ಕೊಲ್ಲೂರು ವಲಯಾರಣ್ಯಾಧಿಕಾರಿ ಕಚೇರಿ, ಮನೆಗಳ ಮೇಲೆ ಎಸಿಬಿ ದಾಳಿ


Team Udayavani, Mar 10, 2017, 7:14 AM IST

10-REPORTER-4.jpg

ಕುಂದಾಪುರ (ಉಪ್ಪು³ಂದ): ಉಡುಪಿ ಭ್ರಷ್ಟಾಚಾರ ನಿಗ್ರಹ ದಳದ ನಾಲ್ಕು ತಂಡಗಳು  ಕೊಲ್ಲೂರು ಮೂಕಾಂಬಿಕಾ ಅಭಯಾರಣ್ಯ ವಲಯ ಅರಣ್ಯಾಧಿಕಾರಿ ಶಿವರಾಮ ಆಚಾರ್ಯ ಅವರ ಮನೆಗಳು, ಕಚೇರಿ, ವಸತಿಗೃಹ ಗುರುವಾರ ಬೆಳಗ್ಗೆ ಏಕಕಾಲದಲ್ಲಿ ದಾಳಿ ಮಾಡಿ ದಾಖಲೆಗಳನ್ನು ವಶಪಡಿಸಿಕೊಂಡು ಅಪಾರ ಮೊತ್ತದ ಅಕ್ರಮ ಆಸ್ತಿ ಪತ್ತೆಮಾಡಿದೆ.

ಶಿವರಾಮರ ಪತ್ನಿ ಸ್ಥಳೀಯ ಸರಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಬೇರೆ ಆದಾಯದ ಯಾವುದೇ ಮೂಲ ಇಲ್ಲ ಎಂಬುದು ತನಿಖೆಯಿಂದ ತಿಳಿದುಬಂದಿದೆ. ದಾಖಲೆಗಳ ಪರಿಶೀಲನೆ ಕಾರ್ಯ ಸಂಜೆಯವರೆಗೂ ಮುಂದು ವರಿದಿದೆ. ಭ್ರಷ್ಟಾಚಾರ ನಿಗ್ರಹ ದಳದ ಅಧೀಕ್ಷಕ ಎಸ್‌.ಎಲ್‌. ಚನ್ನಬಸಪ್ಪ ನಿರ್ದೇಶನದಲ್ಲಿ ಉಡುಪಿ ಡಿವೈಎಸ್ಪಿ ಅರುಣ್‌ ಕುಮಾರ್‌, ನಿರೀಕ್ಷಕರಾದ ಸತೀಶ್‌, ರಂಗನಾಥ್‌, ಬ್ರಿಜೇಶ್‌, ಕೃಷ್ಣಮೂರ್ತಿ, ರಮೇಶ್‌, ರಾಘ ವೇಂದ್ರ ಸೇರಿದಂತೆ ಒಟ್ಟು 30 ಮಂದಿಯ ತಂಡ ಈ ದಾಳಿ ನಡೆಸಿದೆ. ಅರಣ್ಯಾಧಿಧಿಕಾರಿ ಶಿವರಾಮ ಅಚಾರ್ಯ ಅವರ ಮೇಲೆ ಅಕ್ರಮ ಸಂಪತ್ತು ಹೊಂದಿದ್ದಾರೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆದಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದಅಧಿಕಾರಿಗಳು ದಾಖಲೆ ಗಳನ್ನು ಪರಿಶೀಲನೆ ನಡೆಸಿದರು. ಸಂಪೂರ್ಣ ದಾಖಲೆಗಳನ್ನು ತನಿಖೆ ಮಾಡಿದ ಅನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು  ಎಂದು ಎಸ್‌ಪಿ ಚೆನ್ನಬಸವಣ್ಣ ಎಸ್‌.ಎಲ್‌. ತಿಳಿಸಿದರು.

ಎಲ್ಲೆಲ್ಲಿ  ಏನೇನು  ಸಿಕ್ಕಿದೆ?
ಎಸ್‌.ಪಿ. ಚೆನ್ನಬಸವಣ್ಣ ಎಸ್‌.ಎಲ್‌. ನೇತೃತ್ವದ ನಾಲ್ವರು ಅಧಿಕಾರಿಗಳ ತಂಡ‌ ಆಜ್ರಿ, ಕೊಲ್ಲೂರು ಕಚೇರಿ, ಕಿರಿಮಂಜೇಶ್ವರ ಹಾಗೂ ಕಂಬದಕೋಣೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪದ ಮನೆ ಮೇಲೆ ಹೀಗೆ ಒಟ್ಟು  5 ಕಡೆಗಳಲ್ಲಿ ದಾಳಿ ನಡೆಸಿ ವಿವಿಧ ದಾಖಲೆಗಳನ್ನು ವಶಪಡಿಸಿಕೊಂಡರು.

ದಾಖಲೆಗಳನ್ನು ಪರಿಶೀಲಿಸಿದಾಗ ಶಿವರಾಮ ಆಚಾರ್ಯರಿಗೆ ಸಂಬಂಧಿಸಿದ ನಾಗೂರಿಯಲ್ಲಿ 10 ಸೆಂಟ್ಸ್‌ ಜಾಗ, ಅರ್ಜಿಯಲ್ಲಿ 27 ಸೆಂಟ್ಸ್‌ ಜಾಗ ಮತ್ತು ಎರಡು ವಾಣಿಜ್ಯ ಸಂಕೀರ್ಣಗಳು, 10 ಬ್ಯಾಂಕ್‌ ಖಾತೆಗಳು, ಸುಮಾರು 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಕಂಬದಕೋಣೆಯಲ್ಲಿ 60 ಲ.ರೂ. ಮನೆ, ಮನೆಯಲ್ಲಿ 2.5 ಲಕ್ಷ ರೂ. ಮತ್ತು ಕಚೇರಿಯಲ್ಲಿ 3.70 ಲಕ್ಷ ರೂ. ನಗದು, ಸ್ವಿಫ್ಟ್ ಮತ್ತು ಮಾರುತಿ 800 ಕಾರುಗಳು ಕಿರಿಮಂಜೇಶ್ವರದ ಅತ್ತೆಯ ಮನೆಯಲ್ಲಿ 3 ಲ.ರೂ. ಪತ್ತೆಯಾಗಿದೆ.

ಡೈರಿ, ಡೈರಿ…..
ದಾಳಿ ನಡೆಸಿದ ಸಂದರ್ಭದಲ್ಲಿ  ಎಸಿಬಿ ತಂಡದ ಅಧಿಕಾರಿಗಳಿಗೆ ಶಿವರಾಮ ಆಚಾರ್ಯ ಅವರ ಮನೆಗಳಲ್ಲಿ ಹಣಕಾಸು ವ್ಯವಹಾರದ ಹಲವಾರು ಡೈರಿಗಳು ದೊರಕಿದ್ದು  ಇದರಲ್ಲಿ ಹಣಕಾಸು ವಹಿವಾಟು ನಡೆಸಿರುವ ಕುರಿತು ಮಾಹಿತಿಗಳಿದ್ದು ಇದನ್ನು ಪರಿಶೀಲಿಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.