ಅಪಘಾತ ತಾಣವಾಗಿ ಬದಲಾಗುತ್ತಿದೆ ಕಟಪಾಡಿ ಜಂಕ್ಷನ್‌: ಬೇಕಿದೆ ತುರ್ತು ಸೇವೆಗಾಗಿ ಆ್ಯಂಬುಲೆನ್ಸ್‌


Team Udayavani, Jan 3, 2023, 6:20 AM IST

ಅಪಘಾತ ತಾಣವಾಗಿ ಬದಲಾಗುತ್ತಿದೆ ಕಟಪಾಡಿ ಜಂಕ್ಷನ್‌: ಬೇಕಿದೆ ತುರ್ತು ಸೇವೆಗಾಗಿ ಆ್ಯಂಬುಲೆನ್ಸ್‌

ಕಟಪಾಡಿ: ನಿರಂತರ ಅಪಘಾತದ ತಾಣವಾಗುತ್ತಿರುವ ಕಟಪಾಡಿ ಜಂಕ್ಷನ್‌ನಲ್ಲಿ ಗಾಯಾಳುಗಳ ಜೀವ ರಕ್ಷಣೆಗೆ ಉಡುಪಿ ಅಥವಾ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲು ತುರ್ತು ಸೇವೆಯ ಆ್ಯಂಬುಲೆನ್ಸ್‌ ಆವಶ್ಯಕವಾಗಿ ಬೇಕಿದೆ ಎಂಬ ಸಾರ್ವಜನಿಕರ ಒತ್ತಾಯ ಕೇಳಿ ಬರುತ್ತಿದೆ.

ಕಟಪಾಡಿ, ಉದ್ಯಾವರ, ಕುರ್ಕಾಲು, ಶಂಕರಪುರ, ಬಂಟಕಲ್ಲು ಸಹಿತ ಪರಿಸರದ ಈ ಪ್ರದೇಶದಲ್ಲಿ ರಸ್ತೆ ಅವಘಡವು ಸಂಭವಿಸಿದಾಗ ಗಾಯಾಳುವಿನ ತುರ್ತು ರಕ್ಷಣೆಗೆ ರಿಕ್ಷಾ ಚಾಲಕರೇ ಮುಂದಾಗುತ್ತಿದ್ದು, ರಿಕ್ಷ ತುರ್ತು ಸೇವೆಯನ್ನು ನೀಡುವ ವಾಹನವಾಗಿ ಪರಿಣಮಿಸುತ್ತಿದೆ. ಆ ನಿಟ್ಟಿನಲ್ಲಿ ರಿಕ್ಷದವರ ಸೇವೆಯು ಅನನ್ಯವಾಗಿದೆ.

ನಿಜಕ್ಕಾದರೆ ಈ ಭಾಗದಲ್ಲಿ ಅಪಘಾತದಿಂದ ಗಾಯಗೊಂಡ ಗಾಯಾಳುಗಳ ಜೀವ ರಕ್ಷಣೆಗೆ ತುರ್ತು ಸೇವೆಯ ಆ್ಯಂಬುಲೆನ್ಸ್‌ ಅವಶ್ಯಕವಾಗಿ ಬೇಕಿದ್ದು, ಗಾಯಾಳುವಿಗೆ ತುರ್ತಾಗಿ ಬೇಕಾಗುವ ಪ್ರಥಮ ಚಿಕಿತ್ಸೆ, ಆಕ್ಸಿಜನ್‌ ವ್ಯವಸ್ಥೆ ಸಹಿತ ಮತ್ತಿತರ ಸೌಲಭ್ಯಗಳು ಲಭಿಸಿದಲ್ಲಿ ಗಾಯಾಳುಗಳ ಜೀವ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲು ಸಾಧ್ಯವಾಗುತ್ತದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಡಿಸೆಂಬರ್‌ ತಿಂಗಳಲ್ಲಿಯೇ ಟಿಪ್ಪರ್‌ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಉದ್ಯಾವರ ಬೊಳೆjಯ ಯುವಕ, ಬೈಕ್‌, ಕಾರು ಢಿಕ್ಕಿ ಹೊಡೆದು ಪಾದಚಾರಿಗಳು ಸಾವನ್ನಪ್ಪಿದ ಘಟನೆಯು ಕಟಪಾಡಿ ಜಂಕ್ಷನ್‌ ಪ್ರದೇಶದಲ್ಲಿ ಸಂಭವಿಸಿದೆ. ಉದ್ಯಾವರ ಪ್ರದೇಶದಲ್ಲಿಯೂ ಅಪಘಾತದಿಂದ ಸಾವು ನೋವುಗಳು ಸಂಭವಿಸಿದೆ. ಕುರ್ಕಾಲು, ಶಂಕರಪುರ, ಬಂಟಕಲ್ಲು ಪರಿಸರದಲ್ಲೂ ರಸ್ತೆ ಆವಘಡದಲ್ಲಿ ಸಾವು ನೋವುಗಳು ಸಂಭವಿಸಿವೆೆ.

ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಮತ್ತು ಉಡುಪಿ ಪ್ರದೇಶದಿಂದ ಬರುವ ವಾಹನಗಳು ಹಾಗೂ ಬೆಳ್ಮಣ್‌, ಶಿರ್ವ, ಬಂಟಕಲ್ಲು, ಶಂಕರಪುರ ಹಾಗೂ ಮಣಿಪುರ ಭಾಗದಿಂದ ಬರುವ ವಾಹನಗಳು ಮತ್ತು ಮಟ್ಟು ಕಟಪಾಡಿ ಪೇಟೆಯೊಳಗಿಂದ ಬರುವ ವಾಹನಗಳು ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್‌ ಮೂಲಕ ಸಾಗಬೇಕಿದೆ. ಹಾಗಾಗಿ ಸಹಜವಾಗಿಯೇ ಬೆಳೆಯುತ್ತಿರುವ ಕಟಪಾಡಿಯಲ್ಲಿ ಸದಾ ವಾಹನ ದಟ್ಟಣೆ, ಜನದಟ್ಟಣೆಯು ಸಾಮಾನ್ಯವಾಗಿದ್ದು, ನಿಯಂತ್ರಣಕ್ಕೆ ಪೊಲೀಸರು ಶ್ರಮ ವಹಿಸುತ್ತಿದ್ದಾರೆ.

ಕಟಪಾಡಿಯಲ್ಲಿ ಅಂಡರ್‌ ಅಥವಾ ಓವರ್‌ ಪಾಸ್‌ ನಿರ್ಮಿಸಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು. ಜನ ಸಾಮಾನ್ಯರ ಜೀವದ ಮೌಲ್ಯವನ್ನು ಅರಿತು, ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತು ಕಟಪಾಡಿ ಜಂಕ್ಷನ್‌ ಪ್ರದೇಶದಲ್ಲಿ ತುರ್ತು ಸೇವೆಯ ಆ್ಯಂಬುಲೆನ್ಸ್‌ ವಾಹನದ ಸೌಕರ್ಯವನ್ನು ಒದಗಿಸಿ ಅಪಘಾತದಿಂದ ಗಾಯಗೊಂಡ ಗಾಯಾಳುಗಳ ಜೀವ ರಕ್ಷಣೆಗೆ ಹೆಚ್ಚಿನ ಆದ್ಯತೆ-ಸುರಕ್ಷತೆಯನ್ನು ಕಲ್ಪಿಸಿಬೇಕೆಂದು ನಾಗರಿಕರು ಆಗ್ರಹಿಸುತ್ತಿದ್ದಾರೆ.

ಬೆಳೆಯುತ್ತಿರುವ ಕಟಪಾಡಿ ಪರಿಸರದಲ್ಲಿ ನಿರಂತರವಾಗಿ ಅಪಘಾತ ಸಂಭವಿಸುತ್ತಿದೆ. ರಿಕ್ಷಾದವರೇ ತುರ್ತಾಗಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾರೆ. ಗಂಭೀರ ಗಾಯಗೊಂಡ ಗಾಯಾಳುವಿಗೆ ಉತ್ತಮ ಸುರಕ್ಷತೆ ಹಾಗೂ ಜೀವ ರಕ್ಷಣೆಗೆ ಕಟಪಾಡಿ ಜಂಕ್ಷನ್‌ ಪ್ರದೇಶದಲ್ಲಿ ತುರ್ತು ಸೇವೆಯ ಆ್ಯಂಬುಲೆನ್ಸ್‌ ವಾಹನ ಸೌಕರ್ಯದ ಆವಶ್ಯಕತೆ ಇದೆ.
-ಪ್ರೇಮ್‌ ಕುಮಾರ್‌ ಕಟಪಾಡಿ, ಅಧ್ಯಕ್ಷರು, ರಿಕ್ಷಾ ಯೂನಿಯನ್‌ ಕಟಪಾಡಿ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.