ಮೇ 7 – 9: ಬಂಟ್ವಾಡಿ – ಕೆಳಾಕಳಿ ಮಾರಿಕಾಂಬ ದೇವಿ ಜಾತ್ರೋತ್ಸವ

ಎರಡು ವರ್ಷಕ್ಕೊಮ್ಮೆ ಜಾತ್ರೆ

Team Udayavani, May 6, 2019, 6:15 AM IST

jatre

ಕುಂದಾಪುರ : ಹಕ್ಲಾಡಿ ಗ್ರಾಮದ ಕೆಳಾಕಳಿ – ಬಂಟ್ವಾಡಿಯಲ್ಲಿರುವ ಶ್ರೀ ಮಾರಿಕಾಂಬ ದೇವಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವ ಈ ಬಾರಿ ಮೇ 7 ರಿಂದ ಮೇ 9 ವರೆಗೆ ವಿಜೃಂಭಣೆಯಿಂದ ಜರಗಲಿದೆ. ಒಂದು ವರ್ಷ ಇತಿಹಾಸ ಪ್ರಸಿದ್ಧ ಶಿರಸಿ ಮಾರಿಕಾಂಬೆಗೆ ಜಾತ್ರೆಯಾದರೆ, ಅದರ ಮರು ವರ್ಷ ಇಲ್ಲಿ ಜಾತ್ರೆ ನಡೆಯುವುದು ವಿಶೇಷ.

ಮೇ 6 ರಂದು ರಾತ್ರಿ ಶ್ರೀ ದೇವಿಯ ವೈಭವದ ಬೀಡಿಗೆ ಮೆರವಣಿಗೆ, ಮೇ 7 ರಂದು ಬಲಿಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಆ ಬಳಿಕ ಭಕ್ತಿ ಲಹರಿ, ಸಂಜೆ 5 ಕ್ಕೆ ಭಜನಾ ಕಾರ್ಯಕ್ರಮ, ಬಂಟ್ವಾಡಿ ಶಾಲೆಯ “ಯಕ್ಷ ದೀವಿ’ಗೆ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಮೇ 8 ರಂದು ಬೆಳಗ್ಗೆ ಬೇವು ಉಡಿಸುವುದು, ಸುತ್ತಕ್ಕಿ ಸೇವೆ, ಮಧ್ಯಾಹ್ನ ಅನ್ನಸಂತರ್ಪಣೆ, ಆ ಬಳಿಕ ಗಾನ ಲಹರಿ, ಸಂಜೆ ಭಜನೆ, ರಾತ್ರಿ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಲಿದೆ. ಮೇ 9 ರಂದು ಬೆಳಗ್ಗೆ ತುಲಾಭಾರ ಸೇವೆ, ಮಧ್ಯಾಹ್ನ 3 ರಿಂದ ಬಲಿ ಕಾರ್ಯಕ್ರಮ, ಸಂಜೆ 7ಕ್ಕೆ ಭಜನೆ, ರಾತ್ರಿ 12 ಕ್ಕೆ ಮಾರಿ ಹೊಡೆಯುವುದು, ರಾತ್ರಿ 1 ಕ್ಕೆ ದೇವಿಯ ವೈಭವದ ಪುರ ಪ್ರವೇಶ ನೆರವೇರಲಿದೆ.

ಕೆಳಾಕಳಿ ಮಾರಿಕಾಂಬಾ ದೇವರು ಅತ್ಯಂತ ಶಕ್ತಿ ಸ್ಥಳವಾಗಿದ್ದು, ನಂಬಿದವರ ತಾಯಿ ಕೈ ಬಿಡುವುದಿಲ್ಲ ಎನ್ನುವ ಅಚಲವಾದ ನಂಬಿಕೆ ಭಕ್ತರದ್ದು. ಸಿಡುಬು, ದಡಾರ ಇತ್ಯಾದಿ ಕಾಯಿಲೆಗೆ ಜನ ಹರಕೆ ಹೊರಲಿದ್ದು, ಮೇ 9ರಂದು ಹರಿಕೆ ಹೊತ್ತವರು ಸ್ನಾನ ಮಾಡಿ ಶುಭ್ರವಾದ ಬಟ್ಟೆ ಧರಿಸಿ, ಅದರ ಮೇಲೆ ಸೊಪ್ಪಿನ ಅಟ್ಟೆ ಕಟ್ಟಿ ಗದ್ದುಗೆ ಪ್ರದಕ್ಷಿಣೆ ಬರುತ್ತಾರೆ.

ಏನಿದರ ವೈಶಿಷ್ಟé?
ಸಿರಸಿಯ ಮಾರಿಕಾಂಬೆಯಂತೆಯೇ ಇಲ್ಲಿನ ದೇವಿಯ ಮಹಿಮೆ ಅಗಾಧವಾದುದು. ತಿಂಗಳ ಮೊದಲೇ ಜಾತ್ರೆಯ ಸಿದ್ಧತೆ ಆರಂಭವಾಗುತ್ತದೆ. 21 ದಿನ ಮೊದಲು ಮರಕ್ಕೆ ಮಚ್ಚು ಹಾಕಲಾಗುತ್ತೆ. ವಾರದ ಬಳಿಕದ ಮಂಗಳವಾರ ಕೋಣಕ್ಕೆ ಧಾರೆ ಎರೆಯಲಾಗುತ್ತದೆ. ಮರುದಿನದಿಂದ ಗ್ರಾಮದ ಪ್ರತಿ ಮನೆಗೂ ಮೆರವಣಿಗೆ ಮೂಲಕ ಕೋಣ ಹೋಗುತ್ತೆ. ಸಿರಸಿ ಬಿಟ್ಟರೆ ಕರಾವಳಿ ಜಿಲ್ಲೆಗಳಲ್ಲಿ ಇಲ್ಲಿ ಮಾತ್ರ ಕೋಣದ ಮೆರವಣಿಗೆಯಿರುವುದು. ಕೋಣ ಬರುವ ದಿನ ಮನೆಯವರು ರಂಗೋಲಿ ಹಾಕಿ, ತಳಿರು ತೋರಣಗಳಿಂದ ಮನೆ ಪರಿಸರವನ್ನು ಸಿಂಗರಿಸುತ್ತಾರೆ. ಪುರಾತನ ಸಂಪ್ರದಾಯದಂತೆ ಪುರುಷರು ಡೋಲು, ಕೊಳಲು ವಾದನದ ಮೂಲಕ ಮುಂದೆ ಸಾಗಿದರೆ, ಮಹಿಳೆಯರು ಹೂ-ಕಾಯಿಯಿರುವ ಬುಟ್ಟಿ ಹೊತ್ತು ಸಾಗುತ್ತಾರೆ. ಮನೆಯಂಗಳಕ್ಕೆ ಬರುವ ಕೋಣನ ಕಾಲಿಗೆ ನೀರು ಹೊಯ್ದು, ಕೊರಳಿಗೆ ಹೂ – ಹಾರ ಹಾಕಿ, ತಲೆಗೆ ಎಣ್ಣೆ ಹಾಕಿ, ಕಣ್ಣಿನ ಕೆಳ, ಮೇಲ್ಭಾಗಕ್ಕೆ ಕಾಡಿಗೆ ಹಚ್ಚಿ, ಹಣೆಗೆ ತಿಲಕವಿಟ್ಟು ಬರಮಾಡಿಕೊಳ್ಳುವುದಲ್ಲದೇ ಅಕ್ಕಿ, ಬಾಳೆಹಣ್ಣನ್ನು ನೀಡಲಾಗುತ್ತದೆ. ಊರಿನ ಅನಿಷ್ಟಗಳನ್ನು ಈ ಕೋಣ ನಿವಾರಿಸುತ್ತೆ ಅನ್ನುವ ಪ್ರತೀತಿಯಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.