ಕಾಟಿ ಹಾವಳಿಯಿಂದ ಗ್ರಾಮಸ್ಥರು ಕಂಗಾಲು


Team Udayavani, Feb 17, 2019, 12:30 AM IST

cow-dd.jpg

ಮಣಿಪಾಲ: ಹಿರಿಯಡಕ ಪಂಚನಬೆಟ್ಟುವಿನ ಕುಳೇದು ಪರಿಸರದಲ್ಲಿ ಕಾಟಿ ಹಾವಳಿ ಮಿತಿಮೀರಿದ್ದು ಜನರಲ್ಲಿ ಆತಂಕ ಮನೆಮಾಡಿದೆ. ಕಾಟಿಯೊಂದು ಕುಳೆದುವಿನ ರಾಧಾ ನಾಯಕ್‌ ಅವರ ಮನೆಯ ಹಸುವಿಗೆ ತಿವಿದು ಘಾಸಿ ಮಾಡಿದೆ. 

ಹಗಲಿನಲ್ಲೂ ಕಾಟಿಗಳು ನಿರ್ಭೀತಿಯಿಂದ ಸಂಚರಿಸುವುದರಿಂದ ಈ ಪ್ರದೇಶದ ಮಕ್ಕಳು, ಮಹಿಳೆಯರು ಆತಂಕದಲ್ಲೇ ದಿನ ದೂಡುವಂತಾಗಿದೆ. ಈ ಪ್ರದೇಶದಲ್ಲಿ ಹೈನುಗಾರಿಕೆ ಹಾಗೂ ಕೃಷಿಯನ್ನೇ ನಂಬಿ ದಿನ ಸಾಗಿಸುತ್ತಿರುವವರಿದ್ದು  ಕಾಟಿಗಳಿಂದ ರಾಸುಗಳಿಗೆ ಘಾಸಿ ಅಥವಾ ಪ್ರಾಣಾಪಾಯ ಉಂಟಾದಲ್ಲಿ ಸಂಭವಿಸುವ ನಷ್ಟವನ್ನು ಭರಿಸುವ ಶಕ್ತಿ ಅವರಲ್ಲಿಲ್ಲ. 

ಎಲ್ಲೆಲ್ಲಿ ಸಮಸ್ಯೆ
ಬೊಮ್ಮರಬೆಟ್ಟು ಮತ್ತು ಎರಲ್ಪಾಡಿ ವ್ಯಾಪ್ತಿಯಲ್ಲಿ ಕಾಟಿಗಳ ಹಾವಳಿ ಮಿತಿಮೀರಿದೆ. ಪಂಚನಬೆಟ್ಟು, ಏಳುಪಾಲು, ಸಾಗ, ನಡುಗುಡ್ಡೆ, ಸಾಣೆಕಲ್ಲು, ಎರಲ್ಪಾಡಿ ಪ್ರದೇಶದ ಜನರು ಆತಂಕದಲ್ಲಿದ್ದಾರೆ.

ಕಾಡುಪ್ರಾಣಿ ಬಾಧೆ
ಕಾಡಿನಲ್ಲಿ ಆಹಾರವಿಲ್ಲದೆ ನಾಡಿಗಿಳಿಯುತ್ತಿರುವ ಕಾಟಿ, ಹಂದಿ, ಮಂಗ, ನವಿಲಿನ ಬಾಧೆಯಿಂದ ಕೃಷಿಕರು ಕಂಗೆಟ್ಟು ಹೋಗಿದ್ದಾರೆ. ಕೃಷಿ ನಷ್ಟವಾಗುತ್ತಿದ್ದು ಸಾಲದಲ್ಲಿ ಮುಳುಗುವಂತಾಗಿದೆ. ಚಿರತೆಗಳ ಉಪಟಳವೂ ಇದ್ದು ಅಪಾಯದ ಸಾಧ್ಯತೆಯೂ ಇದೆ. 

ಅರಣ್ಯ ಇಲಾಖೆಗೆ ಪತ್ರ
ಕಾಟಿಗಳ ಹಾವಳಿಯಿಂದ ದನಗಳ ಮೇಲೆ ದಾಳಿ ಆಗುತ್ತಿರುವ ಬಗ್ಗೆ ಹಾಗೂ ಉಪಟಳದ ಬಗ್ಗೆ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದು ಕ್ರಮಕ್ಕೆ ವಿನಂತಿಸಲಾಗಿದೆ ಎಂದು ಬೊಮ್ಮರಬೆಟ್ಟು ಗ್ರಾಪಂ ಅಧ್ಯಕ್ಷೆ ಸವಿತಾ ನಾಯಕ್‌, ಪಿಡಿಒ ರಾಜಶೇಖರ್‌ ರಾವ್‌ ತಿಳಿಸಿದ್ದಾರೆ. 

ನೀರೆ ಮೀಸಲು ಅರಣ್ಯದಿಂದ ಕಾಟಿಗಳು ಕೆಳಗಿಳಿದು ಊರಿನೊಳಗೆ ಬರುತ್ತಿವೆ.ಇವುಗಳನ್ನು ಮತ್ತೆ ಮೀಸಲು ಅರಣ್ಯಕ್ಕೆ ಸೇರಿಸುವ ಕಾರ್ಯಾಚರಣೆ ನಡೆಸಲಾಗುವುದು. ಕಾಡುಪ್ರಾಣಿಗಳಿಂದ ದನಗಳಿಗೆ ಘಾಸಿಯಾದರೆ ಅಥವಾ ಸಾವನ್ನಪ್ಪಿದರೆ ಇಲಾಖಾ ನಿಯಮಾ ನುಸಾರ ಪರಿಹಾರ ನೀಡಲು ಅವಕಾಶ ಇದೆ. 
– ಜಯರಾಮ್‌,ಅರಣ್ಯಾಧಿಕಾರಿ,ಹಿರಿಯಡ್ಕ

ಪಶುಸಂಗೋಪನೆ ಇಲಾಖೆ ವೈದ್ಯಾಧಿಕಾರಿಗಳು ಕಾಡುಪ್ರಾಣಿಗಳಿಂದ ಘಾಸಿಯಾದ ದನಗಳನ್ನು ಪರಿಶೀಲನೆ ನಡೆಸಿ ವರದಿ ನೀಡುತ್ತಾರೆ. ಈ ವರದಿ ಆಧಾರದಲ್ಲಿ ಅರಣ್ಯ ಇಲಾಖೆಯಿಂದ ಪರಿಹಾರ ಪಡೆಯಬಹುದು. ಅಥವಾ ದನಗಳಿಗೆ ವಿಮೆ ಮಾಡಿಸಿದ್ದಲ್ಲಿ ಅದನ್ನು ಕ್ಲೇಮು ಮಾಡಬಹುದು. 
– ಡಾ| ಸರ್ವೋತ್ತಮ ಉಡುಪ, 
ಉಪ ನಿರ್ದೇಶಕ, ಪಶು ಸಂಗೋಪನಾ ಇಲಾಖೆ 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.