ಪೇಟೆಯೊಳಗಿನ ನಿಲ್ದಾಣಕ್ಕೆ ಬಸ್‌ ಬರುವುದಷ್ಟೇ ಬಾಕಿ


Team Udayavani, Sep 24, 2021, 3:50 AM IST

ಪೇಟೆಯೊಳಗಿನ ನಿಲ್ದಾಣಕ್ಕೆ ಬಸ್‌ ಬರುವುದಷ್ಟೇ ಬಾಕಿ

ಕಟಪಾಡಿ: ವೇಗವಾಗಿ ಬೆಳೆಯುತ್ತಿರುವ ಕಟಪಾಡಿ ಪೇಟೆಯೊಳಗಿನ ಬಸ್‌ ನಿಲ್ದಾಣದ ಪ್ರದೇಶದಲ್ಲಿ ನೋ ಪಾರ್ಕಿಂಗ್‌, ಇನ್‌ ಆ್ಯಂಡ್‌ ಔಟ್‌ ಸೂಚನೆಯ ಬರಹಗಳು ಮತ್ತೆ ಬಣ್ಣ ಬಳಿದು ರಾರಾಜಿಸುತ್ತಿದ್ದು, ಬಸ್‌  ನಿಲ್ದಾಣ ಪ್ರವೇಶಿಸುವುದನ್ನು ಸಾರ್ವಜನಿಕರು ಕಾತುರದಿಂದ ಕಾಯುತ್ತಿದ್ದಾರೆ.

ಇಲ್ಲಿ  ಅಡ್ಡಾದಿಡ್ಡಿಯಾಗಿ ವಾಹನಗಳ ಪಾರ್ಕಿಂಗ್‌ ಸಮಸ್ಯೆಯಿಂದಾಗಿ  ಪೇಟೆಯೊಳಗಿನ ತಂಗುದಾಣಕ್ಕೆ ಬಸ್‌ ಬಾರದೆ ಇರುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇದರಿಂದ ನಿತ್ಯ ಪ್ರಯಾಣಿಕರು ರಾಷ್ಟ್ರೀಯ

ಹೆದ್ದಾರಿ ದಾಟುವ ಮತ್ತು ಗ್ರಾಹಕರು ಪಾರ್ಕಿಂಗ್‌ ಮಾಡಲ್ಪಟ್ಟ ವಾಹನಗಳ ನಡುವೆ ನುಸುಳಿಕೊಂಡು ಹೋಗಿ ಖರೀದಿ ನಡೆಸುವ ಪರಿಸ್ಥಿತಿ ಬಂದೊದಗಿತ್ತು.

ಕಟಪಾಡಿ ಪೇಟೆಯು ಸಾಕಷ್ಟು ವ್ಯಾಪಾರ ಮಳಿಗೆಗಳು, ವಾಣಿಜ್ಯ ಮಳಿಗೆಗಳು, ವಸತಿ ಸಮುತ್ಛಯಗಳು, ಹಲವು ದೇಗುಲ, ಆರಾಧನಾ ಕೇಂದ್ರ, ಹೊಟೇಲ್‌,  ಕ್ಲಿನಿಕಲ್‌ ಲ್ಯಾಬೋರೇಟರಿಗಳನ್ನು ಹೊಂದಿದೆ.

ಮಟ್ಟು, ಕೋಟೆ, ಶಿರ್ವ, ಶಂಕರಪುರ, ಮಣಿಪುರ ಸಹಿತ ಇತರ ಗ್ರಾಮಗಳಿಗೂ ಕೇಂದ್ರ ಸ್ಥಳವಾಗಿದೆ. ಆ ನಿಟ್ಟಿನಲ್ಲಿ  ಇವೆಲ್ಲವನ್ನೂ ಅವಲಂಬಿಸಿ ಸದಾ ಜನಜಂಗುಳಿಯಿಂದ ಕಟಪಾಡಿ ಪೇಟೆಯು ಗಿಜಿಗುಡುತ್ತಿರುತ್ತದೆ.

ಸುದಿನ ವರದಿ:

ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್‌  ಪ್ರದೇಶವಾಗಿ ಗುರುತಿಸಿಕೊಂಡಿರುವ ಕಟಪಾಡಿ ಪೇಟೆಯು ಹೆಚ್ಚಿನ ಪ್ರಯಾಣಿಕರಿಗೂ ಪ್ರಮುಖ ಸ್ಥಳವಾಗಿದೆ. ಪ್ರಸ್ತುತ ಕಟಪಾಡಿ ಪೇಟೆಯೊಳಕ್ಕೆ ಎಲ್ಲ ಬಸ್‌ಗಳು ಬಾರದೇ ಪ್ರಯಾಣಿಕರು ಸಮಸ್ಯೆಯನ್ನು ಎದುರಿಸುವಂತಾಗಿದೆ. ವಯೋವೃದ್ಧರು, ಮಕ್ಕಳು, ಮಹಿಳೆಯರು, ಅಂಗವಿಕಲರು, ಬಸ್‌ಗಾಗಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನು ದಾಟುವಂತಹ ಅನಿವಾರ್ಯ ಪರಿಸ್ಥಿತಿ ಬಂದೊದಗಿರುವ ಬಗ್ಗೆ ಉದಯವಾಣಿ ಸುದಿನವು “ಒಂದು ಊರು ಹಲವು ದೂರು’  ಸರಣಿಯಲ್ಲಿ ಜನಪರ ಕಾಳಜಿಯ ವಿಸ್ತೃತ ವರದಿಯನ್ನು ಪ್ರಕಟಿಸಿತ್ತು.

ಆ ನಿಟ್ಟಿನಲ್ಲಿ ಸ್ಥಳೀಯ ಕಟಪಾಡಿ ಗ್ರಾಮ ಪಂಚಾಯತ್‌ ಮತ್ತು ಕಾಪು ಪೊಲೀಸರು ಹಾಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳು  ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ ಈ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಮುಂದಾಗಿದೆ. ಸೂಕ್ತ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡು ಕಟಪಾಡಿ ಬಸ್‌ ನಿಲ್ದಾಣದೊಳಕ್ಕೆ ಬಸ್‌ ಬರುವಂತೆ ಹೆಚ್ಚಿನ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಬೆರಳೆಣಿಕೆಯ ದಿನಗಳಲ್ಲಿ ಕಟಪಾಡಿ ಪೇಟೆಯ ನಿಲ್ದಾಣದಲ್ಲಿ ಬಸ್‌ ಸೇವೆಯು ಆರಂಭವಾಗುವ ಸಾಧ್ಯತೆ ಇದೆ.

ಕಟಪಾಡಿ ಪೇಟೆಯೊಳಕ್ಕೆ ಬಸ್‌ ನಿಲ್ದಾಣಕ್ಕೆ ಬರುವ ವ್ಯವಸ್ಥೆ ಕಲ್ಪಿಸಲು ಸಿದ್ಧತೆಗಳನ್ನು ನಡೆಸಲಾಗಿದೆ. ರಿಕ್ಷಾಗಳಿಗೆ ಬೇರೆಡೆ ಪಾರ್ಕಿಂಗ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಕೇವಲ 3 ರಿಕ್ಷಾಗಳು ಮಾತ್ರ ಪೇಟೆಯೊಳಗೆ ನಿಲ್ಲಿಸಲು ಅವಕಾಶ ಕಲ್ಪಿಸಿ ಸಹಕಾರ ಕೋರಲಾಗಿದೆ. ವ್ಯಾಪಾರಕ್ಕಾಗಿ ಬರುವ ಗ್ರಾಹಕರ ದ್ವಿಚಕ್ರ ವಾಹನಗಳಿಗೆ ವ್ಯಾಪಾರ ಮಳಿಗೆಗಳ ಮುಂಭಾಗದಲ್ಲಿಯೇ ಬಣ್ಣ ಬಳಿದು ಸ್ಥಳವನ್ನು ನಿಗದಿಪಡಿಸಲಾಗಿದೆ. ಇತರ ವಾಹನಗಳ ಪಾರ್ಕಿಂಗ್‌  ಸಮಸ್ಯೆಗೆ ಫ್ಲೆ$ç ಓವರ್‌ ಆದ ಬಳಿಕವಷ್ಟೇ ಸೂಕ್ತ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಲಿದ್ದು, ಸರ್ವರೂ ಸಹಕರಿಸಬೇಕು. ಎಲ್ಲವೂ ಯೋಜನೆಯಂತೆ ನಡೆದಲ್ಲಿ ಮುಂದಿನ ವಾರದೊಳಗೆ ಕಟಪಾಡಿ ಪೇಟೆಯೊಳಗಿನ  ನಿಲ್ದಾಣದಲ್ಲಿ ಬಸ್‌ ಸೇವೆಯನ್ನು ನೀಡಲಿದೆ .ರಾಘವೇಂದ್ರ, ಪಿ.ಎಸ್‌.ಐ. ಕಾಪು ಠಾಣೆ 

ಪೊಲೀಸ್‌ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ  ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಬಸ್‌ ಕಟಪಾಡಿ  ನಿಲ್ದಾಣಕ್ಕೆ ಬರುವಲ್ಲಿ ಪ್ರಯತ್ನಿಸಲಾಗುತ್ತಿದ್ದು, ವಾರದೊಳಗಾಗಿ ಕಟಪಾಡಿ ಪೇಟೆಯ  ನಿಲ್ದಾಣದಲ್ಲಿ ಬಸ್‌ ಪ್ರಯಾಣಿಕರಿಗೆ ಸೇವೆಯನ್ನು ನೀಡುವ ಭರವಸೆ ಇದೆ. ಮಮತಾ ವೈ. ಶೆಟ್ಟಿ, ಪಿ.ಡಿ.ಒ., ಕಟಪಾಡಿ ಗ್ರಾ.ಪಂ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.