ಕೆ.ಕೆ. ಸರಳಾಯ ಅವರ 85ನೇ ಹುಟ್ಟುಹಬ್ಬ ; ಸಮ್ಮಾನ
Team Udayavani, May 4, 2017, 11:48 AM IST
ಉಡುಪಿ: ಹಲವು ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಕೆ. ಕೃಷ್ಣರಾಜ ಸರಳಾಯ ಅವರ 85ನೇ ಹುಟ್ಟುಹಬ್ಬದ ಸಮ್ಮಾನ ಕಾರ್ಯಕ್ರಮ ಗೋವಿಂದ ಕಲ್ಯಾಣ ಮಂಟಪದಲ್ಲಿ ಸೋಮವಾರ ಗಣ್ಯರ ಉಪಸ್ಥಿತಿಯಲ್ಲಿ ನೆರವೇರಿತು.
ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಆಡಳಿತ ಮಂಡಳಿ, ನೌಕರರು, ತಾಲೂಕು ಬ್ರಾಹ್ಮಣ ಮಹಾಸಭಾ, ರಂಗಭೂಮಿ, ಉಡುಪಿ ರೋಟರಿ, ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್ಗಳ ಮಹಾಮಂಡಳ, ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅವರನ್ನು ಸಮ್ಮಾನಿಸಲಾಯಿತು.
ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರು ಕೃಷ್ಣರಾಜ ಸರಳಾಯ ಅವರ ಸಮಾಜ ಸೇವೆಯನ್ನು ಸ್ಮರಿಸಿದರು.
ಮಣಿಪಾಲ್ ಮೀಡಿಯ ನೆಟ್ವರ್ಕ್ ಲಿ. ಆಡಳಿತ ನಿರ್ದೇಶಕ ಟಿ. ಸತೀಶ್ ಯು. ಪೈ, ತರಂಗ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್. ಪೈ, ವಿಧಾನ ಪರಿಷತ್ ಸದಸ್ಯ ಪ್ರತಾಪ್ಚಂದ್ರ ಶೆಟ್ಟಿ, ಅಲ್ಪ ಸಂಖ್ಯಾಕರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ಮಾಜಿ ಶಾಸಕ ಬಸವರಾಜ್, ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉಡುಪಿ ಕೋ-ಆಪರೇಟಿವ್ ಟೌನ್ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಬಿ.ವಿ. ಲಕ್ಷ್ಮೀನಾರಾಯಣ, ಬ್ಲೋಸಂ ಫೆರ್ನಾಂಡಿಸ್ ಉಪಸ್ಥಿತರಿದ್ದರು.
ಸಚಿವ ಪ್ರಮೋದ್ ಮಧ್ವರಾಜ್, ಶಾಸಕ ವಿನಯ್ಕುಮಾರ್ ಸೊರಕೆ, ಮಾಜಿ ಶಾಸಕ ಕೆ. ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹಮೂರ್ತಿ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಉಪಾಧ್ಯಕ್ಷ ಯು.ಕೆ. ರಾಘವೇಂದ್ರ ರಾವ್ ಹಾಗೂ ಆಡಳಿತ ಮಂಡಳಿ ನಿರ್ದೇಶಕರು ಮತ್ತು ನೌಕರ ವೃಂದದವರು ಆಗಮಿಸಿ ಶುಭಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ