ಕಾಪು ಮತಗಟ್ಟೆ ಬಳಿ ಪೊಲೀಸರು- ಮುಖಂಡರ ಮಾತಿನ ಚಕಮಕಿ
Team Udayavani, Apr 19, 2019, 4:09 PM IST
ಕಾಪು: ಮತಗಟ್ಟೆ ಸಮೀಪದ ಬೂತ್ ಬಳಿ ಪಾನಮತ್ತ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ಮತ್ತು ಬೂತ್ನಲ್ಲಿ ಬ್ಯಾಲೆಟ್ ಪೇಪರ್ ಹೊಂದಿದ್ದ ಆರೋಪದಲ್ಲಿ ಮಹಿಳಾ ಕಾರ್ಯಕರ್ತರನ್ನು ಚುನಾವಣಾಧಿ ಕಾರಿಗಳ ನಿರ್ದೇಶನದಂತೆ ಠಾಣೆಗೆ ಕರೆ ತಂದ ಪೊಲೀಸರ ವಿರುದ್ಧ ರಾಜ ಕೀಯ ಪಕ್ಷಗಳು ತಿರುಗಿ ಬಿದ್ದ ಘಟನೆ ಗುರುವಾರ ಕಾಪುವಿನಲ್ಲಿ ನಡೆದಿದೆ.
ಕಾಪು ಸರಕಾರಿ ಮಾ.ಹಿ.ಪ್ರಾ. ಶಾಲಾ ಮತಗಟ್ಟೆಯ 100 ಮೀ. ಹೊರಗೆ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಮತ್ತು ಬಿಜೆಪಿ ಅಭ್ಯರ್ಥಿ ಗಳ ಮಾಹಿತಿಯುಳ್ಳ ಬ್ಯಾಲೆಟ್ ಪೇಪರ್ ಕಂಡು ಬಂದಿದ್ದು, ಅದನ್ನು ಫ್ಲೆ$çಯಿಂಗ್ ಸ್ಕಾ Ìಡ್ ತಂಡ ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.
ಸ್ಥಳಕ್ಕೆ ಧಾವಿಸಿದ ಎಎಸ್ಪಿ ಕೃಷ್ಣಕಾಂತ್ ಅವರು ಕಾಪು ಸಿಐ ಶಾಂತಾರಾಮ್, ಎಸ್ಐ ನವೀನ್ ನಾಯಕ್ ಅವರನ್ನು ಸ್ಥಳಕ್ಕೆ ಕರೆಯಿಸಿ ಬೂತ್ಗಳಲ್ಲಿ ಪಾಲಿಸಬೇಕಾದ ನಿಯಮ ಪಾಲನೆಯಾಗುತ್ತಿಲ್ಲ ಎಂದು ರಾಜಕೀಯ ಪಕ್ಷಗಳ ಕಾರ್ಯಕರ್ತರನ್ನು ತೆರಳುವಂತೆ ಸೂಚಿಸಿದರು.
ಈ ಸಂದರ್ಭ ಮಾತಿನ ಚಕಮಕಿ ನಡೆದಿದ್ದು, ಬೂತ್ನಲ್ಲಿ ಬ್ಯಾಲೆಟ್ ಪೇಪರ್ ಹೊಂದಿದ್ದ ಕಾಂಗ್ರೆಸ್ನ ಪುರಸಭಾ ಸದಸ್ಯೆ ಮತ್ತು ಬಿಜೆಪಿ ಕಾರ್ಯಕರ್ತೆಯನ್ನು ಠಾಣೆಗೆ ಕರೆದೊಯ್ದಿದ್ದರು.ಇದೇ ವೇಳೆ ವ್ಯಕ್ತಿಯೋರ್ವ ಮದ್ಯ ಸೇವಿಸಿ ಮತಗಟ್ಟೆಯ ಬಳಿ ಬಂದಿದ್ದು, ಆತನನ್ನು ಪೊಲೀಸರು ಪ್ರಶ್ನಿಸಿ ವಶಕ್ಕೆ ತೆಗೆದುಕೊಂಡು, ಠಾಣೆಗೆ ಕರೆತಂದು ವೈದ್ಯಕೀಯ ಪರೀಕ್ಷೆಗಾಗಿ ಕರೆದೊಯ್ದಿದ್ದರು.
ಎರಡೂ ಘಟನೆಗಳಿಂದ ಕೆರಳಿದ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ಆಗಮಿಸಿ, ಪೊಲೀಸರ ಜತೆಗೆ ಮಾತಿನ ಚಕಮಕಿ ನಡೆಸಿದರು. ಆಗ ಪರಿಸ್ಥಿತಿ ಉದ್ವೇಗಗೊಂಡಿತು. ಕುಡಿತದ ಆರೋಪದಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡ ವ್ಯಕ್ತಿಯನ್ನು ಮತ್ತು ಪುರುಷ ಅಧಿಕಾರಿಗಳು ಠಾಣೆಗೆ ಕರೆ ತಂದ ಮಹಿಳಾ ಕಾರ್ಯಕರ್ತೆಯರನ್ನು ಬಿಡುಗಡೆಗೊಳಿಸುವಂತೆ ಒತ್ತಡ ಹೇರಿದರು. ಈ ವಿಚಾರದಲ್ಲಿ ಪೊಲೀಸರೊಂದಿಗೆ ವಿವಿಧ ರಾಕೀಯ ಪಕ್ಷಗಳ ನಾಯಕರು ಮಾತುಕತೆ ನಡೆಸಿದರು.
ಸಂಧಾನ ಸಫಲ
ಪರಿಸ್ಥಿತಿ ಹದಗೆಡುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಎಎಸ್ಪಿ ಕೃಷ್ಣಕಾಂತ್, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮುಖಂಡರ ಜತೆ ಮಾತುಕತೆ ನಡೆಸಿ ಕುಡಿದು ಮತಗಟ್ಟೆಯ ಬಳಿಗೆ ಬಂದು ವಾಹನ ಚಲಾಯಿಸಲು ಮುಂದಾದ ಯುವಕನ ವಿರುದ್ಧ ಪ್ರಕರಣ ದಾಖಲಿಸಿ, ಬಿಡುಗಡೆಗೊಳಿಸಿದರು. ಬ್ಯಾಲೆಟ್ ಪೇಪರ್ ವಿಚಾರದಲ್ಲಿ ಠಾಣೆಗೆ ಕರೆತಂದಿದ್ದ ಕಾರ್ಯಕರ್ತೆ ಯರನ್ನು ಕೂಡ ಕಳುಹಿಸಿಕೊಟ್ಟರು. ಇದೇ ವೇಳೆ ಬ್ಯಾಲೆಟ್ ಪೇಪರ್ ಹೊಂದಿದ್ದ ವಿಚಾರದಲ್ಲಿ ಫ್ಲೆ$çಯಿಂಗ್ ಸ್ಕಾ Ìಡ್ ಅಧಿಕಾರಿ ಸುರೇಶ್ ನಾಯಕ್ ಅವರು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಮತ್ತು ಸ್ಥಳೀಯ ನಾಯಕರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್