ಕೊಲ್ಲೂರು: ಪೊಲೀಸ್‌ ಪೇದೆ ಆತ್ಮಹತ್ಯೆ


Team Udayavani, Feb 5, 2018, 10:20 AM IST

suicide.jpg

ಕೊಲ್ಲೂರು: ಕ್ಷುಲ್ಲಕ ಕಾರಣಕ್ಕೆ ಕೊಲ್ಲೂರು ಪೊಲೀಸ್‌ ಠಾಣೆಯ ಪೇದೆಯೋರ್ವರು ಆತ್ಮಹತ್ಯೆಗೆ ಶರಣಾಗಿದ್ದು, ಸುದ್ದಿ ತಿಳಿದ ಅವರ ಪ್ರೇಯಸಿಯೂ ಬಾವಿಗೆ  ಹಾರಿ ಆತ್ಮಹತ್ಯೆಗೆತ್ನಿಸಿದ ಘಟನೆ ರವಿವಾರ ಸಂಭವಿಸಿದೆ. 

ಠಾಣೆಯಲ್ಲಿ 2014ರಿಂದ ಪೊಲೀಸ್‌ ಪೇದೆಯಾಗಿದ್ದ ನಾಗರಾಜ (27) ರವಿವಾರ ಬೆಳಗ್ಗೆ ತಾನು ವಾಸವಾಗಿದ್ದ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಜತೆಗಿದ್ದ ಇನ್ನೋರ್ವ ಪೊಲೀಸ್‌ ಸಿಬಂದಿ ಸಂದೀಪ್‌  ಕೆಲಸ ನಿಮಿತ್ತ ಗಂಗೊಳ್ಳಿ ಠಾಣೆಗೆ ತೆರಳಿದ್ದಾಗ ನಾಗರಾಜ್‌ ಈ ಕೃತ್ಯಗೈದಿದ್ದಾರೆ.

2014ರಲ್ಲಿ ಪೊಲೀಸ್‌ ಸೇವೆಗೆ ಸೇರಿದ್ದ ನಾಗರಾಜ ಮೂಲತಃ ದಾವಣಗೆರೆಯ ಮಲೆಬೆನ್ನೂರು ನಿವಾಸಿ. ಅವರು ಸಂದೀಪ್‌ ಜತೆಗೆ ಸೌಪರ್ಣಿಕಾ ಅತಿಥಿಗೃಹದಲ್ಲಿ ವಾಸವಾಗಿದ್ದರು. ನಾಗರಾಜ ಎರಡು ದಿನಗಳ ಹಿಂದೆ ಜೋಯ್ಡಾಗೆ ಬಂದೋಬಸ್ತಿಗೆಂದು ತೆರಳಿ ಶನಿವಾರ ಕೊಲ್ಲೂರಿಗೆ ವಾಪಸಾಗಿ ಸೇವೆಗೆ ಹಾಜರಾಗಿದ್ದರು. ನಾಗರಾಜ ಅವರಿಗೆ  ಕೊಲ್ಲೂರು ಠಾಣೆಯ ಮಹಿಳಾ ಪೇದೆ ಬೆಳಗಾವಿ ಮೂಲದ ರೇಷ್ಮಾ ಜತೆ ಮದುವೆ ನಿಶ್ಚಯವಾಗಿತ್ತು ಎನ್ನಲಾಗಿದೆ.  ಇವರು ಪರಸ್ಪರ ಪ್ರೇಮಿಸುತ್ತಿದ್ದು, ಮದುವೆಗೆ ಮನೆಯವರು ಒಪ್ಪಿಗೆ ಸೂಚಿಸಿದ್ದರು.

ಕೊಠಡಿಯಲ್ಲಿ ಜತೆಗಿದ್ದ ಸಂದೀಪ್‌ ಜತೆಗೆ ನಾಗರಾಜ ಯಾವುದೇ ಸಮಸ್ಯೆ ಬಗ್ಗೆ ತಿಳಿಸಿರಲಿಲ್ಲ. ಸಂದೀಪ್‌ ಗಂಗೊಳ್ಳಿ ಠಾಣೆಯಿಂದ ಹಿಂದಿರುಗಿದಾಗ ಕೊಠಡಿ ಬಾಗಿಲು ಮುಚ್ಚಿಕೊಂಡಿದ್ದು, ನಾಗರಾಜನನ್ನು ಮೊಬೈಲ್‌ ಮೂಲಕ ಸಂಪರ್ಕಿಸಿದರೂ ಉತ್ತರ ಬಾರದಿರುವುದರಿಂದ ಸಂಶಯಗೊಂಡು ಹಿಂಬಾಗಿಲಿನ ಕಿಟಕಿ ಮೂಲಕ ನೋಡಿದಾಗ ಆತ್ಮಹತ್ಯೆ ವಿಷಯ ತಿಳಿದು ಬಂತು. 

ಮುಳುವಾದ ಪ್ರೇಯಸಿ ರಜೆ  
ರೇಷ್ಮಾ ರಜೆ ತೆಗೆದುಕೊಳ್ಳುವ ಸಣ್ಣ ವಿಚಾರವು ಆತ್ಮಹತ್ಯೆಯಲ್ಲಿ ಪರ್ಯವಸಾನವಾಗಿದೆ ಎಂದು ಹೇಳಲಾಗುತ್ತಿದೆ. “ನೀನು ರಜೆ ತೆಗೆದುಕೊಂಡರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ನಾಗರಾಜ ಹೇಳಿದ್ದನೆನ್ನಲಾಗಿದೆ. ಈ ಹಿಂದೆಯೂ ಕೆಲವು ಬಾರಿ ಆತ ಇಂಥ ಬೆದರಿಕೆ ಹಾಕಿದ್ದರಿಂದ ಇದನ್ನು ರೇಷ್ಮಾ ಗಂಭೀರವಾಗಿ ಪರಿಗಣಿಸದೆ ರಜೆ ಹಾಕಲು ನಿರ್ಧರಿಸಿದ್ದರಿಂದ ನಾಗರಾಜ  ದುಡುಕಿನ ನಿರ್ಧಾರ ಕೈಗೊಂಡರು ಎಂದು ಹೇಳಲಾಗುತ್ತಿದೆ.

ರೇಷ್ಮಾ ಆತ್ಮಹತ್ಯೆ ಯತ್ನ
ನಾಗರಾಜ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದ ಕೂಡಲೇ ರೇಷ್ಮಾ  ಅವರು ಕೂಡ ಕೊಲ್ಲೂರು ಠಾಣೆಯ ಬಾವಿಗೆ ಹಾರಿ ಆತ್ಮಹತ್ಯೆಗೆತ್ನಿಸಿದರು. ಕೂಡಲೇ ಪೊಲೀಸರು ಆಕೆಯನ್ನು ಬಾವಿಯಿಂದ ಮೇಲೆತ್ತಿ ಕುಂದಾಪುರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಪರಸ್ಪರ ಪ್ರೀತಿಸುತ್ತಿದ್ದ  ನಾಗರಾಜ ಹಾಗೂ ರೇಷ್ಮಾ ನಡುವಿನ ಸಂಬಂಧವು ಆತ್ಮಹತ್ಯೆಯಂಥ ದುರಂತದತ್ತ ಸಾಗಿರುವುದು ಸಹೋದ್ಯೋಗಿಗಳಲ್ಲಿ ಅಚ್ಚರಿ ಮೂಡಿಸಿದೆ. 

ಎಡಿಷನಲ್‌ ಎಸ್ಪಿ ಕುಮಾರಚಂದ್ರ, ಕುಂದಾಪುರ ಡಿವೈಎಸ್‌ಪಿ ಪ್ರವೀಣ್‌ ಎಚ್‌. ನಾಯಕ್‌, ಬೈಂದೂರು ಸರ್ಕಲ್‌ ಇನ್‌ಸ್ಪೆಕ್ಟರ್‌ ಪರಮೇಶ್ವರ ಗುನಗ, ಕೊಲ್ಲೂರು ಎಸ್‌.ಐ. ಸುದರ್ಶನ ಸ್ಥಳಕ್ಕೆ ಭೇಟಿ ನೀಡಿದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.