ಪ್ರವಾಸಿಗರೇ, ಸಮುದ್ರಕ್ಕೆ ಇಳಿವ ಮುನ್ನ ಯೋಚಿಸಿ


Team Udayavani, May 11, 2018, 7:35 AM IST

0105Kpe1a.jpg

ಕಾಪು: ಕಾಪು ಬೀಚ್‌ ಪ್ರವಾಸಿಗರಿಗೆ ಸ್ವರ್ಗ. ವಾರಾಂತ್ಯ ಮತ್ತು ರಜಾದಿನಗಳಲ್ಲಿ ಇದು ಪ್ರವಾಸಿಗರಿಂದ ತುಂಬಿ ತುಳುಕುತ್ತದೆ. ಆದರೆ ಮೋಜಿನಾಟದ ಉತ್ಸಾಹದಲ್ಲಿ ಸ್ಥಳೀಯರು ಮತ್ತು ಲೈಫ್‌ ಗಾರ್ಡ್‌ಗಳು ಎಚ್ಚರಿಕೆ ನೀಡಿದರೂ, ಪ್ರವಾಸಿಗರು ಜಲಸಮಾಧಿಯಾಗುತ್ತಿದ್ದಾರೆ.  

10 ವರ್ಷದಲ್ಲಿ 20ಕ್ಕೂ ಅಧಿಕ ಸಾವು ?
ಕಾಪು ಬೀಚ್‌ನಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ ಸುಮಾರು 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಆದರೂ ಸ್ಥಳೀಯ ಮುಳುಗು ತಜ್ಞರು, ಮೀನುಗಾರರು ಮತ್ತು ಲೈಫ್‌ ಗಾರ್ಡ್‌ ಸದಸ್ಯರ ಸಮಯ ಪ್ರಜ್ಞೆಯಿಂದಾಗಿ ಹೆಚ್ಚಿನ ಸಂಖ್ಯೆಯ ಯುವಕ – ಯುವತಿಯರು ಅಪಾಯ ದಿಂದ ಪಾರಾಗಿದ್ದಾರೆ.

ಅಪಾಯಕಾರಿ ಕಾಪು ಸಮುದ್ರ 
ಇಲ್ಲಿನ ಬೀಚ್‌ ಸುಂದರ, ಆಕರ್ಷಕ. ಆದರೆ ಬಲು ಅಪಾಯಕಾರಿ. ಸಮುದ್ರಕ್ಕಿಳಿದು ಆಟವಾಡಲು ಸುಮಾರು 10 ಮೀ. ಒಳಗೆ ಮಾತ್ರ ಜಾಗ ಪ್ರಶಸ್ತವಾಗಿದೆ. ಅದಕ್ಕೂ ಮುಂದೆ ಹೋದವರಿಗೆ ನೀರು ಕುಡಿಸದೇ ಇರುವುದಿಲ್ಲ. 

ನಿರ್ಲಕ್ಷ್ಯದ್ದೇ ಸಮಸ್ಯೆ
ಕಾಪು ಬೀಚ್‌ನಲ್ಲಿ ಎಚ್ಚರಿಕೆ ಫ‌ಲಕಗಳನ್ನು ಅಳವಡಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಲೈಫ್‌ಗಾರ್ಡ್‌, ಹೋಂ ಗಾರ್ಡ್‌, ಕೋಸ್ಟಲ್‌ ಗಾರ್ಡ್‌ ಮತ್ತು ಪೊಲೀಸರ ಭದ್ರತೆಯಿದೆ. ಮುನ್ನೆಚ್ಚರಿಕೆ ನೀಡುವ ಸ್ಥಳೀಯರೂ ಇದ್ದಾರೆ. ಆದರೂ ಅವಘಡಗಳು ಸಂಭವಿಸುತ್ತಲೇ ಇವೆ. ಪ್ರವಾಸಿಗರು ಸಮುದ್ರದ ಬಗ್ಗೆ ನಿರ್ಲಕ್ಷ್ಯ ತಳೆಯುವುದರಿಂದಲೇ ಹೀಗಾಗುತ್ತಿದೆ.  
ತುರ್ತಾಗಿ ಬೇಕು ಹೆಚ್ಚುವರಿ ಸೌಕರ್ಯ 
ಲೈಫ್‌ ಗಾರ್ಡ್‌ ಟವರ್‌, ಪ್ರವಾಸಿಗರನ್ನು ಎಚ್ಚರಿಸಲು ಅನೌನ್ಸ್‌ಮೆಂಟ್‌ ಮೈಕ್‌, ಡೇಂಜರ್‌ ಸಿಗ್ನಲ್‌ ಅಲಾರಂ, ರೆಸ್ಕೂ ಬೋಟ್‌, ಜೆಸ್ಕಿ ಸ್ಕೂಟರ್‌, ಹೈಮಾಸ್ಟ್‌ ಲೈಟ್‌, ನೆರಳಿನ ವ್ಯವಸ್ಥೆಗೆ ಶೆಲ್ಟರ್‌ ಇತ್ಯಾದಿ ವ್ಯವಸ್ಥೆಗಳು ಬೀಚ್‌ನಲ್ಲಿ ತುರ್ತಾಗಿ ಆಗಬೇಕಿದೆ.ಈ ವ್ಯವಸ್ಥೆಗಳು ಅಳವಡಿಕೆಯಾದಲ್ಲಿ ಸಮುದ್ರಕ್ಕೆ ಬಿದ್ದವರನ್ನು ರಕ್ಷಿಸಲು ಲೈಫ್‌ಗಾರ್ಡ್‌ಗಳು ಸರ್ವ ಸನ್ನದ್ಧವಾಗಿ ಕುಳಿತಿರಲು ಸಾಧ್ಯವಿದೆ.  

5 ವರ್ಷಗಳಲ್ಲಿ  ನಡೆದ ಘಟನೆಗಳು  
ವರ್ಷ    ರಕ್ಷಣೆ    ಸಾವು

2013    5 ಮಂದಿ    2 
2014    3 ಮಂದಿ    4
2015    4 ಮಂದಿ    1
2016    4 ಮಂದಿ    1
2017    6 ಮಂದಿ    0
2018    ಓರ್ವ    1 

ಬೀಚ್‌ ಸೇಫ್‌ ಅಲ್ಲ  
ಕರಾವಳಿಯ ಬೀಚ್‌ಗಳು ಸ್ನಾನ ಮಾಡುವುದಕ್ಕೆ ಸೇಫ್‌ ಅಲ್ಲ. ಬೀಚ್‌ನಲ್ಲಿ ನೀರಿಗಿಳಿಯುವ ಬಹುತೇಕ ಹೊರಗಿನವರು. ಅವರಿಗೆ ಈಜು ಕೂಡಾ ಬರುವುದಿಲ್ಲ.  ಲೈಫ್‌ಗಾರ್ಡ್‌ಗಳು ನೀಡುವ ಎಚ್ಚರಿಕೆಯ ಮಾತುಗಳನ್ನು ನಿರ್ಲಕ್ಷಿಸುವುದರಿಂದ ಅಪಾಯವನ್ನು ಆಹ್ವಾನಿಸಿ ಕೊಳ್ಳುತ್ತಾರೆ. ಪ್ರವಾಸಿಗರೂ ಈ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯ.
– ಯತೀಶ್‌ ಬೈಕಂಪಾಡಿ,
ಸಿಇಒ, ಬೀಚ್‌ ಟೂರಿಸಂ ಡೆವಲಪ್‌ಮೆಂಟ್‌ ಪ್ರಾಜೆಕ್ಟ್ 

ಎಚ್ಚರಿಕೆ ನಿರ್ಲಕ್ಷ್ಯ ಬೇಡ
ಪ್ರತಿ ಬಾರಿ ಎಚ್ಚರಿಕೆ ಸಂದೇಶ ನೀಡಲಾಗುತ್ತದೆ. ಆದರೆ ಅದನ್ನು ಪ್ರವಾಸಿಗರು ನಿರ್ಲಕ್ಷಿಸುತ್ತಾರೆ. ಮೊನ್ನೆಯ ಪ್ರಕರಣದಲ್ಲೂ ಎಚ್ಚರಿಕೆ ನೀಡಿದಾಗ, ಹೇಗಿರಬೇಕೆಂದು ನಮಗೆ ತಿಳಿದಿದೆ. ನಮ್ಮ ಜೀವದ ಬಗ್ಗೆ ನಮಗೆ ಗೊತ್ತಿಲ್ಲವೇ?, ನಿಮಗೇಕೆ ನಮ್ಮ ಉಸಾಬರಿ ಎಂದು ಎದುರುತ್ತರ ನೀಡಿ ಸಮುದ್ರಕ್ಕೆ ಇಳಿದಿದ್ದೇ ಅಪಾಯಕ್ಕೆ ಆಹ್ವಾನವಾಯಿತು. 
 - ಪ್ರಫ‌ುಲ್ಲಾ, ಬೀಚ್‌ ನಿರ್ವಹಣಾ ತಂಡದ ಸದಸ್ಯೆ  

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.