ಕೊಲ್ಲೂರು ವಲಯಾರಣ್ಯಾಧಿಕಾರಿ ಕಚೇರಿ, ಮನೆಗಳ ಮೇಲೆ ಎಸಿಬಿ ದಾಳಿ
Team Udayavani, Mar 10, 2017, 7:14 AM IST
ಕುಂದಾಪುರ (ಉಪ್ಪು³ಂದ): ಉಡುಪಿ ಭ್ರಷ್ಟಾಚಾರ ನಿಗ್ರಹ ದಳದ ನಾಲ್ಕು ತಂಡಗಳು ಕೊಲ್ಲೂರು ಮೂಕಾಂಬಿಕಾ ಅಭಯಾರಣ್ಯ ವಲಯ ಅರಣ್ಯಾಧಿಕಾರಿ ಶಿವರಾಮ ಆಚಾರ್ಯ ಅವರ ಮನೆಗಳು, ಕಚೇರಿ, ವಸತಿಗೃಹ ಗುರುವಾರ ಬೆಳಗ್ಗೆ ಏಕಕಾಲದಲ್ಲಿ ದಾಳಿ ಮಾಡಿ ದಾಖಲೆಗಳನ್ನು ವಶಪಡಿಸಿಕೊಂಡು ಅಪಾರ ಮೊತ್ತದ ಅಕ್ರಮ ಆಸ್ತಿ ಪತ್ತೆಮಾಡಿದೆ.
ಶಿವರಾಮರ ಪತ್ನಿ ಸ್ಥಳೀಯ ಸರಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಬೇರೆ ಆದಾಯದ ಯಾವುದೇ ಮೂಲ ಇಲ್ಲ ಎಂಬುದು ತನಿಖೆಯಿಂದ ತಿಳಿದುಬಂದಿದೆ. ದಾಖಲೆಗಳ ಪರಿಶೀಲನೆ ಕಾರ್ಯ ಸಂಜೆಯವರೆಗೂ ಮುಂದು ವರಿದಿದೆ. ಭ್ರಷ್ಟಾಚಾರ ನಿಗ್ರಹ ದಳದ ಅಧೀಕ್ಷಕ ಎಸ್.ಎಲ್. ಚನ್ನಬಸಪ್ಪ ನಿರ್ದೇಶನದಲ್ಲಿ ಉಡುಪಿ ಡಿವೈಎಸ್ಪಿ ಅರುಣ್ ಕುಮಾರ್, ನಿರೀಕ್ಷಕರಾದ ಸತೀಶ್, ರಂಗನಾಥ್, ಬ್ರಿಜೇಶ್, ಕೃಷ್ಣಮೂರ್ತಿ, ರಮೇಶ್, ರಾಘ ವೇಂದ್ರ ಸೇರಿದಂತೆ ಒಟ್ಟು 30 ಮಂದಿಯ ತಂಡ ಈ ದಾಳಿ ನಡೆಸಿದೆ. ಅರಣ್ಯಾಧಿಧಿಕಾರಿ ಶಿವರಾಮ ಅಚಾರ್ಯ ಅವರ ಮೇಲೆ ಅಕ್ರಮ ಸಂಪತ್ತು ಹೊಂದಿದ್ದಾರೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆದಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದಅಧಿಕಾರಿಗಳು ದಾಖಲೆ ಗಳನ್ನು ಪರಿಶೀಲನೆ ನಡೆಸಿದರು. ಸಂಪೂರ್ಣ ದಾಖಲೆಗಳನ್ನು ತನಿಖೆ ಮಾಡಿದ ಅನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಚೆನ್ನಬಸವಣ್ಣ ಎಸ್.ಎಲ್. ತಿಳಿಸಿದರು.
ಎಲ್ಲೆಲ್ಲಿ ಏನೇನು ಸಿಕ್ಕಿದೆ?
ಎಸ್.ಪಿ. ಚೆನ್ನಬಸವಣ್ಣ ಎಸ್.ಎಲ್. ನೇತೃತ್ವದ ನಾಲ್ವರು ಅಧಿಕಾರಿಗಳ ತಂಡ ಆಜ್ರಿ, ಕೊಲ್ಲೂರು ಕಚೇರಿ, ಕಿರಿಮಂಜೇಶ್ವರ ಹಾಗೂ ಕಂಬದಕೋಣೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪದ ಮನೆ ಮೇಲೆ ಹೀಗೆ ಒಟ್ಟು 5 ಕಡೆಗಳಲ್ಲಿ ದಾಳಿ ನಡೆಸಿ ವಿವಿಧ ದಾಖಲೆಗಳನ್ನು ವಶಪಡಿಸಿಕೊಂಡರು.
ದಾಖಲೆಗಳನ್ನು ಪರಿಶೀಲಿಸಿದಾಗ ಶಿವರಾಮ ಆಚಾರ್ಯರಿಗೆ ಸಂಬಂಧಿಸಿದ ನಾಗೂರಿಯಲ್ಲಿ 10 ಸೆಂಟ್ಸ್ ಜಾಗ, ಅರ್ಜಿಯಲ್ಲಿ 27 ಸೆಂಟ್ಸ್ ಜಾಗ ಮತ್ತು ಎರಡು ವಾಣಿಜ್ಯ ಸಂಕೀರ್ಣಗಳು, 10 ಬ್ಯಾಂಕ್ ಖಾತೆಗಳು, ಸುಮಾರು 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಕಂಬದಕೋಣೆಯಲ್ಲಿ 60 ಲ.ರೂ. ಮನೆ, ಮನೆಯಲ್ಲಿ 2.5 ಲಕ್ಷ ರೂ. ಮತ್ತು ಕಚೇರಿಯಲ್ಲಿ 3.70 ಲಕ್ಷ ರೂ. ನಗದು, ಸ್ವಿಫ್ಟ್ ಮತ್ತು ಮಾರುತಿ 800 ಕಾರುಗಳು ಕಿರಿಮಂಜೇಶ್ವರದ ಅತ್ತೆಯ ಮನೆಯಲ್ಲಿ 3 ಲ.ರೂ. ಪತ್ತೆಯಾಗಿದೆ.
ಡೈರಿ, ಡೈರಿ…..
ದಾಳಿ ನಡೆಸಿದ ಸಂದರ್ಭದಲ್ಲಿ ಎಸಿಬಿ ತಂಡದ ಅಧಿಕಾರಿಗಳಿಗೆ ಶಿವರಾಮ ಆಚಾರ್ಯ ಅವರ ಮನೆಗಳಲ್ಲಿ ಹಣಕಾಸು ವ್ಯವಹಾರದ ಹಲವಾರು ಡೈರಿಗಳು ದೊರಕಿದ್ದು ಇದರಲ್ಲಿ ಹಣಕಾಸು ವಹಿವಾಟು ನಡೆಸಿರುವ ಕುರಿತು ಮಾಹಿತಿಗಳಿದ್ದು ಇದನ್ನು ಪರಿಶೀಲಿಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!