ಸಮಾಜಮುಖೀ ಕೆಲಸಗಳು ಸ್ತುತ್ಯರ್ಹ: ಡಾ| ಎಚ್‌.ಎಸ್‌. ಬಲ್ಲಾಳ್‌


Team Udayavani, Dec 6, 2018, 11:10 PM IST

udupa-6-12.jpg

ಉಡುಪಿ: ಆರ್ಥಿಕ ಅಶಕ್ತತೆಯಿಂದ ಬಳಲುತ್ತಿರುವ ರೋಗಿಗಳಿಗೆ, ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವರ್ಷಂಪ್ರತಿ ಆರ್ಥಿಕ ಸಹಾಯವನ್ನು ಒದಗಿಸುವ ಮೂಲಕ ಕೊಡೆತ್ತೂರು ಉಡುಪ ಫ್ಯಾಮಿಲಿ ಫೌಂಡೇಶನ್‌ ಟ್ರಸ್ಟ್ ಮಾದರಿ ಕಾರ್ಯಗಳನ್ನು ನಿರ್ವಹಿಸುತ್ತಾ ಬರುತ್ತಿದೆ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌ನ ಅಧ್ಯಕ್ಷ‌ ಡಾ| ಎಚ್‌.ಎಸ್‌. ಬಲ್ಲಾಳ್‌ ಅವರು ಹೇಳಿದರು. ಕೊಡೆತ್ತೂರು ಉಡುಪ ಫ್ಯಾಮಿಲಿ ಫೌಂಡೇಶನ್‌ ಟ್ರಸ್ಟ್ ಆಶ್ರಯದಲ್ಲಿ ನಡೆದ ಮೂರು ದಿನಗಳ ಸ್ಮಾರಕ ದತ್ತಿನಿಧಿ ಉಪನ್ಯಾಸದಲ್ಲಿ ಅಂತಿಮ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಥಮ ದಿನದ ಉಪನ್ಯಾಸದಲ್ಲಿ  ದೇಶೀ ತಂತ್ರಜ್ಞಾನ ಮತ್ತು ಆವಿಷ್ಕಾರಗಳು  ಎಂಬ ವಿಷಯದ ಮೇಲೆ ಮುಂಬಯಿ ಐಐಟಿಬಿಯ ಮೊನಾಷ್‌ ರೀಸರ್ಚ್‌ ಸಿ.ಇ.ಒ. ಡಾ| ಮುರಳಿ ಶಾಸ್ತ್ರಿ ಅವರು ಉಪನ್ಯಾಸ ನೀಡಿ ದೇಶೀಯ ತಂತ್ರಜ್ಞಾನಗಳ ಆವಿಷ್ಕಾರಗಳ ಸಂಖ್ಯೆ ಹೆಚ್ಚಾಗಬೇಕು ಮತ್ತು ನಮ್ಮ ಯುವ ತಂತ್ರಜ್ಞರು ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಷನ್‌ ಇದರ ರಿಜಿಸ್ಟಾರ್‌ ಡಾ| ನಾರಾಯಣ ಸಭಾತ್‌ ಅವರು ವಹಿಸಿದ್ದರು.


ಎರಡನೇ ದಿನದ ಉಪನ್ಯಾಸವನ್ನು ನೀಡಿದ ನ್ಯಾಯವಾದಿ ಎ.ಎಸ್‌.ಎನ್‌. ಹೆಬ್ಟಾರ್‌ ಅವರು ಕರಾವಳಿ ಕರ್ನಾಟಕದಲ್ಲಿ ಪ್ರಕಟನಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ತೇಜಕ ಎಂಬ ವಿಷಯದ ಕುರಿತಾಗಿ ಮಾತನಾಡಿ ಕಳೆದ ಹಲವಾರು ದಶಕಗಳಿಂದ ಕರಾವಳಿಯಲ್ಲಿ ಆಗಿರುವ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಅದರಲ್ಲಿ ಆಗಿರುವ ಪಲ್ಲಟಗಳ ಕುರಿತಾಗಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಜನರಲ್‌ ಎಜುಕೇಷನ್‌ ಆಫ್ ಮಣಿಪಾಲ ಇದರ ಆಡಳಿತಾಧಿಕಾರಿ ಡಾ| ಎಚ್‌. ಶಾಂತಾರಾಮ್‌ ಅವರು ವಹಿಸಿದ್ದರು.

ಮೂರನೇ ಮತ್ತು ಅಂತಿಮ ದಿನದ ದತ್ತಿನಿಧಿ ಉಪನ್ಯಾಸವನ್ನು  ಸಮುದಾಯ ಸೇವೆಗಳಿಗೆ ಆರೋಗ್ಯ ಸೇವೆಗಳು ಎಂಬ ವಿಷಯದ ಮೇಲೆ  ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಷನ್‌ ಇದರ ಉಪ ಕುಲಪತಿ ಡಾ| ಎಚ್‌. ವಿನೋದ್‌ ಭಟ್‌ ನೀಡಿದರು. ಅಧ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಷನ್‌ ಇದರ ಪ್ರೊ| ಚಾನ್ಸ್‌ಲರ್‌ ಡಾ| ಹೆಚ್‌.ಎಸ್‌. ಬಲ್ಲಾಳ್‌ ಅವರು ವಹಿಸಿದ್ದರು.

ಟ್ರಸ್ಟ್ ನ ಸಂಚಾಲಕರಾಗಿರುವ ಡಾ. ನಯನಾಭಿರಾಮ ಉಡುಪ ಅವರು ಟ್ರಸ್ಟ್ ನ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಕಾರ್ಯದರ್ಶಿ ಹಾಗೂ ಯುಗಪುರುಷ ಪತ್ರಿಕೆಯ ಸಂಪಾದಕ ಕೆ. ಭುವನಾಭಿರಾಮ ಉಡುಪ ಅವರು ಉಪಸ್ಥಿತರಿದ್ದರು.


ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.