ಗ್ರಾಮೀಣರಲ್ಲಿ ಆರ್ಥಿಕ ವ್ಯವಹಾರದ ಅರಿವು ಬ್ಯಾಂಕ್‌ಗಳ ಜವಾಬ್ದಾರಿ


Team Udayavani, Feb 22, 2018, 12:52 PM IST

2102Kapu1.jpg

ಕಾಪು: ಗ್ರಾಮೀಣ ಪ್ರದೇಶದಲ್ಲಿರುವ ಮಾನವ ಸಂಪನ್ಮೂಲ, ಆರ್ಥಿಕ ಸಂಪನ್ಮೂಲ, ಪ್ರಾಕೃತಿಕ ಸಂಪನ್ಮೂಲದ ಸದ್ಬಳಕೆಯಾಗಬೇಕಾದಲ್ಲಿ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳು ದೊರಕಬೇಕಿವೆ. ಗ್ರಾಮೀಣ ಜನರಲ್ಲಿ ಆರ್ಥಿಕ ವ್ಯವಹಾರದ ಬಗ್ಗೆ ಅರಿವು ಮೂಡಿಸುವುದರ ಜತೆಗೆ, ಬ್ಯಾಂಕ್‌ಗಳಲ್ಲಿ ಸಿಗುವ ಸೌಲಭ್ಯಗಳ ಬಗ್ಗೆಯೂ ಜಾಗೃತಿ ಮೂಡಿಸುವುದು ಇಂದಿನ ಆವಶ್ಯಕ ಕಾರ್ಯವಾಗಿದೆ ಎಂದು ಕಾಪು ಶಾಸಕ ವಿನಯಕುಮಾರ್‌ ಸೊರಕೆ ಹೇಳಿದರು.
ಫೆ. 2ರಂದು ಕಾಪು ಮಹಾಬಲ್‌ ಮಾಲ್‌ನಲ್ಲಿ ನೂತನವಾಗಿ ಪ್ರಾರಂಭ ಗೊಂಡ ಶ್ರೀ ಗೋಕರ್ಣನಾಥ ಕೋ-
ಆಪರೇಟಿವ್‌ ಬ್ಯಾಂಕ್‌ ಲಿ. ಮಂಗಳೂರು ಇದರ 14ನೇ ನೂತನ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಪು ತಾಲೂಕು ಕೇಂದ್ರ ವಾಗಿದೆ. ಪುರಸಭೆಯಾಗಿ ಪರಿವರ್ತನೆ ಗೊಂಡಿದೆ. ತಾಲೂಕಿನ ಅಭಿವೃದ್ಧಿಗೆ ಪೂರಕವಾಗಿ ಆರ್ಥಿಕ ವ್ಯವಸ್ಥೆಯಲ್ಲೂ ಬೆಳವಣಿಗೆ ಕಾಣಬೇಕಿದ್ದು, ಪೈಪೋಟಿಯ ಯುಗದಲ್ಲಿ ಕಾಪುವಿ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಶಾಖೆಯು ಇತರೆಲ್ಲ ಶಾಖೆಗಳಿಗಿಂತಲೂ ಮಾದರಿಯಾಗಿ ಮೂಡಿಬರಲಿ ಎಂದು ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಗೋಕರ್ಣನಾಥ ಕೋ-ಆಪರೇಟಿವ್‌ ಬ್ಯಾಂಕಿನ ಅಧ್ಯಕ್ಷ ಕೆ. ಗೋಪಾಲಕೃಷ್ಣ ಮಾತ ನಾಡಿ, ರಾಷ್ಟ್ರೀಕೃತ ಬ್ಯಾಂಕ್‌ಗಳ ಮಾದರಿಯಲ್ಲೇ ಗೋಕರ್ಣನಾಥ ಬ್ಯಾಂಕ್‌ನ ವ್ಯವಸ್ಥೆಯನ್ನೂ ಅಭಿವೃದ್ಧಿ ಗೊಳಿಸಲಾಗುತ್ತಿದೆ. ಕೋರ್‌ ಬ್ಯಾಂಕಿಂಗ್‌ ಸಿಸ್ಟಮ್‌, ಅಂತರ್‌ ಶಾಖಾ ನಗದೀಕರಣ, ನೆಟ್‌ವರ್ಕ್‌ ಬ್ಯಾಂಕಿಂಗ್‌, ಸೇಫ್‌ ಲಾಕರ್‌, ಮೊಬೈಲ್‌ ಬ್ಯಾಂಕಿಂಗ್‌, ಎಟಿಎಂ ಸೌಲಭ್ಯ ಸಹಿತ ಹಲವಾರು ವ್ಯವಸ್ಥೆಗಳನ್ನು ಅಳವಡಿಸಲಾಗುವುದು. ಬ್ಯಾಂಕ್‌ನ 15ನೇ ಶಾಖೆ ಅತೀ ಶೀಘ್ರದಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿ ಶುಭಾರಂಭಗೊಳ್ಳಲಿದೆ ಎಂದರು.

ಉಡುಪಿ ಸಾಯಿರಾಧಾ ಗ್ರೂಪ್ಸ್‌ನ ನಿರ್ದೇಶಕ ಮನೋಹರ್‌ ಶೆಟ್ಟಿ ಗಣಕ ಯಂತ್ರಕ್ಕೆ ಚಾಲನೆ ನೀಡಿದರು. ಜೆಡಿಎಸ್‌ನ ಜಿಲ್ಲಾಧ್ಯಕ್ಷ ಮತ್ತು ಮಹಾಬಲ್‌ ಮಾಲ್‌ನ ಪಾಲುದಾರ ಯೋಗೀಶ್‌ ಶೆಟ್ಟಿ ಬಾಲಾಜಿ ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಿದರು.

ಕಾಪು ಪುರಸಭೆ ಅಧ್ಯಕ್ಷೆ ಮಾಲಿನಿ, ಉಪಾಧ್ಯಕ್ಷ ಎಚ್‌. ಉಸ್ಮಾನ್‌, ಸಹಕಾರಿ ಸಂಘಗಳ ಉಡುಪಿ ಜಿಲ್ಲಾ ಉಪನಿಬಂಧಕ ಪ್ರವೀಣ್‌ ನಾಯ್ಕ, ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ಮಾಧವ ಆರ್‌. ಪಾಲನ್‌, ಬೆಂಗಳೂರು ಸ್ಟೀಲ್‌ ಪ್ರೊಡಕ್ಟ್ ನಿರ್ದೇಶಕ ಶಭಿ ಅಹಮ್ಮದ್‌ ಖಾಜಿ, ಮೂಳೂರು ಬಿಲ್ಲವ ಸಂಘದ ಅಧ್ಯಕ್ಷ ಸುಭಾಶ್‌ಚಂದ್ರ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಗೋಕರ್ಣನಾಥ ಕೋ-ಆಪ್‌. ಬ್ಯಾಂಕಿನ ಉಪಾಧ್ಯಕ್ಷ ರಾಜೇಶ್‌ ಕುಮಾರ್‌ ಜಿ. ಸುವರ್ಣ ಸ್ವಾಗತಿಸಿದರು. ಪ್ರ. ವ್ಯವಸ್ಥಾಪಕ ಭರತ್‌ ಭೂಷಣ್‌ ಸುವರ್ಣ ಪ್ರಸ್ತಾವನೆಗೈದರು. ನಿರ್ದೇ ಶಕ ಜಯರಾಮ ಕಾರಂದೂರು ವಂದಿಸಿದರು.  ಬೆಳ್ತಂಗಡಿ ಶಾಖಾಧಿಕಾರಿ ರಮೇಶ್ಚಂದ್ರ ಪಾಂಗಳ ಕಾರ್ಯಕ್ರಮ ನಿರೂಪಿಸಿದರು.
 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.