Katapadi ಶ್ರೀ ಕ್ಷೇತ್ರ ಪೇಟೆಬೆಟ್ಟು; ಬಬ್ಬುಸ್ವಾಮಿ, ಕೊರಗಜ್ಜ , ಪರಿವಾರ ದೈವಗಳ ನೇಮ
Team Udayavani, Jan 7, 2024, 11:37 PM IST
ಕಟಪಾಡಿ: ಶ್ರೀ ಕ್ಷೇತ್ರ ಪೇಟೆಬೆಟ್ಟು ಕಟಪಾಡಿಯ ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನ, ಶ್ರೀ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ನೇಮವು ಶನಿವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು.
ಮಧ್ಯಾಹ್ನ ಶ್ರೀ ಕ್ಷೇತ್ರ ಶುದ್ಧಿ ಪೂಜೆಯ ಬಳಿಕ ಭಂಡಾರ ಹೊರಟು ಕಟಪಾಡಿ ಪೇಟೆಯ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದು ರಾತ್ರಿ ಭಗವಾನ್ ಶ್ರೀ ಬಬ್ಬುಸ್ವಾಮಿಯ ನೇಮ ಮತ್ತು ಆದಿಶಕ್ತಿ ಶ್ರೀ ತನ್ನಿಮಾನಿಗ ದೇವಿಯ ನೇಮ ಜರಗಿತು.
ಅವಿಭಜಿತ ದ.ಕ. ಜಿಲ್ಲೆಯ ಪ್ರಸಿದ್ಧ ತಂಡಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಮಹಾ ಅನ್ನಸಂತರ್ಪಣೆ ನಡೆಯಿತು. ದಾನಿಗಳು, ಸೇವಕರು ಹಾಗೂ ಸಾಧಕರನ್ನು ಸಮ್ಮಾನಿಸಲಾಯಿತು.
ರವಿವಾರ ಬೆಳಗ್ಗೆ ಶ್ರೀ ಧೂಮಾವತಿ ಹಾಗೂ ಬಂಟ ದೈವಗಳ ನೇಮ, ಮಧ್ಯಾಹ್ನ ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮ ಜರಗಿತು. ಮಹಾರಾಷ್ಟ್ರ, ಕರ್ನಾಟಕ ಸಹಿತ ವಿವಿಧ ರಾಜ್ಯಗಳಿಂದ ಭಕ್ತರು ಪಾಲ್ಗೊಂಡಿದ್ದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪಾಂಗಾಳ ನಾಯಕ್ ಮನೆತನದವರು, ಕಟಪಾಡಿ ಹೊಸಮನೆ ವೈ. ಭರತ್ ಹೆಗ್ಡೆ, ಗರಡಿ ಮನೆ ಅಶೋಕ್ ಎನ್. ಪೂಜಾರಿ, ಕೆ. ಪ್ರೇಮ್ ಕುಮಾರ್, ಕಟಪಾಡಿ ಶ್ರೀ ಕ್ಷೇತ್ರ ಪೇಟೆಬೆಟ್ಟುವಿನ ಗುರಿಕಾರ ಹರಿಶ್ಚಂದ್ರ ಪಿಲಾರ್, ನಿವೃತ್ತ ಪೊಲೀಸ್ ಉಪ ನಿರೀಕ್ಷಕ ರಾಜ್ಗೋಪಾಲ್ , ಪ್ರಮುಖರಾದ ತುಕಾರಾಮ ಎಸ್. ಉರ್ವ, ಉಮೇಶ್, ಪ್ರಧಾನ ಅರ್ಚಕ ಜಯಕರ್ ವಿ., ಯಶವಂತ್, ರಾಜಕಲ ಮಧ್ಯಸ್ಥ ರವಿ ಶೆಟ್ಟಿ ಮಣಿಪಾಲ, ಮಧ್ಯಸ್ಥ ಪ್ರಸಾದ್ ಕೊರಂಗ್ರಪಾಡಿ, ಮಧುಚಂದ್ರ ಪಾತ್ರಿ, ಪ್ರಶಾಂತ್ ಪಾತ್ರಿ, ಕೃಷ್ಣ ಪಾತ್ರಿ, ಸುದೀಪ್, ನವೀನ್ ಕುಮಾರ್, ಸಂದೇಶ್, ಭವನೇಶ್, ಸಂಜೀವ, ಗೋಪಾಲ ಆರ್.ಎಂ., ವಿಜಯರಾಜ್, ಲಕ್ಷ್ಮಣ್, ಕೌಶಿಕ್, ಸ್ವರೂಪ್, ಸತ್ಯರಾಜ್, ಶಂಕರ್ ಜೆ.ಎನ್. ನಗರ, ಜಯಕರ್, ಸುಧಾಕರ್, ತಂಗಡಿ ಮಹಿಳಾ ಬಳಗ, ಸಂಗಮ ಫ್ರೆಂಡ್ಸ್ ಕಟಪಾಡಿ, ಮಾಜಿ ಜಿ.ಪಂ. ಸದಸ್ಯೆ ಗೀತಾಂಜಲಿ ಎಂ. ಸುವರ್ಣ ಹಾಗೂ ಹತ್ತು ಸಮಸ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ