ಕೊಲ್ಲೂರು ಶ್ರೀ ಮೂಕಾಂಬಿಕೆಗೆ ನೂತನ ರಥ ಪುರಪ್ರವೇಶ


Team Udayavani, Feb 16, 2023, 5:55 AM IST

ಕೊಲ್ಲೂರು ಶ್ರೀ ಮೂಕಾಂಬಿಕೆಗೆ ನೂತನ ರಥ ಪುರಪ್ರವೇಶ

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕೆಗೆ ಫೆ. 16ರಂದು ಸಮರ್ಪಣೆಗೊಳ್ಳಲಿರುವ ಬ್ರಹ್ಮರಥವನ್ನು ಕುಂಭಾಶಿಯ ಕಾರ್ಯಾಗಾರದಿಂದ ಕೊಂಡೊಯ್ಯುವ ದಾರಿಯಲ್ಲಿ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇಗುಲಕ್ಕೆ ಆಗಮಿಸಿದಾಗ ದೇಗುಲದ ಪ್ರಧಾನ ಅರ್ಚಕ ಪ್ರಸನ್ನ ಕುಮಾರ್‌ ಐತಾಳ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು.

ಮುರ್ಡೇಶ್ವರದ ಉದ್ಯಮಿ ದಿ| ಆರ್‌.ಎನ್‌. ಶೆಟ್ಟಿ ಅವರ ಪುತ್ರ ಸುನಿಲ್‌ ಆರ್‌. ಶೆಟ್ಟಿ ಅವರು ಕೊಲ್ಲೂರು ದೇಗುಲಕ್ಕೆ ಸೇವಾ ರೂಪದಲ್ಲಿ ಬ್ರಹ್ಮರಥವನ್ನು ಸಮರ್ಪಿಸುತ್ತಿದ್ದು, ಕೋಟೇಶ್ವರದ ಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ರಾಜಗೋಪಾಲ ಆಚಾರ್ಯ ಅವರ ನೇತೃತ್ವದಲ್ಲಿ ಕುಂಭಾಶಿಯ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದಲ್ಲಿ ನಿರ್ಮಿಸಲಾಗಿದೆ.
400 ವರ್ಷಗಳ ಬಳಿಕ ಕೊಲ್ಲೂರು ದೇಗುಲಕ್ಕೆ ನೂತನ ರಥ ನಿರ್ಮಾಣಗೊಂಡಿದೆ. ಹಳೆಯ ರಥದ ಮಾದರಿಯಲ್ಲೇ ಇದ್ದು, 1 ಕೋಟಿ ರೂ.ಗೂ ಅಧಿಕ ವೆಚ್ಚವಾಗಿದೆ.

ರಥಕ್ಕೆ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇಗುಲದ ಬಳಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬಗ್ವಾಡಿ, ನೆಂಪು, ವಂಡ್ಸೆ, ಚಿತ್ತೂರು, ಇಡೂರು, ಜಡ್ಕಲ್‌, ಹಾಲ್ಕಲ್‌ ಮಾರ್ಗವಾಗಿ ಕೊಲ್ಲೂರಿಗೆ ಮೆರವಣಿಗೆಯಲ್ಲಿ ಒಯ್ಯಲಾಯಿತು.

ಉಡುಪಿಯ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌., ಕೋಟೇಶ್ವರ ದೇಗುಲದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್‌ ಶೆಟ್ಟಿ, ಸಮಿತಿ ಸದಸ್ಯರಾದ ಸುರೇಶ ಬೆಟ್ಟಿನ್‌, ಚಂದ್ರಿಕಾಧನ್ಯ, ಮಂಜುನಾಥ ಆಚಾರ್ಯ, ಭಾರತಿ, ಶಾರದಾ, ಜೀರ್ಣೋ ದ್ಧಾರ ಸಮಿತಿ ಮಾಜಿ ಅಧ್ಯಕ್ಷ ಕೃಷ್ಣದೇವ ಕಾರಂತ ಕೋಣಿ, ಕೋಟ ಶ್ರೀ ಅಮೃತೇಶ್ವರೀ ದೇಗು ಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್‌, ಕೊಲ್ಲೂರು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಉಪಕಾರ್ಯನಿರ್ವಹಣಾ ಧಿಕಾರಿ ಗೋವಿಂದ ನಾಯ್ಕ, ಸಮಿತಿ ಸದಸ್ಯರಾದ ಡಾ| ಅತುಲ್‌ ಕುಮಾರ್‌ ಶೆಟ್ಟಿ, ಜಯಾನಂದ ಹೋಬಳಿದಾರ, ಗಣೇಶ ಕಿಣಿ, ಗೋಪಾಲಕೃಷ್ಣ ನಾಡ, ಶೇಖರ ಪೂಜಾರಿ, ಸಂಧ್ಯಾರಮೇಶ, ರತ್ನಾ ಆರ್‌. ಕುಂದರ್‌, ಮಾಜಿ ಧರ್ಮ ದರ್ಶಿ ರಮೇಶ ಗಾಣಿಗ ಕೊಲ್ಲೂರು, ಎಂಜಿನಿಯರ್‌ ಪ್ರದೀಪ್‌, ದೇಗು ಲದ ಅರ್ಚಕರು, ತಂತ್ರಿ ಡಾ| ಕೆ. ರಾಮಚಂದ್ರ ಅಡಿಗ ಉಪಸ್ಥಿತರಿದ್ದರು.

ವಿವಿದೆಢೆ ಭವ್ಯ ಸ್ವಾಗತ
ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇಗುಲ, ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ, ಬಗ್ವಾಡಿ ಹೋಬಳಿ ಸ್ತ್ರೀ ಶಕ್ತಿ ಸಂಘಟನೆ, ಧರ್ಮಸ್ಥಳ ಸ್ವಸಹಾಯ ಸಂಘದ ಸದಸ್ಯರು ಸೇರಿದಂತೆ ಕೋಟೇಶ್ವರದಿಂದ ಕೊಲ್ಲೂರು ವರೆಗಿನ ವಿವಿಧ ಧಾರ್ಮಿಕ ಕ್ಷೇತ್ರಗಳು, ಸ್ವಸಹಾಯ ಸಂಘಗಳ ಸದಸ್ಯರು, ಪ್ರಮುಖರು, ಕೊಲ್ಲೂರು ದೇಗುಲದ ಮಾಜಿ ಧರ್ಮದರ್ಶಿ
ವಂಡಬಳ್ಳಿ ಜಯ ರಾಮ ಶೆಟ್ಟಿ, ಗಿಳಿಯಾರು ಶ್ರೀಧರ ಶೆಟ್ಟಿ, ವಿ.ಕೆ. ಶಿವರಾಮ ಶೆಟ್ಟಿ ಮೊದಲಾದವರು ದಾರಿಯುದ್ದಕ್ಕೂ ಪುಷ್ಪಾ ರ್ಚನೆ ಮಾಡಿ ರಥವನ್ನು ಸ್ವಾಗತಿಸಿದರು.

ಇಂದು ಸಮರ್ಪಣೆ
ನೂತನ ಬ್ರಹ್ಮರಥವು ಫೆ. 16ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಮೂಕಾಂಬಿಕೆಗೆ ಸಮರ್ಪಣೆಗೊಳ್ಳಲಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.