ಹಾಸ್ಟೆಲ್‌ ಸೌಲಭ್ಯ ಪಡೆಯುವಲ್ಲಿ ವಿಳಂಬ 


Team Udayavani, Jul 22, 2018, 6:00 AM IST

1807kapu1b.jpg

ಕಾಪು: ಪದವಿ ತರಗತಿ ಪ್ರಾರಂಭವಾಗಿ ತಿಂಗಳು ಕಳೆಯುತ್ತ ಬಂದಿದೆ. ಸರಕಾರಿ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಸರಕಾರದ ನಿಯಮಾವಳಿಯಿಂದಾಗಿ ಹಾಸ್ಟೆಲ್‌ ಸೌಲಭ್ಯ ಪಡೆಯುವಲ್ಲಿ ವಿಳಂಬವಾಗಿದ್ದು, ಕಾಲೇಜಿನಲ್ಲೇ ವಸತಿ ವ್ಯವಸ್ಥೆ ಮಾಡಿಕೊಂಡು ದಿನ ಕಳೆಯುವ ಅನಿವಾರ್ಯತೆಗೆ ಸಿಲುಕಿದ್ದಾರೆ.

ಸರಕಾರದ ನಿಯಮಾವಳಿಗಳ ಕಾರಣ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾಕರ ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ನಿಲಯದಲ್ಲಿ ಕಾಪು ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಇನ್ನೂ ವಸತಿ ಸೌಲಭ್ಯವಾಗದೇ ಇರುವ ಕಾರಣ ಕಾಲೇಜಿನ 17 ಮಂದಿ ವಿದ್ಯಾರ್ಥಿಗಳು ಕಾಲೇಜ್‌ನ ರೆಸ್ಟ್‌ ರೂಮ್‌ ಅನ್ನೇ ವಸತಿ ನಿಲಯ – ವಿಶ್ರಾಂತಿ ಕೊಠಡಿಯನ್ನಾಗಿ ಬಳಸಿಕೊಳ್ಳುತ್ತಿದ್ದಾರೆ.
ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ನಿಲಯಕ್ಕೆ ಸೇರ್ಪಡೆಗೊಳ್ಳಬಯಸುವ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅವುಗಳನ್ನು ಪರಿಶೀಲಿಸಿ ಕೆಟಗರಿ ಆಧಾರದಲ್ಲಿ ಪ್ರವೇಶಾತಿ ನೀಡಲಾಗುತ್ತದೆ. ಆದರೆ ಆನ್‌ಲೈನ್‌ ಪ್ರವೇಶಾತಿ ಪ್ರಕ್ರಿಯೆ ಅಂತಿಮಗೊಳ್ಳದಿರುವುದರಿಂದ ಕಾಪು ಕಾಲೇಜ್‌ನ ಹಾಸ್ಟೆಲ್‌ ಸೌಲಭ್ಯ ಬಯಸುವ ವಿದ್ಯಾರ್ಥಿಗಳು ಹಾಸ್ಟೆಲ್‌ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ಕಾಲೇಜಲ್ಲೇ ಓದು, ಊಟ, ನಿದ್ದೆ  
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೇರ್ಪಡೆಗೊಂಡಿರುವ ಕೊಲ್ಲೂರು-5, ನಿಟ್ಟೂರು-5, ಸಕಲೇಶಪುರ-5, ಮೂಡಿಗೆರೆ-1, ಕೊಪ್ಪ-1 ವಿದ್ಯಾರ್ಥಿಯೂ ಸೇರಿದಂತೆ 17 ಮಂದಿ ಕಾಲೇಜಿನ ವಿಶ್ರಾಂತಿ ಕೊಠಡಿಯನ್ನೇ ವಿಶ್ರಾಂತಿಗಾಗಿ ವಸತಿ ನಿಲಯವನ್ನಾಗಿ ಪರಿವರ್ತಿಸಿಕೊಂಡಿದ್ದಾರೆ. ಮಾತ್ರವಲ್ಲದೇ ಅಲ್ಲೇ ವಿದ್ಯೆ, ಓದು, ಹೋಂ ವರ್ಕ್‌, ಊಟ, ನಿದ್ದೆ ಸಹಿತ ಎಲ್ಲವನ್ನೂ ನಡೆಸುವಂತಾಗಿದೆ.

ಆಗಸ್ಟ್‌ ವರೆಗೆ ಅನಿವಾರ್ಯ
ಸರಕಾರದ ವಿವಿಧ ನಿಯಮಾವಳಿಗಳು ಹಾಸ್ಟೆಲ್‌ ವಿದ್ಯಾರ್ಥಿಗಳ ಪಾಲಿಗೆ ಮಗ್ಗುಲ ಮುಳ್ಳಾಗಿ ಪರಿಣಮಿಸಿದ್ದು ಇಲಾಖೆ ನೀಡಿದ ಮಾಹಿತಿಯಂತೆ ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಜು. 20 ಕೊನೆಯ ದಿನವಾಗಿರುತ್ತದೆ. ಆ ಬಳಿಕ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ, ಕೆಟಗರಿ ಆಧಾರಿತವಾಗಿ ಪ್ರವೇಶ  ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ. ಅದಕ್ಕಾಗಿ ಆಗಸ್ಟ್‌ ಪ್ರಥಮ ವಾರದವರೆಗೆ ಕಾಯುವುದು ಅನಿವಾರ್ಯವಾಗಿದೆ.

ಪ್ರಾಂಶುಪಾಲರ ಮುತುವರ್ಜಿ
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ| ಗಣೇಶ್‌ ಬಿಜೈ ಅವರು ತಮ್ಮ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಎದುರಾಗಬಾರದೆಂಬ ದೃಷ್ಟಿಯಿಂದ ಸ್ವತಃ ಮುತುವರ್ಜಿ ವಹಿಸಿ ಕಾಲೇಜಿನ ಕೊಠಡಿಯೊಂದರಲ್ಲೇ ಊಟ, ಪಾಠ, ನಿದ್ದೆಗೆ ಅವಕಾಶ ಮಾಡಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಗಾಳಿ ಒತ್ತಡ ಜಾಸ್ತಿ
ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾಕರ ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ನಿಲಯದ ನಿರೀಕ್ಷೆಯೊಂದಿಗೆ ನಾವು ಕಾಪು ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯಲು ಮುಂದಾಗಿದ್ದೇವೆ. ಆದರೆ ಕಾಲೇಜು ಪುನರಾರಂಭಗೊಂಡು ಒಂದು ತಿಂಗಳಾಗುತ್ತ ಬಂದರೂ ನಮಗೆ ವಸತಿ ನಿಲಯದ ವ್ಯವಸ್ಥೆ ಲಭ್ಯವಾಗಿಲ್ಲ. ಆನ್‌ಲೈನ್‌ ಮೂಲಕ ವಸತಿ ನಿಲಯಕ್ಕೆ ಪ್ರವೇಶ ದೊರಕಲಿದ್ದು, ಅಲ್ಲಿಯವರೆಗೆ ಪ್ರಾಂಶುಪಾಲರೇ ಮುತುವರ್ಜಿ ವಹಿಸಿ ಕಾಲೇಜಿನಲ್ಲೇ ವಸತಿ ವ್ಯವಸ್ಥೆಯನ್ನು ಮಾಡಿಕೊಟ್ಟಿದ್ದಾರೆ. 
– ನಾಗಭೂಷಣ್‌, 
ಪ್ರಥಮ ಬಿ.ಕಾಂ. ವಿದ್ಯಾರ್ಥಿ

ಶೀಘ್ರದಲ್ಲೇ ಕಾರ್ಯಾರಂಭ
ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಅನಂತರದ ಬಾಲಕರ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜುಲೈ 20ರ ವರೆಗೆ ಅವಕಾಶವಿದೆ. ಇಡೀ ರಾಜ್ಯದಲ್ಲಿ ಇದೇ ರೀತಿಯ ವ್ಯವಸ್ಥೆಯಿದ್ದು, ಉಡುಪಿ ಜಿಲ್ಲೆಯಲ್ಲಿ 23 ಹಾಸ್ಟೆಲ್‌ಗ‌ಳಲ್ಲೂ ಇದೇ ರೀತಿಯ ಕ್ರಮಗಳನ್ನು ಅನುಸರಿಸಲಾಗುತ್ತಿದೆ.
– ಶಂಕರನಾರಾಯಣ ಭಟ್‌, 
ಮೆನೇಜರ್‌, ಹಿಂದುಳಿದ ಮತ್ತು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ

– ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.