ಕಾಪು : ವಿದೇಶದಿಂದ ಬಂದಿದ್ದ ವ್ಯಕ್ತಿ ಬಾವಿಯ ಹಗ್ಗಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು
Team Udayavani, May 19, 2022, 7:46 PM IST
ಕಾಪು : ವಿದೇಶದಿಂದ ಕೆಲಸ ಬಿಟ್ಟು ಮನೆಯಲ್ಲಿದ್ದು ಮಾನಸಿಕ ಖಿನ್ನತೆ ಮತ್ತು ನಿದ್ರಾಹೀನತೆಯಿಂದ ಬಳಲುತ್ತಿದ್ದ ಮೂಡಬೆಟ್ಟು ನಿವಾಸಿ ಮಾರ್ಕ್ ಮಾರ್ಟಿಸ್ (63) ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಬಾವಿಯ ಹಗ್ಗಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 19 ರಂದು ನಡೆದಿದೆ.
ಮೃತ ಮಾರ್ಕ್ ಮಾರ್ಟಿಸ್ ಅವರು ಸುಮಾರು 2 ವರ್ಷದಿಂದ ವಿದೇಶದಿಂದ ಕೆಲಸ ಬಿಟ್ಟು ಮನೆಯಲ್ಲಿದ್ದು, ಮಾನಸಿಕ ಖಿನ್ನತೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಬೆಳಗ್ಗೆ ಪತ್ನಿ ಅನಿತಾ ಮಾರ್ಟಿಸ್ ಮತ್ತು ಮಗಳು ಅನಿಮ್ ಮಲ್ಲಿಗೆ ಹೂವು ಕಟ್ಟಿ ಬಳಿಕ ಮನೆಯೊಳಗೆ ನೋಡಿದಾಗ ಪತಿ ಎಲ್ಲಿಯೂ ಕಾಣಿಸಿ ಕೊಂಡಿರಲಿಲ್ಲ.
ಇದರಿಂದ ಗಾಬರಿಗೊಂಡು ಎಲ್ಲಾ ಕಡೆ ಹುಡುಕಾಡುತ್ತಿದ್ದಾಗ ಬಾವಿಯ ಸಮೀಪದಲ್ಲಿ ಕೊಡೆ ಕಂಡಿದ್ದು ಬಾವಿಯ ಬಳಿ ಹೋಗಿ ನೋಡಿದಾಗ ಬಾವಿಯ ಹಗ್ಗದಲ್ಲೇ ದೇಹ ನೇತಾಡುತ್ತಿತ್ತು ಕೂಡಲೇ ನೆರೆಕರೆಯವರನ್ನು ಕರೆದು ಮೇಲಕೆತ್ತಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ವಾಡಿ: ಯಂತ್ರಕ್ಕೆ ಸಿಕ್ಕು ಸಿಮೆಂಟ್ ಉತ್ಪಾದನಾ ಘಟಕದ ಕಾರ್ಮಿಕ ದುರ್ಮರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ