ಕಟಪಾಡಿ : ತ್ಯಾಜ್ಯದ ರಾಶಿ; ಸಾಂಕ್ರಾಮಿಕ ರೋಗದ ಭೀತಿ!

ಶೀಘ್ರ ವಿಲೇವಾರಿಗೆ ಸಾರ್ವಜನಿಕರ ಆಗ್ರಹ

Team Udayavani, Jul 16, 2019, 5:24 AM IST

1507KPT2E-3

ಕಟಪಾಡಿ: ಕಟಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಎಲ್ಲೆಲ್ಲೂ ತ್ಯಾಜ್ಯದ ರಾಶಿಯು ಕಂಡು ಬರುತ್ತಿದ್ದು ಈ ಬಾರಿಯ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗುವ ಸಾಧ್ಯತೆ ಇದೆ.

ಪ್ರಮುಖವಾಗಿ ರಾ.ಹೆ. 66ರ ಸರ್ವಿಸ್‌ ರಸ್ತೆಗಳ ಪಕ್ಕದಲ್ಲಿ ಜನವಸತಿ ಪ್ರದೇಶ ಮತ್ತು ಜನ ಸಂಚಾರದ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಸುರಿಯಲಾಗಿದೆ. ಎಸ್‌.ವಿ.ಎಸ್‌. ಶಾಲೆಯ ಆವರಣಗೋಡೆಯ ಹೊರಭಾಗದಲ್ಲಿ ತ್ಯಾಜ್ಯ ಸುರಿಯಲಾಗಿದ್ದು, ಇದು ಶಾಲಾ ಮಕ್ಕಳು ಸಹಿತ ಅಧಿಕ ಸಂಖ್ಯೆಯಲ್ಲಿ ಓಡಾಡುವ ಪ್ರದೇಶವಾಗಿದೆ. ಮಣಿಪುರ ರಸ್ತೆಯಲ್ಲಿನ ರೈಲ್ವೇ ಮೇಲ್ಸೇತುವೆ ಭಾಗದ ಇಕ್ಕೆಲಗಳಲ್ಲಿ ಗೋಣಿಗಳಲ್ಲಿ ತಂದು ತ್ಯಾಜ್ಯ ಹಾಕುತ್ತಿದ್ದು, ಸರಕಾರಿ ಗುಡ್ಡೆ ಸಂಪರ್ಕದ ರೈಲ್ವೇ ಕ್ರಾಸಿಂಗ್‌ ಬಳಿ, ಜನವಸತಿ ಕಾಲನಿ ಹತ್ತಿರ ತ್ಯಾಜ್ಯಗಳ ರಾಶಿ ತಯಾರಾಗುತ್ತಿದೆ.

ಕಟಪಾಡಿ -ಶಿರ್ವ ಸಂಪರ್ಕದ ರಾಜ್ಯ ಹೆದ್ದಾರಿಯ ಅಚ್ಚಡ ರೈಲ್ವೇ ಮೇಲ್ಸೇತುವೆಯ ಬಳಿ ರಸ್ತೆಯಲ್ಲಿಯೇ ಚೆಲ್ಲಾ ಪಿಲ್ಲಿಯಾಗಿ ಹರಡಿಕೊಂಡಿರುವ ಸ್ಥಿತಿಯಲ್ಲಿ ಕೊಳೆತ ಹಸಿ ತ್ಯಾಜ್ಯಗಳು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡುತ್ತಿದೆ.

ಈ ಪರಿಸರದಲ್ಲಿ ಕೊಳೆತ ತ್ಯಾಜ್ಯದಿಂದ ಗಬ್ಬು ವಾಸನೆಯಿಂದ ನಾರುತ್ತಿದ್ದು ಅಸಹ್ಯವಾದ ವಾತಾವರಣ ಸೃಷ್ಟಿಯಾಗಿದೆ. ಇದರಲ್ಲಿನ ಹಸಿ ತ್ಯಾಜ್ಯಗಳು ಇದೀಗ ಸುರಿಯುತ್ತಿರುವ ಮಳೆಯಿಂದ ಕೊಳೆತು ಸೊಳ್ಳೆ ಉತ್ಪತ್ತಿಯ ಕೇಂದ್ರವಾಗುವ ಜತೆಗೆ ಪರಿಸರಕ್ಕೆ ಮಾರಕವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಸೊಳ್ಳೆಗಳಿಂದ ಸಾಂಕ್ರಾಮಿಕ ರೋಗದ ಭೀತಿಯ ಛಾಯೆಯು ಸ್ಥಳೀಯರಲ್ಲಿ ಕಾಡುತ್ತಿವೆ.

ಅದರೊಂದಿಗೆ ಹಗುರವಾದ ತ್ಯಾಜ್ಯವು ಗಾಳಿಯಿಂದ ಅಥವಾ ಮಳೆಯ ನೀರಿನ ಹರಿವಿನೊಂದಿಗೆ ಸಾಗಿ ಕೃಷಿ ಗದ್ದೆ, ಹೊಳೆ, ತೊರೆಗಳನ್ನು ಸೇರುವ ಸಂಭಾವ್ಯತೆ ಅಧಿಕವಾಗಿದ್ದು, ಕೃಷಿಗೂ ಹಾನಿಯಾಗಬಲ್ಲುದು. ಪರಿಸರ ಮಾಲಿನ್ಯದ ಜತೆಗೆ ಜಲಚರಗಳ ಮೇಲೆಯೂ ದುಷ್ಪರಿಣಾಮವನ್ನು ಬೀರುವ ಸಾಧ್ಯತೆಯು ನಿಚ್ಚಳವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.

ಇಲ್ಲಿನ ಸ್ಥಳೀಯರ ಸಹಿತವಾಗಿ ಸನಿಹದಲ್ಲಿ ಸಾಗುವ ಸಂಚಾರಿಗಳಿಗೂ ಸಾಂಕ್ರಾಮಿಕ ರೋಗದ ಭೀತಿಯನ್ನು ಸೃಷ್ಟಿಸುತ್ತಿದೆ. ಆದರೊಂದಿಗೆ ಕಳೆದ ಮಳೆಗಾಲದಲ್ಲಿ ಕಟಪಾಡಿ ಭಾಗದಲ್ಲಿ ಸಂಶಯಿತ ಡೆಂಗ್ಯೂ ಜ್ವರ ಕಾಡಿರುವುದನ್ನು ಸಾರ್ವಜನಿಕರು ನೆನಪಿಸಿಕೊಳ್ಳುತ್ತಿದ್ದಾರೆ.

ಜನಮಾನಸದ ಸುರಕ್ಷತೆಯನ್ನು ಗಮನ ದಲ್ಲಿರಿಸಿಕೊಂಡು ಮೂಲದಲ್ಲಿಯೇ ಸೂಕ್ತವಾಗಿ ವಿಲೇವಾರಿಗೊಳಿಸಿದಲ್ಲಿ ಇಂತಹ ಸಮಸ್ಯೆಯು ಸೃಷ್ಟಿಯಾಗುತ್ತಿರಲಿಲ್ಲ ಎನ್ನುವುದು ಸಾರ್ವ ಜನಿಕರ ಅಭಿಪ್ರಾಯ. ಈ ಕೂಡಲೇ ಆರೋಗ್ಯ ಇಲಾಖೆ, ಸ್ಥಳೀಯಾಡಳಿತ ಸಂಸ್ಥೆ ಸಹಿತ ಸಂಬಂಧಿತ ಇಲಾಖೆಯು ಜನರ ಆರೋಗ್ಯದ ಸುರಕ್ಷತೆಯ ಬಗ್ಗೆ ಕಾಳಜಿ ಇರಿಸಿ ಈ ಬಗ್ಗೆ ನಿಗಾ ವಹಿಸ ಬೇಕಾಗಿ ಸಾರ್ವಜನಿಕರ ಆಗ್ರಹವಾಗಿದೆ.

ಬೇಸರ ಮೂಡಿಸುತ್ತಿದೆ
ಕಳೆದ ತಿಂಗಳ‌ ಹಿಂದಷ್ಟೇ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿತ್ತು. ಸಾರ್ವಜನಿಕರು ಸೌಜನ್ಯ ಮರೆತು ನಿರಂತರ ತ್ಯಾಜ್ಯ ಸುರಿಯುತ್ತಿರುವುದು ಬೇಸರ ಮೂಡಿಸುತ್ತಿದೆ. ಜನರು ತ್ಯಾಜ್ಯವನ್ನು ಸುರಿಯದಂತೆ ಮತ್ತೆ ವಿಜ್ಞಾಪಿಸುತ್ತೇನೆ. ಪರಿಸರ ಸ್ವತ್ಛತೆ ಮತ್ತು ಗ್ರಾಮಸ್ಥರ ಆರೋಗ್ಯ ಕಾಳಜಿಯಿಂದ ಶೀಘ್ರದಲ್ಲಿಯೇ ಸಂಗ್ರಹಿತ ತ್ಯಾಜ್ಯವನ್ನು ವಿಲೇವಾರಿಗೊಳಿಸಲಾಗುತ್ತದೆ.
– ಇನಾಯತುಲ್ಲಾ ಬೇಗ್‌,
ಪಿ.ಡಿ.ಒ. ಕಟಪಾಡಿ ಗ್ರಾ.ಪಂ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.