Kaup: ರೈಲು ನಿಲ್ದಾಣ ಸುತ್ತಲಿನ ನಿವಾಸಿಗಳ ಸಂಕಷ್ಟ ಕೇಳುವವರಿಲ್ಲ

ಹಲವು ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.

Team Udayavani, Nov 17, 2023, 3:16 PM IST

Kaup: ರೈಲು ನಿಲ್ದಾಣ ಸುತ್ತಲಿನ ನಿವಾಸಿಗಳ ಸಂಕಷ್ಟ ಕೇಳುವವರಿಲ್ಲ

ಕಾಪು: ಬೆಳಪು ಗ್ರಾಮದ ಪಣಿಯೂರಿನಲ್ಲಿರುವ ಪಡುಬಿದ್ರಿ ರೈಲು ನಿಲ್ದಾಣ ರಸ್ತೆ ಮೇಲಿನ ಸಂಚಾರ ಜೀವಕ್ಕೆ ಸಂಚಕಾರ ಉಂಟು ಮಾಡುತ್ತಿದೆ. ಉಚ್ಚಿಲ – ಪಣಿಯೂರು ರಸ್ತೆಯಿಂದ ಕುಂಜೂರು ರೈಲ್ವೇ ಬ್ರಿಡ್ಜ್ ಮತ್ತು ರಾ. ಹೆ. 66ರಿಂದ ಮೂಳೂರು – ಬೆಳಪು
ರಸ್ತೆಯಲ್ಲಿ ಬಂದರೆ ಪಡುಬಿದ್ರಿ ರೈಲು ನಿಲ್ದಾಣ ತಲುಪಬಹುದಾಗಿದೆ. ಆದರೆ ಎರಡೂ ರಸ್ತೆಗಳ ಸ್ಥಿತಿ ಬಹುತೇಕ ಒಂದೇ ಆಗಿದೆ.

ಕುಂಜೂರು ರೈಲ್ವೇ ಬ್ರಿಡ್ಜ್ ಬಳಿಯಿಂದ ರೈಲ್ವೇ ನಿಲ್ದಾಣದ ತಲುಪುವಲ್ಲಿನವರೆಗಿನ 1 ಕಿ.ಮೀ. ಉದ್ದದ ರಸ್ತೆ ತುಂಬಾ ಹೊಂಡ
ಬಿದ್ದಿದ್ದು, ಇಕ್ಕೆಲಗಳಲ್ಲಿ ಅಲ್ಲಲ್ಲಿ ಎಸೆದು ಹೋಗಿರುವ ತ್ಯಾಜ್ಯದ ರಾಶಿ ದುರ್ನಾತ ಬೀರುತ್ತಿದೆ. ಇನ್ನು ರಾ. ಹೆ. 66ರ ಮೂಳೂರಿ
ನಿಂದ ಬೆಳಪುವಿಗೆ ಬರುವ ಬೆಳಪುಗುತ್ತು ವರೆಗಿನ ರಸ್ತೆಯಲ್ಲಿ 300 ಮೀ. ಮತ್ತು ಬೆಳಪು ಸರಕಾರಿ ಪಾಲಿಟೆಕ್ನಿಕ್‌ ಕಾಲೇಜು
ಬಳಿಯಿಂದ ರೈಲು ನಿಲ್ದಾಣದವರೆಗಿನ 300 ಮೀ. ಉದ್ದದ ರಸ್ತೆ ಈವರೆಗೂ ಡಾಮರು ಕಂಡಿಲ್ಲ. ಬೈಳಪು ರೈಲ್ವೇ ಬ್ರಿಡ್ಜ್ ಮೇಲಂತೂ ಸರಳುಗಳು ಮೇಲೆದ್ದು ವರ್ಷ ಕಳೆದರೂ ಅದಿನ್ನೂ ದುರಸ್ತಿಯಾಗದೆ ಹಾಗೆಯೇ ಉಳಿದಿದೆ.

ಪಡುಬಿದ್ರಿ ರೈಲು ನಿಲ್ದಾಣ ರಸ್ತೆ ಕೇವಲ ರೈಲು ಪ್ರಯಾಣಿಕರ ಬಳಕೆಗೆ ಮಾತ್ರ ಸೀಮಿತವಾಗಿಲ್ಲ. ರೈಲು ನಿಲ್ದಾಣ ಆಸುಪಾಸಿನ ಹತ್ತಾರು ಕೃಷಿಕಕುಟುಂಬ, ಕಾರಣಿಕದ ದೈವಸ್ಥಾನ, ನಾಗ ಮೂಲಸ್ಥಾನಕ್ಕೆ ತೆರಳುವವರಿಗೂ ಈ ರಸ್ತೆಯೇ ಮೂಲಾಧಾರ. ಬೆಳಪು ಸರಕಾರಿ ಪಾಲಿಟೆಕ್ನಿಕ್‌ ಕಾಲೇಜು, ಇಂಡಸ್ಟ್ರಿಯಲ್‌ ಏರಿಯಾ, ಸರಕಾರಿ ಕಾಲೇಜು, ಉರೂಸ್‌ ನಡೆಸುವ ಪುರಾಣ ಪ್ರಸಿದ್ಧ ದರ್ಗಾ
ಹೀಗೆ ಹತ್ತಾರು ಕಡೆಗಳಿಗೆ ಇಲ್ಲಿಂದಲೇ ತೆರಳಬೇಕಿದೆ. ರಿಕ್ಷಾ ಚಾಲಕರು ಇಲ್ಲಿಗೆ ಬಾಡಿಗೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಬಂದರೂ ಲೆಕ್ಕಕ್ಕಿಂತ ಹೆಚ್ಚು ಬಾಡಿಗೆ ಪಾವತಿಸಬೇಕಾಗಿದೆ. ಹಲವು ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.

ಮನವಿಗೆ ಸ್ಪಂದಿಸಿಲ್ಲ

ಈ ರಸ್ತೆ ರೈಲ್ವೇ ಇಲಾಖೆಗೆ ಸಂಬಂಧ ಪಟ್ಟಿದೆ. ರಸ್ತೆ ಗ್ರಾ.ಪಂ.ಗೆ ಬಿಟ್ಟು ಕೊಡುವಂತೆ ಅಥವಾ ದುರಸ್ತಿಪಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ರೈಲ್ವೇ ಇಲಾಖೆ ಈ ಬಗ್ಗೆ ಗಮನ ನೀಡಿಲ್ಲ. ಗ್ರಾಮದ ಬಹುತೇಕ ರಸ್ತೆ ಕಾಂಕ್ರೀಟ್‌ ಗೊಂಡಿದೆ. ರಸ್ತೆ ದುರಸ್ತಿ, ದಾರಿದೀಪ, ಸೋಲಾರ್‌ ದೀಪ ಅಳವಡಿಕೆ ಬಗ್ಗೆಯೂ ಮನವಿ ಸಲ್ಲಿಸಿದ್ದು ಸೂಕ್ತ ಸ್ಪಂದನೆ ದೊರಕಿಲ್ಲ. ಮುಂದೆ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಬೇಕಾದೀತು. *ದೇವಿಪ್ರಸಾದ್‌ ಶೆಟ್ಟಿ,ಅಧ್ಯಕ್ಷರು,  ಬೆಳಪು ಗ್ರಾ. ಪಂರಸ್ತೆ ದುರಸ್ತಿಗೆ ಕ್ರಮ ಬೆಳಪು ರೈಲು ನಿಲ್ದಾಣಕ್ಕೆ ತೆರಳುವ ರಸ್ತೆ, ಬೆಳಪು ರೈಲ್ವೇ ಬ್ರಿಡ್ಜ್ ಮೇಲೆ ರಾಡ್‌ ಎದ್ದು ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿರುವ ವಿಚಾರವನ್ನು ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಆದಷ್ಟು ಶೀಘ್ರ ಸಮಸ್ಯೆ ಬಗೆಹರಿಸಿ, ರಸ್ತೆ ದುರಸ್ತಿಗೆ ಕ್ರಮ ವಹಿಸಲಾಗುವುದು.
ಸುಧಾ ಕೃಷ್ಣಮೂರ್ತಿ,
ಸಾರ್ವಜನಿಕ ಸಂಪರ್ಕಾಧಿಕಾರಿ, ಕೊಂಕಣ ರೈಲ್ವೇ, ಮಂಗಳೂರು ವಿಭಾಗ

*ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.