ಹೂಳಿನಿಂದ ಮುಕ್ತಿ ಕಾಣದ ಕೋಡಿಬೆಂಗ್ರೆ ಬಂದರು


Team Udayavani, Mar 14, 2020, 5:09 AM IST

ಹೂಳಿನಿಂದ ಮುಕ್ತಿ ಕಾಣದ ಕೋಡಿಬೆಂಗ್ರೆ ಬಂದರು

ಮಲ್ಪೆ: ಕೋಡಿಬೆಂಗ್ರೆ ಮೀನುಗಾರಿಕೆ ಬಂದರಿನಲ್ಲಿ ಹೂಳಿನ ಸಮಸ್ಯೆ ವಿಪರೀತವಾಗಿದ್ದು, ಕಳೆದ 5 ವರ್ಷಗಳಿಂದ ಮೀನುಗಾರರು ಬವಣೆ ಪಡುವಂತಾಗಿದೆ. ಬಂದರಿನಿಂದ ದೋಣಿಯನ್ನು ಸಮುದ್ರಕ್ಕೆ ತರಲು, ವಾಪಸ್‌ ತೆಗೆದುಕೊಂಡು ಹೋಗಲು ಸಮಸ್ಯೆಯಾಗಿದ್ದು ಭರತದ ಸಮಯವನ್ನೇ ನೋಡಿ ಕಾರ್ಯಾಚರಿಸುವಂತಾಗಿದೆ.

ಬೋಟುಗಳು ಮಲ್ಪೆಗೆ
ಸಮಸ್ಯೆಯಿಂದಾಗಿ ಈ ಭಾಗದ ಬೋಟ್‌ಗಳು ಮೀನುಗಾರಿಕೆ ಚಟುವಟಿಕೆ ಮತ್ತು ಲಂಗರು ಹಾಕಲು ಮಲ್ಪೆ ಬಂದರಿಗೆ ತೆರಳುತ್ತದೆ. ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಬೋಟ್‌ಗಳನ್ನು ಇಲ್ಲಿ ನಿಲ್ಲಿಸಲು ಸಾಧ್ಯವಾಗದ ಕಾರಣ ಮಲ್ಪೆ ಹಂಗಾರಕಟ್ಟೆಯಲ್ಲಿ ಲಂಗರು ಹಾಕಬೇಕಾಗುತ್ತದೆ. ಡ್ರೆಜ್ಜಿಂಗ್‌ ಕಾಮಗಾರಿಯನ್ನು ನಡೆಸುವ ಬಗ್ಗೆ ಇಲ್ಲಿನ ಮೀನುಗಾರರು ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ, ಇಲಾಖೆಗಳಿಗೆ ಮನವಿ ನೀಡಿದ್ದರೂ ಯಾರೂ ತಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಆರೋಪಿಸುತ್ತಾರೆ.

ಬಂದರು ಮುಚ್ಚುವ ಪರಿಸ್ಥಿತಿ?
ತ್ರಿಸೆವೆಂಟಿ ಆಳಸಮುದ್ರ ಬೋಟುಗಳಿಗೆ ಒಳ ಪ್ರವೇಶಿಸಲು ಅಸಾಧ್ಯವಾದ್ದರಿಂದ ಮಲ್ಪೆ ಬಂದರನೇ° ಆಶ್ರಯಿಸಿಕೊಂಡಿದೆ. ಪ್ರಸ್ತುತ ಇಲ್ಲಿ ಸುಮಾರು 60ರಷ್ಟು ಸಣ್ಣಟ್ರಾಲ್‌ ದೋಣಿಗಳು ವ್ಯವಹಾರ ಚಟುವಟಿಕೆಗಳು ನಡೆಸು ತ್ತಿದ್ದು ಸದ್ಯದ ಸ್ಥಿತಿಯಲ್ಲಿ ಅದಕ್ಕೂ ಅಡ್ಡಿಯಾಗಿದೆ. ಇದೇ ಪರಿಸ್ಥಿತಿ ಮುಂದು ವರೆದರೆ ಬಂದರ ನ್ನು ಮುಚ್ಚುವ ಪರಿಸ್ಥಿತಿ ಎದುರಾಗಬಹುದೆಂಬ ಆತಂಕವೂ ಮೀನುಗಾರರನ್ನು ಕಾಡುತ್ತಿದೆ.

ಸಮಸ್ಯೆ ತೀವ್ರ
ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟ ಕೋಡಿಬೆಂಗ್ರೆ ಬಂದರಿನ ಒಳಭಾಗದಲ್ಲಿ ಜೆಟ್ಟಿ ವಿಸ್ತರಣೆ ಕಾಮಗಾರಿ ನಡೆಯುವ ಸ್ಥಳದಿಂದ ಅಳಿವೆಯವರೆಗೆ ಸಂಪೂರ್ಣ ಹೂಳು ತುಂಬಿದ್ದರಿಂದ ಮೀನುಗಾರರು ತೀವ್ರ ತೊಂದರೆಯನ್ನು ಅನುಭವಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಮಸ್ಯೆ ಮತ್ತಷ್ಟು ತೀವ್ರಗೊಂಡಿದೆ. ಇದು ಮೀನುಗಾರಿಕೆ ವ್ಯವಹಾರ, ಚಟುವಟಕೆಗಳಿಗೆ ಹಿನ್ನೆಡೆಯಾಗಿದೆ.

ಬೇಡಿಕೆ ಈಡೇರಿಲ್ಲ
ಬಂದರಿನ ಪೂರ್ವ ಬದಿ ಹೊಳೆಯಲ್ಲಿ ಹೂಳು ತುಂಬಿ ದಂಡೆ ಬಿದ್ದು ಬೋಟ್‌ ನಿಲ್ಲಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟವರಿಗೆ ಹಲವಾರು ಬಾರಿ ಮನವಿ ಮಾಡಲಾಗಿದೆ. ಮಲ್ಪೆ ಬಂದರಿನಲ್ಲಿ ಬೋಟುಗಳ ಒತ್ತಡ ಹೆಚ್ಚಾಗಿರುವುದರಿಂದ ಈ ಭಾಗದ ಬೋಟ್‌ ನಿಲುಗಡೆಗೆ ಸಮಸ್ಯೆಯಾಗುತ್ತಿದೆ. ಈ ಭಾಗದಲ್ಲಿ ಅಭಿವೃದ್ಧಿ ಕೆಲಸವಾದರೆ, ಮಲ್ಪೆ ಬಂದರಿನಲ್ಲಿ ಒತ್ತಡವನ್ನು ಕಡಿಮೆ ಮಾಡಬಹುದು.
-ಬಿ. ಬಿ. ಕಾಂಚನ್‌, ಅಧ್ಯಕ್ಷರು ಮೀನುಗಾರರ ಸಂಘ, ಹಂಗಾರಕಟ್ಟೆ-ಬೆಂಗ್ರೆ

1.78 ಕೋಟಿ ರೂ. ಅಂದಾಜು ಪಟ್ಟಿ
ಈಗಾಗಲೇ ಇಲ್ಲಿನ ಡ್ರೆಜ್ಜಿಂಗ್‌ ಕಾಮಗಾರಿಗಾಗಿ 1.78 ಕೋ. ರೂ. ಅಂದಾಜು ಪಟ್ಟಿ ಮಾಡಿ ನಿರ್ದೇಶಕರ ಕಚೇರಿಗೆ ಕಳುಹಿಸಲಾಗಿದೆ. ಮಂಜೂರಾಗಿ ದೊರೆತ ನಂತರ ಟೆಂಡರ್‌ ಕರೆದು ಕಾಮಗಾರಿಯನ್ನು ಆರಂಭಿಸಲಾಗುವುದು.
-ಕ್ಸೇವಿಯರ್‌ ಡಯಾಸ್‌, ಅಸಿಸ್ಟೆಂಟ್‌ ಎಂಜಿನಿಯರ್‌, ಮೀನುಗಾರಿಕೆ ಇಲಾಖೆ

- ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.