ಆನೆಗುಡ್ಡೆ ದೇವಸ್ಥಾನ: ಕಾರ್ತಿಕ ದೀಪೋತ್ಸವ
Team Udayavani, Nov 28, 2018, 1:45 AM IST
ತೆಕ್ಕಟ್ಟೆ: ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಕಾರ್ತಿಕ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ಪೂರ್ವಾಹ್ನ ಸಹಸ್ರ ನಾಳಿಕೇರ ಗಣಯಾಗ ಹಾಗೂ ಶ್ರೀ ದೇವರಿಗೆ ವಿಶೇಷ ಪೂಜೆ, ವೈಭವದ ರಜತ ರಥೋತ್ಸವ ಸಹಿತ ದೀಪೋತ್ಸವ ನ. 26ರಂದು ಸಂಭ್ರಮದಿಂದ ಜರಗಿತು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಾರ್ಕಳದ ಹಂಡೆ ಪ್ರತಿಷ್ಠಾನದ ರುಕ್ಮಿಣಿ ಹಂಡೆ ಅವರಿಂದ ಹರಿಕಥೆ, ಕೃಷ್ಣಲೀಲೆ ಹಾಗೂ ಸುಡುಮದ್ದು ಪ್ರದರ್ಶನಗೊಂಡಿತು. ಹಾಗೂ ರಾತ್ರಿ ಕಮಲಶಿಲೆ ಮೇಳದವರಿಂದ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ದೇಗುಲದ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ. ಸೂರ್ಯನಾರಾಯಣ ಉಪಾಧ್ಯಾಯ, ದೇಗುಲದ ಮ್ಯಾನೇಜರ್ ಆನಂದರಾಮ ಉರಾಳ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ