ಬೆಳ್ಳಾಲ ಸಂಪರ್ಕ ರಸ್ತೆ ಕೆಸರುಮಯ


Team Udayavani, Sep 2, 2017, 7:30 AM IST

29082017KLR-E-4(A).jpg

ಕೊಲ್ಲೂರು:  ಬಿ.ಎಸ್‌. ಯಡಿಯೂರಪ್ಪನವರ ಆದರ್ಶ ಗ್ರಾಮ ಯೋಜನೆಯಡಿ ಬರುವ ಕೆರಾಡಿ ಪಂಚಾಯತ್‌ನ ಬೆಳ್ಳಾಲ ಗ್ರಾಮದ  ರಸ್ತೆಯ ಗತಿ ನೋಡಿದರೆ ಅಯ್ಯೋ ಅನಿಸುತ್ತಿದೆ.  ಬೆಳ್ಳಾಲದ ಕಾರಿಮೈಲಿನಿಂದ ಕೆರಾಡಿ ಹಾಗೂ ಮಾರಣಕಟ್ಟೆಗೆ ಸಾಗುವ ಮುಖ್ಯ ಸಂಪರ್ಕ ರಸ್ತೆಯ 5 ಕಿ.ಮೀ. ದೂರ ವ್ಯಾಪ್ತಿಯ ಈ ರಸ್ತೆಯ ದುಃಸ್ಥಿತಿಗೆ ಇನ್ನೂ ಪರಿಹಾರ ಕಂಡುಕೊಳ್ಳಲಾಗದಿರುವುದು ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆ ಕಾರಣ ಎಂಬಂತಾಗಿದ್ದು ಮಳೆಗಾಲದಲ್ಲಿ ಈ ಮಾರ್ಗವು ಕೆಸರು ಗದ್ದೆಯಂತೆ ಮಾರ್ಪಾಟುಗೊಂಡಿರುವುದು ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಬಹಳಷ್ಟು ವರ್ಷಗಳ ಹಿಂದೆಯೇ ಸಂಪೂರ್ಣ ಡಾಮರೀಕರಣವಾಗ ಬೇಕಿರುವ ಈ ಭಾಗದ ರಸ್ತೆಗೆ ಮಾಜಿ ಶಾಸಕರು ರೂ. 70 ಲಕ್ಷ ಮೊತ್ತವನ್ನು ಸುವರ್ಣ ಗ್ರಾಮ ಯೋಜನೆಯಡಿ ಈ ಭಾಗಕ್ಕೆ ನೀಡಲಾಗಿದ್ದರೂ ಪ್ರಭಾವಿಗಳ ಒತ್ತಡಕ್ಕೆ ಸಿಲುಕಿದ ಆ ಯೋಜನೆಯ ಮೊತ್ತವು ಹಂಚಿಹೋಗಿರುವುದು ಈ ರಸ್ತೆಯ ದುಃಸ್ಥಿತಿಗೆ ಕಾರಣವಾಗಿದೆ ಎಂದು ಜನರು ಆರೋಪಿಸಿದ್ದಾರೆ. ಸರಕಾರಿ ನೌಕರಿಯಲ್ಲಿರುವ ವ್ಯಕ್ತಿಯೋರ್ವರು ಈ ರಸ್ತೆಯ ಪಕ್ಕದಲ್ಲಿ 10 ಸೆಂಟ್ಸ್‌ ಜಾಗವನ್ನು ಖರೀದಿ ಮಾಡಿದ್ದು ಗ್ರಾ.ಪಂ. ಸುಪರ್ದಿಯ ಜಾಗವನ್ನು ಮನೆಕಟ್ಟಲು ಬಳಸುತ್ತಿರುವುದು ಇನ್ನಷ್ಟು ಕಸಿವಿಸಿ ಉಂಟುಮಾಡಿದೆ ಎಂದು ಜನರು ಆರೋಪಿಸಿದ್ದಾರೆ.

ಪ್ರತಿಭಟನೆಯ ಎಚ್ಚರಿಕೆ
ಗ್ರಾ.ಪಂ.ಗೆ ದೂರು ನೀಡಲಾಗಿ ದ್ದರೂ ಸರಕಾರಿ ನೌಕರರ ಒತ್ತಡಕ್ಕೆ ಮಣಿದ ಇಲಾಖೆ ಯಾವುದೇ ಕ್ರಮ ಕೈಗೊಳ್ಳದಿರುವುದು ರಸ್ತೆಯ ದುಃಸ್ಥಿತಿಗೆ ಕಾರಣವಾಗಿದೆ. ಮೇಲ್ಭಾಗದ ಜಮೀನಿನ ಮಣ್ಣು ಮುಖ್ಯರಸ್ತೆಯ ಮೇಲೆ ಬಿದ್ದಿರುವುದರಿಂದ ಕೆಸರುಮಯವಾಗಿದೆ. ಹಾಗಾಗಿ ಗ್ರಾಮ ನಿವಾಸಿಗಳ ಸಂಚಾರಕ್ಕೆ ತೊಡಕಾಗಿದೆ. ಇದಕ್ಕೊಂದು ಶಾಶ್ವತ ಪರಿಹಾರಕ್ಕೆ ಇಲಾಖೆ ಕ್ರಮ ಕೈಗೊಳ್ಳದಿದ್ದಲ್ಲಿ ಮಾರಣಕಟ್ಟೆ ಮಾರ್ಗವಾಗಿ ಕೆರಾಡಿ ಸಾಗುವ ಹೆಗ್ಗದ್ದೆ ಕ್ರಾಸ್‌ನಿಂದ ಕೇರಿ ಮೂಲಕ ಸಾಗುವ ಬೆಳ್ಳಾಲ ಸಂಪರ್ಕ ರಸ್ತೆಯ ಈ ಭಾಗದ ನಿವಾಸಿಗಳು ಪ್ರತಿಭಟನೆ ನಡೆಸಬೇಕಾದೀತು ಎಂದು ಎಚ್ಚರಿಸಿದ್ದಾರೆ.

ಬಹಳಷ್ಟು ಮಂದಿಗೆ ತೊಂದರೆಯಾಗುತ್ತಿರುವ ಕೆಸರುಮಯವಾಗಿರುವ ಈ ಮಾರ್ಗವಾಗಿ ಪ್ರಯಾಣಿಸುವ ಮಂದಿಯ ಪಾಡು ಹೇಳತೀರದು. ಕೆರಾಡಿ ಗ್ರಾ.ಪಂ. ಈ ಸಮಸ್ಯೆಗೊಂದು ಪರಿಹಾರ ಒದಗಿಸಬೇಕಿದೆ.    
– ಚಂದ್ರಶೇಖರ ಶೆಟ್ಟಿ, ಗ್ರಾಮಸ್ಥರು

ಹಳೆಯ ರಸ್ತೆ ತೆರವು ಮಾಡಿಕೊಡಬೇಕೆಂದು ಗ್ರಾಮಸ್ಥರು ಮನವಿ ಸಲ್ಲಿಸಿದ್ದು ಹೊಸತಾಗಿ ನಿರ್ಮಿಸಿದ ರಸ್ತೆಯ ಅಗಳು ತೋಡಿರುವುದರಿಂದ ಅಲ್ಲಿನ ನೀರು ಕೆಳಗಡೆ ಹರಿದು ಮುಖ್ಯರಸ್ತೆಯು ಕೆಸರುಮಯವಾಗಿರುವುದು ಸಹಜ.ಭಾರೀ ಮಳೆ ಬರುವುದರಿಂದ ಪೈಪ್‌ ಅಳವಡಿಸಲು ಸಾಧ್ಯವಾಗದ ಪರಿಸ್ಥಿತಿ ಬಂದೊದಗಿದೆ. ಮಳೆ ಕಡಿಮೆಯಾದೊಡನೆ ಪೈಪ್‌ ಜೋಡಿಸುವುದರ ಮೂಲಕ ಈ ಭಾಗದ ನಿವಾಸಿಗಳ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು. 
– ನಾರಾಯಣ ಶೆಟ್ಟಿ, ಪಿಡಿಒ ಕೆರಾಡಿ ಗ್ರಾ.ಪಂ.

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.