ಕಾವ್ಯಾ ಸಾವು :”ನಿಷ್ಪಕ್ಷಪಾತ ತನಿಖೆ ನಡೆಸಿ, ನ್ಯಾಯ ದೊರಕಿಸಿ’
Team Udayavani, Aug 4, 2017, 9:30 AM IST
ಮರವಂತೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ಕಾವ್ಯಾಳ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿ ನಾವುಂದ ರಿಚರ್ಡ್ಅಲ್ಮೇಡ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಗುರುವಾರ ಬೆಳಗ್ಗೆ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ನಾವುಂದ ಗ್ರಾಮ ಪಂಚಾಯತ್ ತನಕ ಮೆರವಣಿಯಲ್ಲಿ ತೆರಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅ ಧಿಕಾರಿ ಗಣೇಶ ಅವರಿಗೆ ಮನವಿ ಸಲ್ಲಿಸಿದರು.
ಕಾವ್ಯಳ ಸಾವು ಅನುಮಾನಾಸ್ಪದವಾಗಿದ್ದು, ವಿದ್ಯಾರ್ಥಿನಿಯರಲ್ಲಿ ಆತಂಕವುಂಟುಮಾಡಿದೆ. ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸದೆ ಹೋದಲ್ಲಿ ಇನ್ನುಮುಂದೆ ಹೆತ್ತವರು ತಮ್ಮ ಪ್ರತಿಭಾವಂತ ಹೆಣ್ಣು ಮಕ್ಕಳನ್ನು ಮುಂದಿನ ವಿದ್ಯಾಭ್ಯಾಸಕ್ಕೆ ಕಳುಹಿಸಲು ಹಿಂಜರಿಯಬಹುದು ಆದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಈ ಸಂದರ್ಭ ನಾವುಂದ ಗ್ರಾ.ಪಂ. ಅಧ್ಯಕ್ಷ ನರಸಿಂಹ ದೇವಾಡಿಗ, ಬೈಂದೂರು ವೃತ್ತ ನಿರೀಕ್ಷ ರಾಘವ ಡಿ ಪಡೀಲ್, ಗ್ರಾ.ಪಂ. ಸದಸ್ಯರಾದ ರಾಮ ಖಾರ್ವಿ, ದಿನೇಶ್ ಗಾಣಿಗ, ಹಾಗೂ ನೂರಾರು ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿªರು.