ಇನ್ನೂ ಆಗದ ಕೊಳಲಗಿರಿ ಪರಾರಿ – ಶೀಂಬ್ರ ಸೇತುವೆ ಸಂಪರ್ಕ ರಸ್ತೆ: ಸಂಚಾರಕ್ಕೆ ಸಂಕಷ್ಟ
Team Udayavani, Jun 22, 2019, 5:19 AM IST
ಮಣಿಪಾಲ: ಕೊಳಲಗಿರಿ ಪರಾರಿ – ಶೀಂಬ್ರ ಸೇತುವೆ ನಿರ್ಮಾಣವಾಗಿ ಹಲವು ಸಮಯ ಕಳೆದರೂ ಸೇತುವೆಯ ಸಂಪರ್ಕ ರಸ್ತೆ ನಿರ್ಮಾಣವಾಗದೇ ಇರುವುದರಿಂದ ಇದರಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಸಂಚಾರಕ್ಕೆ ಸಂಕಷ್ಟವನ್ನು ಎದುರಿಸುವ ಪರಿಸ್ಥಿತಿ ಎದುರಾಗಿದೆ.ಸಂಚಾರ ಕಷ್ಟ ಸ್ವರ್ಣ ನದಿಗೆ ಅಡ್ಡವಾಗಿ ಈ ಸೇತುವೆ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆ ಸಾರ್ವಜನಿಕ ವಲಯದಿಂದ ಹಲವು ವರ್ಷಗಳಿಂದ ಕೇಳಿ ಬಂದ ಹಿನ್ನಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ಈ ಸೇತುವೆ ಕಾಮಗಾರಿ ನಡೆಸಲಾಗಿತ್ತು. 2018ರಲ್ಲಿಯೇ ಕಾಮಗಾರಿ ಮುಗಿದಿತ್ತು. ಆದರೆ ಸೇತುವೆಗೆ ಹೊಂದಿಕೊಂಡ ಸಂಪರ್ಕ ರಸ್ತೆ ಮಾತ್ರ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಜನರಿಗೆ ಸಂಚರಿಸುವುದು ಕಷ್ಟ ಸಾಧ್ಯವಾಗಿದೆ.
ರಸ್ತೆ ಕೆಸರುಮಯ
ಕೊಳಲಗಿರಿ, ಉಪ್ಪೂರು, ಬ್ರಹ್ಮಾವರ ಮೊದಲಾದ ಭಾಗದ ಜನರು ಮಣಿಪಾಲ ಹಾಗೂ ಈ ಮಾರ್ಗದಲ್ಲಿ ಮುಂದೆ ತೆರಳಲು ಈ ಸೇತುವೆ ಬಹಳಷ್ಟು ಅನುಕೂಲಕರವಾಗಿದ್ದು ಸಂಪರ್ಕ ರಸ್ತೆ ಸಮಸ್ಯೆ ಮಾತ್ರ ಜನರನ್ನು ಕಾಡುತ್ತಿದೆ. ರಸ್ತೆಗೆ ಡಾಮರೀಕರಣವಾಗದೇ ಇರುವುದರಿಂದ ಸುರಿದ ಮಳೆಗೆ ಮಣ್ಣು ಕುಸಿದು ರಸ್ತೆ ಕೆಸರುಮಯವಾಗಿದೆ. ಈ ರಸ್ತೆಯಲ್ಲಿ ಪ್ರಯಾಣಿಸುವ ದ್ವಿಚಕ್ರ ವಾಹನ ಸವಾರರು ಸ್ಕಿಡ್ ಆಗಿ ಬೀಳುವ ಸ್ಥಿತಿ ಎದುರಾಗಿದೆ.
ಸಾರ್ವಜನಿಕರ ಒತ್ತಾಯ
ಸೇತುವೆ ನಿರ್ಮಾಣವಾಗಿ ವರ್ಷ ಕಳೆದರೂ ಸಂಪರ್ಕ ರಸ್ತೆ ಮಾತ್ರ ನಿರ್ಮಾಣವಾಗದೇ ಇರುವುದು ಈ ಭಾಗದಲ್ಲಿ ಸಂಚರಿಸಲು ಕಷ್ಟಕರವಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಶೀಘ್ರವಾಗಿ ಸಂಪರ್ಕ ರಸ್ತೆ ನಿರ್ಮಾಣ ಮಾಡಬೇಕು ಎಂದು ಮನವಿ ಮೂಲಕ ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು