು ನೇಮಿಸಿ ಕೊಳ್ಳಬಹುದು. ಎಲ್ಲ ಕಡೆಗ ಳಲ್ಲೂ ಸಿಸಿಟಿವಿ ಅಳವಡಿಸಲಾಗಿದೆ ಎಂದರು. ಭದ್ರತೆ ದೃಷ್ಟಿಯಿಂದ ಪೊಲೀಸ್ ಕಂಟ್ರೋಲ್ ರೂಂ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಚುನಾವಣಾಧಿಕಾರಿಯಿಂದ ನೀಡಲಾದ ಅಧಿಕೃತ ಗುರುತಿನ ಚೀಟಿ ಇದ್ದಲ್ಲಿ ಮಾತ್ರ ಪ್ರವೇಶ. ಮೊಬೈಲ್, ಬೀಡಿ, ಸಿಗರೇಟ್, ಬೆಂಕಿಪೊಟ್ಟಣ, ಕತ್ತರಿ, ಬ್ಲೇಡ್, ಸಿಗಾರ್ಲೈಟ್ಗಳನ್ನು ಕೊಂಡೊಯ್ಯುವಂತಿಲ್ಲ. ಎಣಿಕೆ ಕೇಂದ್ರದ 100 ಮೀಟರ್ ಸುತ್ತಲೂ ವಾಹನ ಸಂಚಾರ ರಹಿತ ಪಾದಚಾರಿಗಳ ವಲಯ ಎಂದು ಗುರುತಿಸಲಾಗಿದೆ ಎಂದರು.
ಫಲಿತಾಂಶ ಘೋಷಣೆ ವ್ಯವಸ್ಥೆ
ಎಣಿಕೆ ಕೇಂದ್ರದ ಪ್ರತಿ ಕೊಠಡಿಯಲ್ಲಿ ಪ್ರತಿ ಸುತ್ತಿನ ಎಣಿಕೆ ಮುಗಿದ ಕೂಡಲೇ ಕ್ಷೇತ್ರವಾರು ಅಭ್ಯರ್ಥಿಗಳು ಗಳಿಸಿದ ಮತಗಳ ವಿವರಗಳನ್ನು ಚುನಾವಣಾಧಿಕಾರಿ ಹಾಗೂ ಚುನಾವಣ ವೀಕ್ಷಕರ ಅನುಮೋದನೆ ಯೊಂದಿಗೆ ಕೊಠಡಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುತ್ತದೆ. ಐದು ಕ್ಷೇತ್ರದಿಂದ ಪ್ರತಿ ಸುತ್ತಿನಲ್ಲಿ ಅಭ್ಯರ್ಥಿಗಳು ಗಳಿಸಿದ ಮತಗಳ ವಿವರವನ್ನು ಧ್ವನಿವರ್ಧಕದ ಮೂಲಕ ಘೋಷಿಸಲಾಗುತ್ತದೆ ಎಂದರು.
ಎಸ್ಪಿ ಹಾಕೇ ಅಕ್ಷಯ್ ಮಚ್ಚೀ ಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ