ಕೆರಾಡಿ: ಮಳೆಗಾಲದಲ್ಲಿ ಹದಗೆಟ್ಟ ರಸ್ತೆ ದುರಸ್ತಿ ಇನ್ನೂ ಆಗಿಲ್ಲ !

ಮುಂಗಾರಿಗೂ ಮುನ್ನ ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಹದಗೆಡುವ ಸಂಭವ

Team Udayavani, May 14, 2019, 6:00 AM IST

1205KDPP3

ಕೆರಾಡಿ: ಕುಂದಾಪುರದಿಂದ ನೇರಳಕಟ್ಟೆ ಮೂಲಕವಾಗಿ ಕೆರಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗೆ ಹಾಕಲಾಗಿದ್ದ ಡಾಮರು ಕಳೆದ ಮಳೆಗಾಲದಲ್ಲಿ ಕಿತ್ತು ಹೋಗಿದ್ದು, ಇನ್ನು ಇದರ ದುರಸ್ತಿ ಕಾರ್ಯ ನಡೆದಿಲ್ಲ. ಈ ಬಾರಿಯ ಮಳೆಗಾಲಕ್ಕೂ ಮುನ್ನ ಮರು ಡಾಮರೀಕರಣ ಆಗದಿದ್ದರೆ, ಈ ರಸ್ತೆ ಮತ್ತಷ್ಟು ಹದಗೆಡಲಿದೆ.

ಹಾಡಿಬಿರ್ಗಿ ಕ್ರಾಸ್‌ನಿಂದ ಕೆರಾಡಿಗೆ ಸುಮಾರು 366 ಮೀಟರ್‌ ಉದ್ದ ಹಾಗೂ 3.75 ಮೀಟರ್‌ ಅಗಲದ ಸಂಪರ್ಕ ರಸ್ತೆಗೆ ಕಳೆದ ವರ್ಷದ ಎಪ್ರಿಲ್‌ – ಮೇನಲ್ಲಿ ಡಾಮರೀಕರಣಗೊಂಡಿತ್ತು. ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿ ಇದಕ್ಕೆ 10 ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆದಿತ್ತು.

ಆದರೆ ಒಂದೇ ಮಳೆಗಾಲಕ್ಕೆ ಆ ರಸ್ತೆಯೆಲ್ಲ ಕಿತ್ತು ಹೋಗಿದೆ. ಈಗ ಕೆಲವೆಡೆ ಡಾಮರೇ ಕಾಣುತ್ತಿಲ್ಲ. ವಾಹನ ಸವಾರರಂತೂ ಈ ರಸ್ತೆಯಲ್ಲಿ ಸರ್ಕಸ್‌ ಮಾಡಿ ಸಂಚರಿಸಬೇಕಾದ ಸ್ಥಿತಿ ಇದೆ. ಅದರಲ್ಲೂ 50 ಮೀ. ರಸ್ತೆಗೆ ಡಾಮರು ಹಾಕಿದ ಜಾಗ ತುಂಬಾ ಜೇಡಿಮಣ್ಣಿನ ರಾಶಿಯಿದ್ದು, ಇಲ್ಲಿ ರಸ್ತೆಗೆ ಹಾಕಲಾದ ಡಾಮರೇ ಕಾಣಿಸುವುದಿಲ್ಲ. ಕಳೆದ ಮಳೆಗಾಲದಲ್ಲಿ ಇಲ್ಲಿನ ಜನ ಕೆರಾಡಿಯಂದ ಕುಂದಾಪುರ, ಆಜ್ರಿ, ನೇರಳಕಟ್ಟೆ, ಸಿದ್ದಾಪುರ ಕಡೆಗೆ ಸಂಚರಿಸಬೇಕಾದರೆ ಹರಸಾಹಸ ಪಡುವಂತಾಗಿತ್ತು.

ಸರಿಯಾದ ಚರಂಡಿಯಿಲ್ಲ
ಹಾಡಿಬಿರ್ಗಿ ಕ್ರಾಸ್‌ – ಕೆರಾಡಿ ರಸ್ತೆ ಕೇವಲ ಡಾಮರೀಕರಣಗೊಂಡ ಕೆಲವೇ ತಿಂಗಳಲ್ಲಿ ಹದಗೆಡಲು ಮುಖ್ಯ ಕಾರಣ ರಸ್ತೆಯ ಎರಡೂ ಬದಿಗಳಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆಯಿರಲಿಲ್ಲ. 2-3 ಕಡೆಗಳಲ್ಲಿ ಮೋರಿ ಅಗತ್ಯ ವಿದ್ದರೂ, ಅಲ್ಲಿ ಮೋರಿ ನಿರ್ಮಿಸಲು ಮುಂದಾಗಿಲ್ಲ.

ಧೂಳುಮಯ ರಸ್ತೆ
ಈಗ ಡಾಮರೆಲ್ಲ ಕಿತ್ತು ಹೋಗಿ, ಬರೀ ಮಣ್ಣಿನ ರಸ್ತೆಯಾಗಿ ಮಾರ್ಪಡಾಗಿದೆ. ಈಗ ಇಲ್ಲಿ ವಾಹನಗಳು ಸಂಚರಿಸುವಾಗ ಧೂಳುಮಯವಾಗಿದ್ದು, ಇದರಿಂದ ಪಾದಚಾರಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.

25 ವರ್ಷಗಳ ಸಮಸ್ಯೆ
ಕೆರಾಡಿಯಿಂದ ಹಾಡಿಬರ್ಗಿವರೆಗೆ ಡಾಮರೀಕರಣಗೊಂಡ ರಸ್ತೆ ಕೇವಲ ಮೂರೇ ತಿಂಗಳಲ್ಲಿ ಡಾಮರು ಕಿತ್ತುಹೋಗಿದೆ. ಕಳೆದ ಮಳೆಗಾಲದಲ್ಲಿ ಹಾಳಾಗಿದ್ದರೂ ಇನ್ನೂ ಇದರ ದುರಸ್ತಿಗೆ ಮಾತ್ರ ಮುಂದಾಗಿಲ್ಲ. ಕಳೆದ 25 ವರ್ಷಗಳಿಂದಲೂ ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಪ್ರತಿ ಸಲವೂ ಪಂಚಾಯತ್‌ನವರು ಒಂದಿಷ್ಟು ದುರಸ್ತಿ ಮಾಡುತ್ತಾರೆ. ಆದರೆ ಮಳೆಗಾಲದಲ್ಲಿ ಅದೆಲ್ಲ ಕೊಚ್ಚಿಕೊಂಡು ಹೋಗುತ್ತದೆ. ಇನ್ನಾದರೂ ಎಚ್ಚೆತ್ತುಕೊಂಡು, ಮರು ಡಾಮರೀಕರಣ ಮಾಡಲಿ.
-ರಾಘವೇಂದ್ರ, ಕೆರಾಡಿ

ದುರಸ್ತಿಗೆ ಪ್ರಯತ್ನ
ಸದ್ಯ ಯಾವುದೇ ಅನುದಾನ ಬಂದಿಲ್ಲ. ಯಾವುದಾದರೂ ಅನುದಾನ ಬಂದಲ್ಲಿ ಕೆರಾಡಿ ರಸ್ತೆಯ ದುರಸ್ತಿಗೆ ಬಳಸುವ ಬಗ್ಗೆ ಗಮನವಹಿಸಲಾಗುವುದು.
-ಶ್ರೀಧರ್‌ ಪಾಲೇಕರ್‌,
ಜ್ಯೂನಿಯರ್‌ ಎಂಜಿನಿಯರ್‌,
ಉಡುಪಿ ತಾ.ಪಂ.

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.