27 ತಿಂಗಳಲ್ಲಿ  265 ಅಪಘಾತ; 76 ಸಾವು !


Team Udayavani, Jun 26, 2018, 2:21 PM IST

padubidri-highway.png

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ಪೂರ್ಣಗೊಳ್ಳುತ್ತಿದೆ; ಆದರೆ ಅಪಘಾತಗಳ ಸಂಖ್ಯೆ ಇಳಿಮುಖವಾಗಿಲ್ಲ. ಹೆಜಮಾಡಿ ಯಿದ ಉದ್ಯಾವರ ವರೆಗಿನ 25 ಕಿ.ಮೀ. ದೂರದಲ್ಲಿ 27 ತಿಂಗಳ ಅವಧಿಯಲ್ಲಿ ಸಂಭವಿಸಿದ ಅಪಘಾತಗಳು, ಮೃತಪಟ್ಟವರು ಮತ್ತು ಗಾಯಾಳುಗಳ ಅಂಕಿ-ಸಂಖ್ಯೆ ಗಮನಿಸಿದರೆ ಹೌಹಾರಬೇಕಾದೀತು.

2016ರ ಜನವರಿಯಿಂದ 2018ರ ಮಾರ್ಚ್‌ 30ರ ವರೆಗಿನ ದಾಖಲೆ ಪ್ರಕಾರ ಕಾಪು, ಪಡುಬಿದ್ರಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ 265 ಅಪಘಾತ ಸಂಭವಿಸಿವೆ. 76 ಮಂದಿ ಸಾವಿಗೀಡಾಗಿ, 297 ಮಂದಿ ಗಾಯಗೊಂಡಿದ್ದಾರೆ.

ಅಪಘಾತ ವಲಯಗಳು
ಉದ್ಯಾವರ – ಕೊರಂಗ್ರಪಾಡಿ ಜಂಕ್ಷನ್‌, ಹಲೀಮಾ ಸಾಬ್ಜು  ಸಭಾಭವನದ ಮುಂಭಾಗ, ಉದ್ಯಾವರ ಜಂಕ್ಷನ್‌, ಉದ್ಯಾವರ ಸೇತುವೆ, ಕಟಪಾಡಿ ಫಾರೆಸ್ಟ್‌ ಗೇಟ್‌, ತೇಕಲತೋಟ, ಕಟಪಾಡಿ ಜಂಕ್ಷನ್‌, ಕಲ್ಲಾಪು ಸೇತುವೆ, ಕಂಬಳಗದ್ದೆ, ಪಾಂಗಾಳ ಕಟ್ಟಿ ಕೆರೆ, ವಿದ್ಯಾವರ್ಧಕ ಶಾಲೆ, ಪಾಂಗಾಳ ದೇವಸ್ಥಾನ, ಪಾಂಗಾಳ ಸೇತುವೆ, ಉಳಿಯಾರಗೋಳಿ,  ಪೊಲಿಪು ಜಂಕ್ಷನ್‌, ಕಾಪು ವಿದ್ಯಾನಿಕೇತನ ಜಂಕ್ಷನ್‌, ಕೊಪ್ಪಲಂಗಡಿ ಕಮ್ಯುನಿಟಿ ಹಾಲ್‌ ಬಳಿ, ಮೂಳೂರು ಬಿಲ್ಲವ ಸಂಘ, ಅಲ್‌ ಇಹ್ಸಾನ್‌ ಶಾಲೆ ಬಳಿ, ಉಚ್ಚಿಲ-ಮೂಳೂರು ಜಂಕ್ಷನ್‌, ಉಚ್ಚಿಲ ಪೇಟೆ, ಉಚ್ಚಿಲ -ಪಣಿಯೂರು ಜಂಕ್ಷನ್‌, ಉಚ್ಚಿಲ-ಎರ್ಮಾಳು ಜಂಕ್ಷನ್‌, ಎರ್ಮಾಳು ಮಸೀದಿ, ನಾರಳ್ತಾಯ ಗುಡಿ ಬಳಿ, ಪಡುಬಿದ್ರಿ ಪೇಟೆ, ಪಡುಬಿದ್ರಿ ಬೀಡುಬದಿ, ಹೆಜಮಾಡಿ ಜಂಕ್ಷನ್‌.

ಸರ್ವೀಸ್‌ ರಸ್ತೆಗಳ ಕೊರತೆ
ಗ್ರಾಮೀಣ ಒಳ ರಸ್ತೆಗಳಿಂದ ಬರುವ ವಾಹನಗಳು ಹೆದ್ದಾರಿ ಪ್ರದೇಶಿಸುವಲ್ಲಿ ಸಮರ್ಪಕ ಸರ್ವಿಸ್‌ ರಸ್ತೆ ಇಲ್ಲದೆ ಅಲ್ಲಿ ವಾಹನಗಳು ವಿರುದ್ಧ ದಿಕ್ಕಿನಲ್ಲೇ ಸಂಚರಿಸುವುದು ಅಪಘಾತಕ್ಕೆ ಮುಖ್ಯ ಕಾರಣ. ಕೆಲವು ಕಡೆ ಡಿವೈಡರ್‌ಗಳಲ್ಲೇ  ದ್ವಿಚಕ್ರ ವಾಹನಗಳು ಇನ್ನೊಂದು ರಸ್ತೆಗೆ ತೂರಿ ಬರುತ್ತಿವೆ.

ಹೆದ್ದಾರಿ ಇಲಾಖೆಯ ನಿರ್ಲಕ್ಷ್ಯ 
ಅಪಘಾತಗಳು ಮತ್ತು ಸಾವು – ನೋವಿನಿಂದಾಗಿ ಹೆದ್ದಾರಿಗೆ ಕೆಟ್ಟ ಹೆಸರು ಬರುತ್ತಿದೆ. ಅಪಾಯಕಾರಿ ಜಂಕ್ಷನ್‌ಗಳ ಕುರಿತು ವರದಿ ಸಿದ್ಧಪಡಿಸಿ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಒಪ್ಪಿಸಲಾಗಿದ್ದರೂ ಹೆದ್ದಾರಿ ಇಲಾಖೆ ಇನ್ನೂ ಯಾವುದೇ ರೀತಿಯ ಪ್ರಸ್ತಾವಿತ ಸುಧಾರಣೆಗಳನ್ನು ಕೈಗೊಳ್ಳುತ್ತಿಲ್ಲ. ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗೂ ಮಾಹಿತಿ ನೀಡಿದ್ದೇವೆ ಎನ್ನುತ್ತಾರೆ ಪೊಲೀಸರು.
ಹೆದ್ದಾರಿ ಇಲಾಖೆ ಎಚ್ಚೆತ್ತುಕೊಳ್ಳಲಿ

ರಾಷ್ಟ್ರೀಯ ಹೆದ್ದಾರಿ 66ರ ಕೆಲವು ಕಡೆಗಳಲ್ಲಿ ಸರ್ವಿಸ್‌ ರಸ್ತೆ ನಿರ್ಮಾಣವಾಗದೇ ಇರುವುದು ಅಪಘಾತಕ್ಕೆ ಮುಖ್ಯ ಕಾರಣ. ಅಸಮರ್ಪಕ ಡಿವೈಡರ್‌ಗಳು, ಅಸಮರ್ಪಕ ಕೂಡುರಸ್ತೆಗಳಿದ್ದು, ಅವುಗಳನ್ನು ಸ್ಥಳಾಂತರಿಸಲು ಹೆದ್ದಾರಿ ಇಲಾಖೆ ಕ್ರಮ ತೆಗೆದು ಕೈಗೊಳ್ಳಬೇಕು. ಜಂಕ್ಷನ್‌ಗಳಲ್ಲಿ ಪೊಲೀಸ್‌ ಪಹರೆ ಹಾಕುವುದು, ಸಿಸಿ ಕೆಮರಾ ಅಳವಡಿಸುವ ಕಾರ್ಯವಾಗಬೇಕು.
– ಅನಿಲ್‌ ಶೆಟ್ಟಿ, ರಿಕ್ಷಾ ಚಾಲಕ 

ವಿಶೇಷ ಕ್ರಮ
ಡಿವೈಡರ್‌ ಮತ್ತು ಜಂಕ್ಷನ್‌ಗಳು ಇರುವಲ್ಲಿ ಬ್ಯಾರಿಕೇಡ್‌ ಅಳವಡಿಕೆ, ಸರ್ವೀಸ್‌ ರಸ್ತೆ ಇಲ್ಲದಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವ ವಾಹನಗಳಿಗೆ ದಂಡ ವಿಧಿಸುವುದು, ಎಚ್ಚರಿಕೆ ಫಲಕ ಅಳವಡಿಕೆ, ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡುವ ಮೂಲಕ ಅಪಘಾತ ತಡೆಯಲು ಪೊಲೀಸ್‌ ಇಲಾಖೆ ಮುಂದಾಗಿದೆ. ಮುಖ್ಯವಾಗಿ ವಾಹನ ಚಾಲಕರು ತಮ್ಮ ಜೀವದ ಬಗ್ಗೆ ಎಚ್ಚರ ವಹಿಸಿದಲ್ಲಿ ಅಪಘಾತ ತಡೆಗಟ್ಟಲು ಸಾಧ್ಯವಿದೆ.
– ಹಾಲಮೂರ್ತಿ ರಾವ್‌, 
ವೃತ್ತನಿರೀಕ್ಷಕರು, ಕಾಪು

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.