ಕೊಡೇರಿ: ಉಪ್ಪು ನೀರಿನಿಂದ ‘ಜೀವಜಲ’ಕ್ಕೆ ಸಂಕಷ್ಟ
Team Udayavani, May 26, 2019, 6:10 AM IST
ಕುಂದಾಪುರ: ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಭಾಗದ ಮೂರೂ ಸುತ್ತಲೂ ಹೊಳೆಯಿದೆ. ಆದರೆ ಕುಡಿಯುವ ನೀರಿಗೆ ಮಾತ್ರ ಬರ ಉಂಟಾಗಿದೆ. ಕಾರಣ ಇಲ್ಲಿರುವ ಬಾವಿ, ಸಹಿತ ಎಲ್ಲ ನೀರಿನ ಮೂಲಗಳಲ್ಲಿ ಉಪ್ಪು ನೀರಿನ ಪ್ರಭಾವವಿದೆ. ಇಲ್ಲಿನ ಸುಮಾರು 150ಕ್ಕೂ ಹೆಚ್ಚು ಮನೆಗಳಿಗೆ ‘ಜೀವಜಲ’ಕ್ಕೆ ಸಂಕಷ್ಟ ಎದುರಾಗಿದೆ.
ಕೊಡೇರಿಯ ಅಕ್ಕರಮಠ ದೇವಸ್ಥಾನದ ಉತ್ತರ ಭಾಗದಲ್ಲಿ ಸುಮಾರು 100ಕ್ಕೂ ಹೆಚ್ಚು ಮನೆಗಳಿಗೆ ನೀರಿನ ಸಮಸ್ಯೆಯಿದ್ದರೆ, ಇಲ್ಲಿನ ಎಡ ಮಾವಿನ ಹೊಳೆಯಲ್ಲಿ 60-70 ಮನೆಗಳಿಗೆ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ.
ಟ್ಯಾಂಕರ್ ನೀರು ಪೂರೈಕೆ
ಕಿರಿಮಂಜೇಶ್ವರ ಗ್ರಾ.ಪಂ. ಪಂಚಾಯತ್ ವತಿಯಿಂದ ಕೊಡೇರಿ ಭಾಗಕ್ಕೆ ಎರಡು ದಿನಗಳಿಗೊಮ್ಮೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಪ್ರತಿ ಮನೆಗೆ 150ರಿಂದ 200 ಲೀಟರ್ ವರೆಗೆ ಕೊಡಲಾಗುತ್ತಿದೆ. ಆದರೆ ಇದು ಸಾಲದಾಗಿದೆ. ಇನ್ನು 3 ದಿನಕ್ಕೊಮ್ಮೆ ನಳ್ಳಿ ಮೂಲಕ ಮನೆಗೆ 4-5 ಕೊಡಪಾನವಷ್ಟೇ ನೀರು ಸರಬರಾಜು ಮಾಡಲಾಗುತ್ತಿದೆ.
ಸಮಸ್ಯೆಯೇನು?
ನೀರಿನ ಸಮೃದ್ಧತೆಯಿದೆ. ಆದರೆ ಅದನ್ನು ಪಂಚಾಯತ್ ಸಮರ್ಪಕವಾಗಿ ನಿರ್ವಹಿಸುವಲ್ಲಿ ಎಡವಿದೆ ಎನ್ನುವುದು ಸ್ಥಳೀಯರೊಬ್ಬರ ಆರೋಪ. ಇದು ಅಲ್ಲದೆ ನಳ್ಳಿ ನೀರು ನಿರ್ವಹಣೆ ವ್ಯವಸ್ಥೆ ಸರಿಯಿಲ್ಲ. ಅದಕ್ಕೊಂದು ಸರಿಯಾದ ಸಮಯ ಕೂಡ ನಿಗದಿ ಮಾಡಿಲ್ಲ. ನೀರು ಬಿಡುವವರು ಕೂಡ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎನ್ನುವುದು ಇಲ್ಲಿನ ಜನರ ಅಭಿಪ್ರಾಯವಾಗಿದೆ.
ರಸ್ತೆ ಸಂಪರ್ಕವಿಲ್ಲ
ಇಲ್ಲಿ ಟ್ಯಾಂಕರ್ ಮೂಲಕ ಪಂಚಾಯತ್ ನೀರು ಪೂರೈಕೆಗೆ ಗರಿಷ್ಠ ಪ್ರಯತ್ನ ಮಾಡುತ್ತಿದ್ದರೂ, ಕೊಡೇರಿ ಅಕ್ಕರಮಠ ದೇವಸ್ಥಾನದ ಉತ್ತರ ಭಾಗದ ಮುಂದಕ್ಕೆ ರಸ್ತೆ ಸಂಪರ್ಕವೇ ಇಲ್ಲ. ಇಲ್ಲಿಂದ ಮುಂದಕ್ಕೆ ಟ್ಯಾಂಕರ್ ಸಂಚರಿಸುವುದು ಕಷ್ಟ. ಹಾಗಾಗಿ ಎಲ್ಲ ಮನೆಗಳಿಗೆ ಟ್ಯಾಂಕರ್ ನೀರು ಪೂರೈಸಲು ಕೂಡ ಕಷ್ಟವಾಗಿದೆ.
ಇಲ್ಲಿರುವ ಹೊಳೆಗಳ ನೀರನ್ನು ಸದ್ಬಳಕೆ ಮಾಡಿಕೊಳ್ಳುವತ್ತ ಪಂಚಾಯತ್ ಹಾಗೂ ಜನಪ್ರತಿನಿಧಿಗಳು ಶಾಶ್ವತ ಯೋಜನೆಯೊಂದನ್ನು ರೂಪಿಸಲು ಮುಂದಾಗಬೇಕಿದೆ. ನಳ್ಳಿ ಮೂಲಕ ಕೊಡುವ ನೀರನ್ನು ಸರಿಯಾದ ಸಮಯಕ್ಕೆ ನೀಡುವಂತಾಗಲಿ. ಟ್ಯಾಂಕರ್ ನೀರನ್ನು ಇನ್ನಷ್ಟು ಹೆಚ್ಚಿಸಲಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್