ಕಟಪಾಡಿ ಬಳಿ ಅಪರಿಚಿತ ವಾಹನ ಢಿಕ್ಕಿ|ಮೀನುಗಾರ ಗಿರೀಶ್ ಮೆಂಡನ್ ಸಾವು
Team Udayavani, Sep 28, 2021, 10:06 PM IST
ಕಾಪು: ಪತ್ನಿಯ ಮನೆಗೆ ತೆರಳಿ, ಅಲ್ಲಿಂದ ವಾಪಸ್ಸಾಗುವಾಗ ಬಸ್ ಮಿಸ್ ಆಗಿ ನಡೆದುಕೊಂಡೇ ಕಾಪುವಿಗೆ ಮರಳುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ರಾ. ಹೆ. 66ರ ಕಟಪಾಡಿಯಲ್ಲಿ ಸೆ. 27ರ ಮಧ್ಯರಾತ್ರಿ ನಡೆದಿದೆ.
ಕಾಪು ಪಡು ಗ್ರಾಮ ನಿವಾಸಿ ಗಿರೀಶ್ ಮೆಂಡನ್ (39) ಮೃತ ವ್ಯಕ್ತಿ. ಮೃತ ಗಿರೀಶ್ ಮೆಂಡನ್ ಮೀನುಗಾರಿಕಾ ವೃತ್ತಿ ನಡೆಸುತ್ತಿದ್ದ. ಈತ ಕೆಲಸ ಮಾಡುತ್ತಿದ್ದ ಬೋಟ್ ಸೆ. 27ರಂದು ಮಂಗಳೂರಿನಲ್ಲಿ ಲಂಗರು ಹಾಕಿತ್ತು. ಅಲ್ಲಿಂದ ಮೀನು ತೆಗೆದುಕೊಂಡು ಮನೆಗೆ ಬಂದಿದ್ದ ಆತ, ಸಂಜೆ ಮಂದಾರ್ತಿಯಲ್ಲಿರುವ ಪತ್ನಿಯ ಮನೆಗೆ ಮೀನು ಕೊಟ್ಟು, ಅಲ್ಲಿಂದ ಮತ್ತೆ ವೃತ್ತಿಗಾಗಿ ಮಂಗಳೂರಿಗೆ ತೆರಳುತ್ತಿದ್ದ. ಈ ವೇಳೆ ಉಡುಪಿಯಿಂದ ತೆರಳುತ್ತಿದ್ದ ಅಪರಿಚಿತ ವಾಹನ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ದೇಹ ಸಂಪೂರ್ಣ ನಜ್ಜುಗುಜ್ಜಾಗಿದ್ದು ಪೊಲೀಸರ ಸೂಚನೆಯಂತೆ ಮೃತರ ಸಹೋದರ ಕಿಶೋರ್ ಮೆಂಡನ್ ಸ್ಥಳಕ್ಕೆ ತೆರಳಿ ಮೃತದೇಹದ ಗುರುತು ಪತ್ತೆ ಮಾಡಿದ್ದಾರೆ. ಅಪಘಾತದ ವಿಷಯ ತಿಳಿದ ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿದರಾದರೂ ಮೃತದೇಹವನ್ನು ಸಾಗಿಸಲು ಅಂಬುಲೆನ್ಸ್ ಗಾಗಿ ಪರದಾಡುವಂತಾಯಿತು. ಕೊನೆಗೆ ಸಮಾಜ ಸೇವಕ ವಿಶು ಶೆಟ್ಟಿ ಅವರನ್ನು ಸಂಪರ್ಕಿಸಿ ಲೈಫ್ ಕೇರ್ ಅಂಬುಲೆನ್ಸ್ ಮುಖಾಂತರ ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು.
ಘಟನೆ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ