ಕೋಡಿಬೆಂಗ್ರೆ ಮೀನುಗಾರಿಕೆ ಕಿರು ಬಂದರು: ಮೂಲಸೌಕರ್ಯಕ್ಕೆ ಬೇಡಿಕೆ


Team Udayavani, Jul 23, 2019, 5:36 AM IST

kodibengre

ಮಲ್ಪೆ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟ ಕೋಡಿಬೆಂಗ್ರೆ ಮೀನುಗಾರಿಕೆ ಬಂದರಿನ ಜೆಟ್ಟಿ ವಿಸ್ತರಣೆ ಕಾಮಗಾರಿಗೆ ಶಿಲಾನ್ಯಾಸ ನಡೆದು ವರ್ಷ ಕಳೆದರೂ ಕೆಲಸ ಆರಂಭಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ.

ನಬಾರ್ಡ್‌ ಯೋಜನೆಯಡಿ 2.70 ಕೋ. ರೂ. ವೆಚ್ಚದಲ್ಲಿ ಸುಮಾರು 90 ಮೀಟರ್‌ ಉದ್ದದ ಜೆಟ್ಟಿ ವಿಸ್ತರಣೆ ಯೋಜನೆಗೆ ಅನುದಾನ ಬಿಡುಗಡೆಯಾಗಿದ್ದು ಟೆಂಡರ್‌ ಪ್ರಕ್ರಿಯೆ ನಡೆದು ಗುದ್ದಲಿಪೂಜೆಯನ್ನು 2018ರ ಮಾರ್ಚ್‌ನಲ್ಲಿ ನಡೆಸಲಾಗಿದೆ. ಆದರೆ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ.

25 ವರ್ಷ ಹಿಂದಿನ ಜೆಟ್ಟಿ

ಈಗಿರುವ ಜೆಟ್ಟಿ ಸುಮಾರು 25 ವರ್ಷ ಹಿಂದೆ ಕಿರು ಬಂದರು ಯೋಜನೆಯಡಿ ನಿರ್ಮಾಣವಾಗಿದ್ದು ಆ ಬಳಿಕ ಇಲ್ಲಿಯವರೆಗೆ ವಿಸ್ತರಣೆ ಯಾಗಿಲ್ಲ. ಆದರೆ ಬೋಟ್‌ಗಳ ಸಂಖ್ಯೆ ಮೊದಲಿಗಿಂತ 10 ಪಟ್ಟು ಹೆಚ್ಚಾಗಿದೆ. ಇಲ್ಲಿ ಸ್ಥಳಾವಕಾಶದ ಕೊರತೆಯಿಂದ ಈ ಭಾಗದ ಬೋಟ್‌ಗಳು ಅನಿವಾರ್ಯವಾಗಿ ಇತರ ಬಂದರನ್ನು ಅವಲಂಬಿಸಬೇಕಾಗಿದೆ. ಜೆಟ್ಟಿ ವಿಸ್ತರ ಣೆಗೆ ಸಾಕಷ್ಟು ಸ್ಥಳಾವಕಾಶವಿದ್ದು, ನೈಸರ್ಗಿಕ ಸ್ಥಿತಿ ಕೂಡ ಅನುಕೂಲವಾಗಿದೆ. ಕನಿಷ್ಠ 100 ಮೀ. ನಷ್ಟು ವಿಸ್ತರಣೆ ಮಾಡಬೇಕೆಂಬ ಬೇಡಿಕೆ ಇಲ್ಲಿನ ಮೀನುಗಾರದ್ದಾಗಿತ್ತು.

ಹೂಳಿನ ಸಮಸ್ಯೆ, ವ್ಯವಹಾರಕ್ಕೆ ಹಿನ್ನಡೆ

ಕೋಡಿಬೆಂಗ್ರೆ ಮೀನುಗಾರಿಕೆ ಬಂದರು ಹೂಳಿನ ಸಮಸ್ಯೆಯಿಂದ ಮೀನುಗಾರರು ಪರದಾಡುವಂತಾಗಿದೆ. ಇಲ್ಲಿನ ಅಳಿವೆ ಬಾಗಿಲು ಮತ್ತು ಬಂದರಿನ ಒಳಭಾಗದಲ್ಲಿ ಸಂಪೂರ್ಣ ಹೂಳು ತುಂಬಿದೆ. ಮೀನುಗಾರರು ನೀರಿನ ಭರತದ ಸಮಯವನ್ನು ಕಾದು ಸಮುದ್ರಕ್ಕೆ ಇಳಿಯಬೇಕಾಗಿದೆ. ಅದೇ ರೀತಿ ಬಂದರಿಗೆ ಬರಬೇಕಾದರೂ ನೀರು ತುಂಬಿದರೆ ಮಾತ್ರ ಸಾಧ್ಯವಾಗುತ್ತದೆ. ಇದು ಮೀನುಗಾರಿಕೆ ವ್ಯವಹಾರಕ್ಕೆ ಹಿನ್ನೆಡೆಯಾಗಿದೆ. ಹಾಗಾಗಿ ಈ ಭಾಗದ ಬೋಟ್‌ಗಳು ಲಂಗರು ಹಾಕಲು ಮಲ್ಪೆ ಬಂದರಿಗೆ ತೆರಳುತ್ತವೆೆ. ಡ್ರೆಜ್ಜಿಂಗ್‌ ಕಾಮಗಾರಿಯನ್ನು ನಡೆಸುವ ಬಗ್ಗೆ ಇಲ್ಲಿನ ಮೀನುಗಾರರು ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ, ಇಲಾಖೆಗಳಿಗೆ ಮನವಿ ನೀಡಿ ಆಗ್ರಹಿಸಿದ್ದರೂ ಇದುವರೆಗೂ ಯಾರೂ ತಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಆರೋಪಿಸಿದ್ದಾರೆ.

ಶಿಥಿಲಾವಸ್ಥೆಯಲ್ಲಿ ಹರಾಜು ಕಟ್ಟಡ

ಇಲ್ಲಿನ ಮೀನು ಹರಾಜು ಪ್ರಾಂಗಣ ಸುಮಾರು 25 ವರ್ಷಗಳ ಹಳೆಯದು. ಕಟ್ಟಡಗಳು ಶಿಥಿಲಾವಸ್ಥೆಯನ್ನು ತಲುಪಿದ್ದು ಮೇಲ್ಛಾವಣಿ ಹಾನಿಗೊಂಡಿದೆ. ವಿದ್ಯುತ್‌ ವ್ಯವಸ್ಥೆ ಇಲ್ಲ. ಹರಾಜು ಪ್ರಾಂಗಣವನ್ನು ಪುನರ್‌ ನಿರ್ಮಾಣ ಮಾಡ ಬೇಕೆಂಬ ಬೇಡಿಕೆಯೂ ಮೀನುಗಾರರದ್ದಾಗಿದೆ. ಬಂದರು ಪ್ರದೇಶದ ಆವರಣಗೋಡೆ ಪ್ರದೇಶದಲ್ಲಿ ಹಲವಾರು ವರ್ಷಗಳಿಂದ ಪೊದೆಗಳು, ಗಿಡಗಳು ಬೆಳದು ನಿಂತಿದ್ದರೂ ತೆರವುಗೊಳಿಸುವ ಕಾರ್ಯ ನಡೆಯುತ್ತಿಲ್ಲ.

  • ನಟರಾಜ್ ಮಲ್ಪೆ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.