ಮುನ್ನೆಚ್ಚರಿಕೆ ನಿರ್ಲಕ್ಷ್ಯದಿಂದ ಹೆಚ್ಚುತ್ತಿದೆಯೇ ಅವಘಡ?


Team Udayavani, Aug 20, 2020, 7:01 AM IST

ಮುನ್ನೆಚ್ಚರಿಕೆ ನಿರ್ಲಕ್ಷ್ಯದಿಂದ ಹೆಚ್ಚುತ್ತಿದೆಯೇ ಅವಘಡ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

– ಪ್ರಶಾಂತ್‌ ಪಾದೆ
ಕುಂದಾಪುರ: ಬಹುತೇಕ ಮೀನುಗಾರರು ತಮ್ಮ ಇಲಾಖೆ ಕೊಡುವ ಹವಾಮಾನ ಸಂಬಂಧಿತ ಮುನ್ಸೂಚನೆಯನ್ನು ನಿರ್ಲಕ್ಷಿಸುತ್ತಿದ್ದಾರೆಯೇ ಅಥವಾ ರಿಸ್ಕ್ (ಹುಸಿ ಧೈರ್ಯ) ತೆಗೆದುಕೊಂಡು ಹೋಗುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ.

ಮುನ್ನೆಚ್ಚರಿಕೆಯನ್ನು ನಿರ್ಲಕ್ಷಿಸುತ್ತಿರುವುದರಿಂದಲೇ ಬೋಟ್‌ ಅಥವಾ ದೋಣಿಗಳ ಅವಘಡ‌ ಹೆಚ್ಚುತ್ತಿದೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಕೊಡೇರಿಯಲ್ಲಿ ಸಂಭವಿಸಿದ ದೋಣಿ ದುರಂತದ ಬಳಿಕ ಈ ಪ್ರಶ್ನೆ ಮತ್ತೂಮ್ಮೆ ಮುನ್ನೆಲೆಗೆ ಬಂದಿದೆ.

ದುರಂತ ಸಂಭವಿಸಿದ ರವಿವಾರ ಮೀನುಗಾರಿಕಾ ಅಥವಾ ಜಿಲ್ಲಾಡಳಿತ ಮಳೆ, ಗಾಳಿ, ಅಲೆಯಬ್ಬರದ ಬಗ್ಗೆ ಯಾವುದೇ ಮುನ್ಸೂಚನೆ ನೀಡಿರದಿದ್ದರೂ, ಮೀನುಗಾರರ ಆಂತರಿಕ ವಲಯದಲ್ಲಿ ಮಾತ್ರ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಕಡಲಿಗಿಳಿಯಬಾರದು ಎನ್ನುವ ಸಂದೇಶವಿತ್ತು ಎನ್ನಲಾಗಿದೆ. ಅದಾಗಿಯೂ ಕೆಲವರು ಭಂಡ ಧೈರ್ಯದಿಂದ ಮೀನುಗಾರಿಕೆಗೆ ತೆರಳಿ, ಈ ತರಹದ ಅಪಾಯವನ್ನು ತಂದುಕೊಳುತ್ತಿರುವುದು ಮಾತ್ರ ಕಳವಳದ ಸಂಗತಿ.

ಮೊಬೈಲ್‌ಗೆ ಸಂದೇಶ
ಕಡಲ ಅಲೆಗಳ ಅಬ್ಬರದ ಎತ್ತರ ಹಾಗೂ ಗಾಳಿಯ ವೇಗದ ತೀವ್ರತೆಯ ಕುರಿತು ಪ್ರತಿ ದಿನವೂ ದಿನ ಮುಂಚಿತವಾಗಿ ಖಾಸಗಿ ಸಂಸ್ಥೆಯೊಂದರಿಂದ ಮೀನುಗಾರರ ಮೊಬೈಲ್‌ಗೆ ಸಂದೇಶ ಬರುತ್ತದೆ. ಆ. 15ರಂದು ಮರು ದಿನದ ಮಾಹಿತಿಯನ್ನು ಕಳುಹಿಸಿದ್ದು, ಅದರಲ್ಲಿ ಗಂಗೊಳ್ಳಿ ಭಾಗದಲ್ಲಿ ಅಲೆಯಬ್ಬರ ಅಪಾಯಮಟ್ಟದಲ್ಲಿ ಇರುತ್ತದೆ ಎನ್ನುವ ಸಂದೇಶ ಬಂದಿತ್ತು.

ನಿರ್ಲಕ್ಷ್ಯ ತರವಲ್ಲ
ಅಲೆಗಳ ಅಬ್ಬರ 5 ಅಡಿಗಿಂತ ಜಾಸ್ತಿ ಹಾಗೂ ಗಾಳಿಯ ವೇಗ ಗಂಟೆಗೆ 20 ಕಿ.ಮೀ. ಗಿಂತ‌ ಹೆಚ್ಚಿದ್ದರೆ ಅಪಾಯ ಎಂದು ಗೊತ್ತಿದ್ದರೂ ಕೊಡೇರಿಯಲ್ಲಿ ಮೀನುಗಾರರು ಹವಾಮಾನ ವರದಿಯನ್ನು ನಿರ್ಲಕ್ಷಿಸಿದ್ದಾರೆ. ಈ ತರಹದ ನಿರ್ಲಕ್ಷ್ಯದಿಂದಲೇ ಆಗಾಗ ಸಮುದ್ರದಲ್ಲಿ ಇಂತಹ ದುರಂತಗಳು ಮರುಕಳಿಸುತ್ತಿವೆ. ಹವಾಮಾನ ವರದಿಯು ಹೆಚ್ಚಿನ ಸಂದರ್ಭ ಶೇ. 100ರಷ್ಟು ಸತ್ಯವಾಗಿರುತ್ತದೆ. ಇದನ್ನು ನಿರ್ಲಕ್ಷಿಸುವುದು ಸರಿಯಲ್ಲ ಎನ್ನುವುದು ಇಲಾಖೆಯ ಅಧಿಕಾರಿಯೊಬ್ಬರ ಅಭಿಪ್ರಾಯ.

ಪರಿಸ್ಥಿತಿ ಹೇಗಿತ್ತು?
ಸಾಮಾನ್ಯವಾಗಿ ನಾಡದೋಣಿಗಳು ಮೀನುಗಾರಿಕೆಗೆ ತೆರಳಬೇಕಾದರೆ ಅಲೆಗಳ ಅಬ್ಬರ 5 ಅಡಿಗಿಂತ ಕಡಿಮೆ ಇರಬೇಕು. ಗರಿಷ್ಠವೆಂದರೆ 6 ಅಡಿ ಇರಬೇಕು. ಗಾಳಿಯ ವೇಗ ಗಂಟೆಗೆ 18 ಕಿ.ಮೀ. ಒಳಗೆ ಇರಬಹುದು. ದೊಡ್ಡ ಬೋಟ್‌ ಹೊರತುಪಡಿಸಿ, ಪರ್ಸಿನ್‌ ಮತ್ತಿತರ ಸಣ್ಣ ಬೋಟುಗಳು ಕೂಡ ಹೆಚ್ಚು ಕಡಿಮೆ ಇದನ್ನು ಪಾಲಿಸುತ್ತವೆ. ಆದರೆ ದುರಂತ ಸಂಭವಿಸಿದ ದಿನ ಮೀನುಗಾರಿಕೆಗೆ ತೆರಳಿದಾಗ ಅಬ್ಬರ, ಗಾಳಿಯ ವೇಗ ಕಡಿಮೆಯಿದ್ದರೂ ಅವರು ವಾಪಸ್‌ ಬರುವಾಗ ಅಲೆಗಳ ಅಬ್ಬರವು ತೀವ್ರವಾಗಿತ್ತು ಎನ್ನುತ್ತಾರೆ ಮೀನುಗಾರ ರಮೇಶ್‌ ಖಾರ್ವಿ ಕೊಡೇರಿ.

ಮುನ್ನೆಚ್ಚರಿಕೆ ಕೊಟ್ಟಿರಲಿಲ್ಲ
ಮೀನುಗಾರರಿಗೆ ಆ ದಿನ ಕಡಲಿಗಿಳಿ ಯದಂತೆ ಯಾವುದೇ ಮುನ್ನೆಚ್ಚರಿಕೆ ಕೊಟ್ಟಿರಲಿಲ್ಲ. ನಮಗೆ ಹವಾಮಾನ ಇಲಾಖೆಯಿಂದ ಬಂದ ವರದಿ ಪ್ರಕಾರ ಮುನ್ನೆಚ್ಚರಿಕೆ ಕೊಡುವ ಸಂಭವ ಇರಲಿಲ್ಲ. ಆದರೂ ಮೀನುಗಾರರು ಈ ಸಮಯದಲ್ಲಿ ಸಾಧ್ಯವಾದಷ್ಟು ನೋಡಿಕೊಂಡು ಕಡಲಿ ಗಿಳಿಯುವುದು ಸೂಕ್ತ. ರಿಸ್ಕ್ ತೆಗೆದುಕೊಳ್ಳುವುದು ಸರಿಯಲ್ಲ. ಮೃತಪಟ್ಟ ಮೀನುಗಾರರಿಗೆ ಇಲಾಖೆಯ ಮಾನದಂಡದಂತೆ ದಾಖಲೆಗಳನ್ನು ಪರಿಶೀಲನೆ ನಡೆಸಿ, ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು.
– ಗಣೇಶ್‌ ಕೆ., ಉಪ ನಿರ್ದೇಶಕರು, ಮೀನುಗಾರಿಕಾ ಇಲಾಖೆ, ಉಡುಪಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.