ಕಾಪು : ವೆಲ್ಲೂರು ಮಾದರಿಯ ಕೋಳಿ ಮಾಂಸ ತ್ಯಾಜ್ಯ ಸಂಗ್ರಹಣೆಗೆ ಚಾಲನೆ
Team Udayavani, Aug 12, 2017, 7:35 AM IST
ಕಾಪು: ಕೇಂದ್ರ ಸರಕಾರಿ ಸಾಮ್ಯದ ಇಂಡಿಯನ್ ಗ್ರೀನ್ ಸರ್ವಿಸ್ ಸಂಸ್ಥೆಯ ವಿ. ಶ್ರೀನಿವಾಸನ್ ವೆಲ್ಲೂರು ಅವರು ಗೊಬ್ಬರ ತಯಾರಿಕೆ ಬಗ್ಗೆ ಪುರಸಭೆ ಅಧಿಕಾರಿಗಳು, ಪುರಸಭಾ ಸದಸ್ಯರು ಮತ್ತು ಸ್ವ ಸಹಾಯ ಗುಂಪುಗಳಿಗೆ ನೀಡಿರುವ ತರಬೇತಿ ಅನ್ವಯ ಕೋಳಿ ತ್ಯಾಜ್ಯ ಗೊಬ್ಬರ ಸಂಗ್ರಹಣೆಗೆ ಕಾಪು ಪುರಸಭೆ ಮುಂದಾಗಿದ್ದು, ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಆ. 11ರಂದು ಚಾಲನೆ ನೀಡಲಾಯಿತು.
ಪ್ರಾಯೋಗಿಕ ಚಾಲನೆ ನೀಡಿದ ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮ ಎಂಬಂತೆ ಕೋಳಿ ಹಾಗೂ ಮಾಂಸದ ಅಂಗಡಿಗಳಿಂದ ಹೊರಕ್ಕೆಸೆಯಲ್ಪಡುವ ತ್ಯಾಜ್ಯದಿಂದ ಕಲ್ಚರ್ (ದ್ರವ ಗೊಬ್ಬರ) ತಯಾರಿಸಿ ದುರ್ವಾಸನೆಗೆ ಮುಕ್ತಿ ನೀಡುವ, ಕೃಷಿ ಬದುಕಿಗೆ ಆಧಾರವಾಗುವ ಮತ್ತು ಪುರಸಭೆಗೆ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ತರುವ ಉದ್ದೇಶವನ್ನು ಇಟ್ಟುಕೊಂಡು ವೆಲ್ಲೂರು ಮಾದರಿಯ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಪುರಸಭೆ ಯೋಜನೆ ರೂಪಿಸಿದೆ ಎಂದರು.
ಪುರಸಭಾಧ್ಯಕ್ಷೆ ಕು| ಸೌಮ್ಯ ಎಸ್., ಸ್ಥಾಯೀ ಸಮಿತಿ ಅಧ್ಯಕ್ಷ ಅಬ್ದುಲ್ ಹಮೀದ್, ವಿಪಕ್ಷ ನಾಯಕ ಅರುಣ್ ಶೆಟ್ಟಿ ಪಾದೂರು, ಸದಸ್ಯರಾದ ಅನಿಲ್ ಕುಮಾರ್, ಕಿರಣ್ ಆಳ್ವ, ಸುರೇಶ್ ದೇವಾಡಿಗ, ಶಾಂಭವಿ ಕುಲಾಲ್, ಅಶ್ವಿನಿ, ಮಾಲಿನಿ, ಶಾಂತಲತಾ ಶೆಟ್ಟಿ, ಸಂಜೀವಿ ಪೆಂಗಾಲ್, ರಮಾ ಶೆಟ್ಟಿ, ಮಮತಾ ಸಾಲ್ಯಾನ್, ಆರೋಗ್ಯಾಧಿಕಾರಿ ದಿನೇಶ್ ಕುಮಾರ್, ಪುರಸಭೆಯ ಅಧಿಕಾರಿ ವರ್ಗ, ಸಿಬಂಧಿಗಳು ಮತ್ತು ಪೌರ ಕಾರ್ಮಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ
ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′
Udupi: ವಿಡಿಯೋ ಕರೆ ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ
Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್
I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್
D. K. Shivakumar-ಎಚ್ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್.ಅಶೋಕ್
JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ
Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ