ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ


Team Udayavani, Apr 25, 2024, 4:03 PM IST

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಉಡುಪಿ: ಕರಾವಳಿಯ ಸಮಸ್ಯೆಗಳನ್ನು ಪ್ರಧಾನಮಂತ್ರಿಗಳ ಗಮನಕ್ಕೆ ತರುವ ಅಭಿವೃದ್ಧಿಗೆ ಪೂರಕವಾಗುವ ಸಂಸದರು ಇಲ್ಲಿಗೆ ಬೇಕಾಗಿದ್ದಾರೆ ಎಂದು ಮಾಜಿ ತಾಲೂಕು ಪಂಚಾಯತ್‌ ಸದಸ್ಯ ಕಿರಣ್‌ ಕುಮಾರ್‌ ಉದ್ಯಾವರ ಅವರು ಹೇಳಿದ್ದಾರೆ .

ಜಿಲ್ಲಾ ಅಭಿವೃದ್ಧಿ ಕೆಲಸದಲ್ಲಿ 10 ವರ್ಷ ಹಿಂದೆ ಬಿದ್ದಿದ್ದೇವೆ. ಶಿಕ್ಷಣ ಕ್ಷೇತ್ರದಲ್ಲಿ ಮುಂದೆ ಇರುವ ಉಡುಪಿಯಲ್ಲಿ ಒಂದೇ ಒಂದು ಐಟಿ ಅಥವಾ ಯುವಕ ಯುವತಿಯರಿಗೆ ಒಳ್ಳೆಯ ಉದ್ಯೋಗ ನೀಡುವಂತಹ ಯಾವುದೇ ಕಂಪನಿ ಕಾಣಸಿಗುವುದಿಲ್ಲ. ಇಲ್ಲಿನ ಯುವಕರು ಯುವತಿಯರು ಉದ್ಯೋಗ ಅರಸಿ ಇತರ ಕಡೆಗೆ ಹೋಗುತ್ತಿದ್ದಾರೆ. ಅದು ನಿಲ್ಲಬೇಕು .ಇಲ್ಲಿಯೇ ಇಲ್ಲಿನ ಯುವಕ ಯುವತಿಯರಿಗೆ ಉದ್ಯೋಗ ಅವಕಾಶ ಸಿಗುವಂತಾಗಬೇಕು ಎಂದರು . ಈಗಾಗಲೇ ನಾವು ಉಡುಪಿ ನಗರದ ಹೊರವಲಯದಲ್ಲಿರುವ ಸಂತೆಕಟ್ಟೆರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆ ನಮ್ಮಕಣ್ಣ ಮುಂದಿದೆ .ಅಲ್ಲದೇ ಮಲ್ಪೆ ಮೀನುಗಾರಿಕಾ ಬಂದರಿಗೆ ಹಾಗೂ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಮಲ್ಪೆ ಬೀಚ್‌ ಗೆ ಹೋಗುವ ರಸ್ತೆಯ ಕಾಮಗಾರಿಯು ಇನ್ನೂ ಕುಂಠಿತವಾಗಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ .

ಕರಾವಳಿಯ ಮೀನುಗಾರರ ನಿರ್ಲಕ್ಷé ಮಾಡಲಾಗುತ್ತಿದೆ . ಈ ಹಿಂದೆ ಮುಳುಗಡೆಯಾಗಿದ್ದ ಸುವರ್ಣ ತ್ರಿಭುಜ ಬೋಟ್‌ನ ಬಗ್ಗೆ ಯಾವುದೇ ಸರಿಯಾದ ಮಾಹಿತಿಯನ್ನು ಇನ್ನೂ ನೀಡಿಲ್ಲ. ಇದಕ್ಕೆ ಕಾರಣ ಇಲ್ಲಿನ ಯಾವುದೇ ಲೋಕಸಭಾ ಸದಸ್ಯರು ಈ ಬಗ್ಗೆ ಸರಿಯಾದ ಮಾಹಿತಿ ಪ್ರಧಾನಿಗಳ ಗಮನಕ್ಕೆ ತಂದಿಲ್ಲ. ಇಲ್ಲಿನ ಯಾವುದೇ ಲೋಕಸಭಾ ಸದಸ್ಯರು ತಮ್ಮ ಹೆಸರಿನಿಂದ ತಮ್ಮ ಅಭಿವೃದ್ಧಿ ಕಾರ್ಯದಿಂದಗೆಲ್ಲದೇ ಬರೀ ಪ್ರಧಾನಮಂತ್ರಿಗಳ ಹೆಸರಲ್ಲಿಗೆದ್ದಿದ್ದಾರೆ. ಹೀಗಾಗಿ ಇಲ್ಲಿನ ಯಾವುದೇ ಸಮಸ್ಯೆಗಳು ಪ್ರಧಾನ ಮಂತ್ರಿಗಳವರೆಗೆ ಹೋಗುವುದಿಲ್ಲ. ಮುಂದೆ ಬರುವ ಸಂಸದರು ಕೂಡ ಪ್ರಧಾನಿಗಳ ಹೆಸರಲ್ಲಿಗೆದ್ದರೆ ಕರಾವಳಿಗೆ ಅನ್ಯಾಯ ಕಟ್ಟಿಟ್ಟ ಬುತ್ತಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ . ಮುಂದೆ ಓರ್ವ ಉತ್ತಮ ನಾಯಕನನ್ನು ನಾವು ಗೆಲ್ಲಿಸಿದರೆ ಇಲ್ಲಿನ ಸಮಸ್ಯೆಗಳ ಬಗ್ಗೆ ಪ್ರಧಾನಿಗಳ ಬಳಿ ಮಾತನಾಡಲು ಸಾಧ್ಯವಾಗುತ್ತದೆ .ಆದುದರಿಂದ ಶಾಸಕರಾಗಿ, ಮಂತ್ರಿಗಳಾಗಿ, ಲೋಕಸಭಾ ಸದಸ್ಯರಾಗಿ ಅನುಭವ ಇರುವ ಜಯಪ್ರಕಾಶ್‌ ಹೆಗ್ಡೆ ಅವರನ್ನು ಆರಿಸಿ ಕಳಿಸಿದರೆ ಕರಾವಳಿ ಭಾಗದಜನರಿಗೆ ನ್ಯಾಯ ಒದಗಿಸಿದಂತಾಗುತ್ತದೆ . ಕೋಟ ಶ್ರೀನಿವಾಸ ಪೂಜಾರಿ ಅವರು ಓರ್ವ ಉತ್ತಮ ನಾಯಕ ಅವರು ರಾಜ್ಯದ ಅಭಿವೃದ್ಧಿಗೆ ಅಗತ್ಯವಾಗಿ ಬೇಕಾಗಿದ್ದಾರೆ . ಮತ್ತೂಂದೆಡೆ ಜಯಪ್ರಕಾಶ್‌ ಹೆಗ್ಡೆ ಅವರು ಕೂಡಾ ಓರ್ವ ಅಭಿವೃದ್ಧಿಗೆ ಪೂರಕವಾಗಿರುವ ಅಭ್ಯರ್ಥಿಯಾಗಿದ್ದಾರೆ. ಅವರು ಸಂಸದರಾಗಿ ದೇಶದ ಹಾಗೂ ಉಡುಪಿ ಚಿಕ್ಕಮಗಳೂರಿನ ಅಭಿವೃದ್ಧಿಗೆ ಬೇಕಾಗಿದ್ದಾರೆ .

ಯಾವುದೇ ರಾಜಕೀಯ ಪಕ್ಷದ ಪ್ರಚಾರ ಕಾರ್ಯದಲ್ಲಿ ಹಿಂದುಳಿದ ವರ್ಗದವರನ್ನು ಕಾಣಬಹುದು. ಎಲ್ಲ ಕೆಲಸಕಾರ್ಯದಲ್ಲು ಹಿಂದುಳಿದ ವರ್ಗದವರಿಗೆ ಮುಂದೆ ಅದೇ ರೀತಿ ಅನ್ಯಾಯ ಕೂಡ ಆಗುವುದು ಹಿಂದುಳಿದ ವರ್ಗದವರಿಗೆ ಮಾತ್ರ. ಇದನ್ನು ಯಾರು ಅರ್ಥ ಮಾಡಿಕೊಳ್ಳುವುದಿಲ್ಲ.ಇತರರ ಹಾಗೇ ನಮ್ಮ ಮುಂದಿನ ಮಕ್ಕಳಿಗೆ ಉತ್ತಮ ಭವಿಷ್ಯ, ವಿದ್ಯಾಭ್ಯಾಸ, ಉದ್ಯೋಗ ಸಿಗುವಂತಾಗಬೇಕು.

ಮೊಗವೀರರಿಗೆ ಬಿಲ್ಲವ ಮತ್ತು ಬಂಟರು ಎರಡು ಕಣ್ಣುಗಳಿದ್ದಂತೆ .ಇದರಲ್ಲಿ ನಾವು ನಮ್ಮ ಎರಡೂ ಕಣ್ಣುಗಳನ್ನು ಉಳಿಸಿಕೊಳ್ಳುವುದು ಅತೀಮುಖ್ಯ .ಇಬ್ಬರನ್ನು ರಾಜಕೀಯದ ಮುಂಚೂಣಿಯಲ್ಲಿರಿಸಬೇಕಾದರೆ ಕೋಟ ಶ್ರೀನಿವಾಸ ಪೂಜಾರಿ ಅವರು ರಾಜ್ಯದಲ್ಲಿ ಹಾಗೂ ಜಯಪ್ರಕಾಶ್‌ ಹೆಗ್ಡೆ ಅವರು ಸಂಸದರಾಗಿ ದೇಶದಲ್ಲಿರುವುದು ಅತಿಮುಖ್ಯ. ಮೊಗವೀರರಿಗೆ ದೇಶದಲ್ಲಿ ಸಂಸದರಾಗಿ ಜಯಪ್ರಕಾಶ್‌ ಹೆಗ್ಡೆ ಮತ್ತು ರಾಜ್ಯದಲ್ಲಿ ನಮ್ಮ ಪರವಾಗಿ ಹೋರಾಡಲು ಎರಡು ಶಕ್ತಿ ಸಿಕ್ಕಂತಾಗುತ್ತದೆ. ಆದುದರಿಂದ ನಾವು ಯೋಚಿಸಿ ಮತ ಹಾಕಬೇಕಾಗಿದೆ ಎಂದು ಕಿರಣ್‌ಕುಮಾರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.