ಕೋಡಿಕನ್ಯಾಣ ಮೀನುಗಾರಿಕೆ ಜೆಟ್ಟಿ: ಸಮಸ್ಯೆ ಈಗಲೂ ಜೀವಂತ, ಈಡೇರದ ಆಶ್ವಾಸನೆಗಳು


Team Udayavani, Jun 12, 2019, 6:10 AM IST

kodi-kanyana

ಕೋಟ: ನೈಸರ್ಗಿಕ ಬಂದರು ಎಂಬ ಹೆಗ್ಗಳಿಕೆ ಪಡೆದಿರುವ ಕೋಡಿಕನ್ಯಾಣ ಮೀನುಗಾರಿಕೆ ಜೆಟ್ಟಿಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ನೂರಾರು ಬೋಟ್‌ಗಳನ್ನು ಲಂಗರು ಹಾಕಲಾಗುತ್ತದೆ. ಈ ಜೆಟ್ಟಿಯನ್ನು ಅಭಿವೃದ್ಧಿಗೊಳಿಸಿ ಸರ್ವಕಾಲಿಕ ಬಂದರಾಗಿ ಪರಿವರ್ತನೆಗೊಳ್ಳಬೇಕು ಎನ್ನುವುದು ಇಲ್ಲಿನ ಮೀನುಗಾರರ ಹಲವು ದಶಕಗಳ ಕನಸಾಗಿದೆ. ಆದರೆ ಇಲ್ಲಿನ ಸಮಸ್ಯೆಗಳು ಜೀವಂತವಾಗಿರುವುದರಿಂದ ಜೆಟ್ಟಿಯ ಕಾರ್ಯನಿರ್ವಹಣೆಗೇ ಸಮಸ್ಯೆಯಾಗುತ್ತಿದೆ.

ಹೂಳೆತ್ತುವ ಕಾಮಗಾರಿ ಅರ್ಧಕ್ಕೆ ಸ್ಥಗಿತ
ಇಲ್ಲಿನ ಅಳಿವೆಯಲ್ಲಿ ಹೂಳಿನ ಸಮಸ್ಯೆಯಿಂದ ಬೋಟ್‌ಗಳ ಸಂಚಾರಕ್ಕೆ ಹಿನ್ನಡೆಯಾಗಿತ್ತು. ಹೀಗಾಗಿ 2017ರಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಸುಮಾರು 6 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿ ಹೂಳೆತ್ತುವ ಕಾಮಗಾರಿ ಚಾಲನೆ ನೀಡಿತ್ತು. ಆದರೆ ಹಲವು ಕಾರಣಗಳನ್ನು ನೀಡಿ ಗುತ್ತಿಗೆ ವಹಿಸಿಕೊಂಡ ಕಂಪೆನಿ ಕಾಮಗಾರಿಯನ್ನು ವರ್ಷಗಟ್ಟಲೆ ಸ್ಥಗಿತಗೊಳಿಸಿತ್ತು. ಜತೆಗೆ ಸಿ.ಆರ್‌.ಝಡ್‌ ಸಮಸ್ಯೆ ಕೂಡ ಕಾಮಗಾರಿಗೆ ಹಿನ್ನಡೆಯಾಗಿತ್ತು. ಹೂಳೆತ್ತುವ ಕಾಮಗಾರಿ ಇದುವರೆಗೆ ಪೂರ್ಣಗೊಂಡಿಲ್ಲ.

ಇದರಿಂದ ಬೋಟ್‌ಗಳು ಜೆಟ್ಟಿ ತಲುಪಲು ಸಾಧ್ಯವಾಗುತ್ತಿಲ್ಲ ಮತ್ತು ಈ ಹಿಂದೆ ಕೋಟ್ಯಾಂತರ ವೆಚ್ಚದಲ್ಲಿ ನಿರ್ಮಿಸಿದ ಜೆಟ್ಟಿ, ಬದಿಕಟ್ಟುವ ಕಾಮಗಾರಿ ಎಲ್ಲವೂ ವ್ಯರ್ಥವಾಗಿದೆ.

ಅನುಷ್ಠಾನವಾಗದ ಟೀ-ಜೆಟ್ಟಿ ಕಾಮಗಾರಿ
ಟೀ-ಜೆಟ್ಟಿ ನಿರ್ಮಿಸುವ ಸಲುವಾಗಿ ಈ ಹಿಂದೆ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು ಹಾಗೂ ಮಳೆಗಾಲಕ್ಕೆ ಮೊದಲು ಕಾಮಗಾರಿ ಪೂರ್ಣಗೊಳ್ಳಲಿದೆ ಎನ್ನಲಾಗಿತ್ತು. ಆದರೆ ಕಾಮಗಾರಿ ಇನ್ನೂ ಟೆಂಡರ್‌ ಹಂತದಲ್ಲಿದೆ.

ಈಡೇರದ ಆಶ್ವಾಸನೆಗಳು
ಈ ಹಿಂದೆ ಬಂದರು,ಮೀನುಗಾರಿಕೆ ಸಚಿವರು, ಸಂಸದರು, ಶಾಸಕರು ಸೇರಿದಂತೆ ಹಲವು ಜನಪ್ರತಿನಿಧಿಗಳು ಇಲ್ಲಿಗೆ ಭೇಟಿ ನೀಡಿ ಮೀನುಗಾರರ ಜತೆ ಸಭೆ ನಡೆಸಿ ಜೆಟ್ಟಿಯನ್ನು ಅಭಿವೃದ್ಧಿಪಡಿಸುವ ಆಶ್ವಾಸನೆಯನ್ನು ನೀಡಿದ್ದರು. ಆದರೆ ಇವುಗಳಲ್ಲಿ ಹಲವು ಆಶ್ವಾಸನೆಗಳು ಇಂದಿಗೂ ಈಡೇರಿಲ್ಲ.

ಮಲ್ಪೆ ಬಂದರಿನ ಒತ್ತಡ ಕುಗ್ಗಿಸಲು ಸಹಾ ಯಕ
ಬೋಟ್‌ಗಳ ಸಂಖ್ಯೆ ಹೆಚ್ಚಿರುವುದರಿಂದ ಮಲ್ಪೆ ಬಂದರಿನಲ್ಲಿ ಪ್ರತಿ ವರ್ಷ ಬೋಟ್‌ ನಿಲುಗಡೆಗೆ ಸ್ಥಳಾವಕಾಶದ ಕೊರತೆ ಎದುರಾಗುತ್ತದೆ. ಹೀಗಾಗಿ ಕೋಡಿಕನ್ಯಾಣದ ಜೆಟ್ಟಿ ಅಭಿವೃದ್ಧಿಗೊಂಡರೆ ಈ ಭಾಗದ 500ಕ್ಕೂ ಹೆಚ್ಚು ಬೋಟ್‌ಗಳನ್ನು ಇಲ್ಲಿ ಲಂಗರು ಹಾಕಬಹುದು ಹಾಗೂ ಇದರಿಂದ ಮಲ್ಪೆಯ ಒತ್ತಡ ಕಡಿಮೆಯಾಗುತ್ತದೆ.

ಬೇಡಿಕೆ ಸಲ್ಲಿಸಿ ಸಾಕಾಗಿದೆ
ಕೋಡಿ ಕನ್ಯಾಣ ಮೀನುಗಾರಿಕೆ ಜೆಟ್ಟಿಯ ಕುರಿತು ಹಲವಾರು ವರ್ಷದಿಂದ ಮೀನುಗಾರರು ಹೋರಾಟ ನಡೆಸುತ್ತಿದ್ದೇವೆ. ಆದರೆ ಸಮಸ್ಯೆ ಇಂದಿಗೂ ಜೀವಂತವಾಗಿದೆ. ಮಂಜೂರಾದ ಹಣದಲ್ಲಿ ಹೂಳೆತ್ತುವ ಕಾಮಗಾರಿಯನ್ನು ಸಮರ್ಪಕವಾಗಿ ಮಾಡಿ, ಜೆಟ್ಟಿ ಅಭಿವೃದ್ಧಿಪಡಿಸಿದರೆ ಅನುಕೂಲವಾಗುತ್ತಿತ್ತು. ಆದರೆ ಹೂಳೆತ್ತುವ ಕಾಮಗಾರಿ ಅರ್ಧಕ್ಕೆ ನಿಂತಿದೆ. ಟೀ-ಜೆಟ್ಟಿಗೆ ಬಿಡುಗಡೆಯಾದ ಹಣ ಅನುಷ್ಠಾನವಾಗಿಲ್ಲ. ಹೀಗಾಗಿ ಮೀನುಗಾರರಿಗೆ ಹೋರಾಟ ನಡೆಸುವ ಮನಸ್ಸು ಇಲ್ಲವಾಗಿದೆ.
-ಚಂದ್ರ ಕಾಂಚನ್‌ ಕೋಡಿ, ಅಧ್ಯಕ್ಷರು ಕೋಡಿ ಮೀನುಗಾರರ ಸಂಘ

ಸಿ.ಆರ್‌.ಝಡ್‌. ಅನುಮತಿಗೆ ಕಾಯುತ್ತಿದ್ದೇವೆ
ಸಿ.ಆರ್‌.ಝಡ್‌. ಸಮಸ್ಯೆಯಿಂದಾಗಿ ಜಟ್ಟಿ ಹೂಳೆತ್ತುವ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಇದೀಗ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಲಾಗಿದ್ದು,ಅನುಮತಿ ಸಿಗುವ ನಿರೀಕ್ಷೆ ಇದೆ. ಟೀ-ಜೆಟ್ಟಿ ಕಾಮಗಾರಿ ಟೆಂಡರ್‌ ಹಂತದಲ್ಲಿದೆ. ಈ ವರ್ಷ ಮಳೆಗಾಲ ಮುಗಿದ ತತ್‌ಕ್ಷಣ ಹೂಳೆತ್ತುವ ಕಾಮಗಾರಿ ಜತೆಗೆ ಟೀ-ಜೆಟ್ಟಿಗೆ ಚಾಲನೆ ನೀಡಲಿದ್ದೇವೆ.
-ಮಂಚೇಗೌಡ, ಸಹಾಯಕ ಅಭಿಯಂತರು ಬಂದರು ಇಲಾಖೆ

– ರಾಜೇಶ ಗಾಣಿಗ ಅಚಾÉಡಿ

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.