ಕಾಪು ಪಿಲಿಕೋಲಕ್ಕೆ ಮುಹೂರ್ತ ನಿಗದಿ : ಮೇ 14 ರಂದು ನಡೆಯಲಿದೆ ದ್ವೈವಾರ್ಷಿಕ ಪಿಲಿಕೋಲ
Team Udayavani, May 10, 2022, 10:32 PM IST
ಕಾಪು : ಮುಂದಿನ ಶನಿವಾರ (ಮೇ 14) ಕಾಪುವಿನಲ್ಲಿ ನಡೆಯಲಿರುವ ದ್ವೈವಾರ್ಷಿಕ ಕಾಪುದ ಪಿಲಿಕೋಲಕ್ಕೆ ಪೂರ್ವಭಾವಿಯಾಗಿ ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ಮಂಗಳವಾರ ಪ್ರಾರ್ಥನೆಯೊಂದಿಗೆ ಅಭಯ ಪ್ರಸಾದ ಪಡೆಯಲಾಯಿತು.
ಇತಿಹಾಸ ಪ್ರಸಿದ್ಧವಾಗಿರುವ ಕಾಪುವಿನ ಪಿಲಿಕೋಲದಲ್ಲಿ ಭೂತ ನರ್ತಕ (ಪಿಲಿ ವೇಷಧಾರಿ) ಯಾರು ಎನ್ನುವುದು ಹಳೇ ಮಾರಿಯಮ್ಮ ದೇವಿಯ ಸನ್ನಿಽಯಲ್ಲಿ ನಿರ್ಧಾರವಾಗುತ್ತದೆ. ಪಿಲಿಕೋಲ ನಡೆಯುವ ಮುಂಚಿನ ಮಂಗಳವಾರ ಮೂರೂ ಮಾರಿಗುಡಿಗಳಿಗೆ ತೆರಳಿ ಮಾರಿಯಮ್ಮನ ಅಭಯ ಪಡೆಯುವ ಸಂಪ್ರಧಾಯವಿದೆ.
ಪಿಲಿಕೋಲದ ಸಿದ್ಧತೆಯಲ್ಲಿರುವ ಕಾಪುವಿನ ಶ್ರೀ ಬ್ರಹ್ಮಮುಗ್ಗೇರ್ಕಳ ಹುಲಿಚಂಡಿ ದೈವಸ್ಥಾನದ ಆಡಳಿತ ಮಂಡಳಿ, ಕಾಣಿಕೆ ಮನೆತನದವರು, ಗುರಿಕಾರರು ಮತ್ತು ಹತ್ತು ಸಮಸರು ಜೊತೆಗೂಡಿ ಮಂಗಳವಾರ ಕಾಪು ಹಳೇ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಗೆ ತೆರಳಿ ಮಾರಿಯಮ್ಮ ದೇವಿಯ ಬಳಿ ಪ್ರಾರ್ಥನೆ ಸಲ್ಲಿಸಿದರು.
ಮೂರೂ ಮಾರಿಗುಡಿಗಳಲ್ಲೂ ಪ್ರಾರ್ಥನೆ ಸಲ್ಲಿಸಿದ ಬಳಿಕ, ಪಿಲಿ ಭೂತದ ನರ್ತಕನಿಗೆ ಮಾರಿಯಮ್ಮ ದೇವಿಯ ದರ್ಶನ ಪಾತ್ರಿಯು ಪಿಲಿ ಕೋಲ ಸುಸೂತ್ರವಾಗಿ ನಡೆಯಲಿ ಎಂಬ ಅಭಯ ಪ್ರಸಾದವನ್ನು ನೀಡಿ, ಸಂಪ್ರಧಾಯ ಬದ್ಧವಾಗಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗುವಂತೆ ಸೂಚನೆ ನೀಡಲಾಗುತ್ತದೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ : ಜೀವಂತ ಉಡಗಳ ಮಾರಾಟ ಯತ್ನ, ಮೂರು ಆರೋಪಿಗಳ ಬಂಧನ
ಕಾಪುವಿನಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿಕೋಲವು ಧಾರ್ಮಿಕ ಮತ್ತು ಜನಪದ ಆಚರಣೆಗಳ ಜೀವಂತ ಉದಾಹರಣೆಯಾಗಿದ್ದು, ಪಿಲಿ ಕೋಲದ ಮೂಲಕವಾಗಿ ತುಳುನಾಡಿನ ಸಂಸ್ಕೃತಿ, ಸಂಪ್ರಧಾಯ, ನಂಬಿಕೆ, ನಡವಳಿಕೆ ಸಹಿತವಾಗಿ ಸತ್ಯದ ಅನಾವರಣಗೊಳ್ಳುತ್ತದೆ. ಅದಕ್ಕೆ ಪೂರ್ವದಲ್ಲಿ ಮೂರೂ ಮಾರಿಗುಡಿಗೂ ತೆರಳಿ ಪಿಲಿ ಕೋಲ ಸುಸೂತ್ರವಾಗಿ ನಡೆಯುವಂತಾಗಲು ಉತ್ತಮ ಪ್ರಸಾದ ನೀಡುವಂತೆ ಪ್ರಾರ್ಥಿಸುವುದಕ್ಕಾಗಿ ಮಾರಿಯಮ್ಮನ ಸನ್ನಿಧಿಗೆ ಆಗಮಿಸಿದ್ದೇವೆ. ಇಲ್ಲಿ ಒಳ್ಳೆಯ ಪ್ರಸಾದ ಸಿಕ್ಕಿದೆ. ಐದು ದಿನಗಳ ಜಾತ್ರೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಡುವುದಾಗಿ ಮಾರಿಯಮ್ಮ ದೇವಿಯ ಅಭಯ ದೊರಕಿದೆ ಎಂದು ದೊರೆಕಳಗುತ್ತು ಬಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ