ಕೊಂಕಣ ರೈಲ್ವೇ: ವಾರದೊಳಗೆ ವಿದ್ಯುದೀಕರಣ ಲೋಕಾರ್ಪಣೆ
Team Udayavani, Jun 16, 2022, 7:25 AM IST
ಉಡುಪಿ: ಕೊಂಕಣ ರೈಲ್ವೇಯಲ್ಲಿ ಅಳವಡಿಸಲಾದ ವಿದ್ಯುದ್ದೀಕರಣ ಯೋಜನೆಯು ಲೋಕಾರ್ಪಣೆಗೊಳ್ಳಲು ಸಿದ್ಧವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಲೋಕಾರ್ಪಣೆಗೊಳಿಸುವರು.
ಉದ್ಘಾಟನೆಯನ್ನು ಜೂ. 20 ಅಥವಾ 21ರಂದು ಮಧ್ಯಾಹ್ನ 12ಕ್ಕೆ ನೆರವೇರಿಸುವ ಸಾಧ್ಯತೆ ಇದ್ದು ಅಂತಿಮ ನಿರ್ಧಾರ ಇನ್ನಷ್ಟೇ ಆಗಬೇಕಾಗಿದೆ. ಜೂ. 20ರಂದು
ಉದ್ಘಾಟನೆಯಾಗುವ ಸಾಧ್ಯತೆಗಳೇ ಹೆಚ್ಚು ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಉದ್ಘಾಟನೆಯ ನೇರ ಪ್ರಸಾರವನ್ನು ಉಡುಪಿ, ಮಡಗಾಂವ್ ಮತ್ತು ರತ್ನಾಗಿರಿ ರೈಲು ನಿಲ್ದಾಣಗಳಲ್ಲಿ ಬಿತ್ತರಿಸಲಾಗುವುದು. ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಉದ್ಘಾಟನೆಯ ಪ್ರಯುಕ್ತ ಉಡುಪಿ, ಮಡಗಾಂವ್, ರತ್ನಾಗಿರಿಯಿಂದ ಮೂರು ಗೂಡ್ಸ್ ರೈಲುಗಳನ್ನು ಮತ್ತು ಇದೇ ರೀತಿ ನೈಋತ್ಯ ರೈಲ್ವೇಯಲ್ಲಿಯೂ ಮೂರು ಗೂಡ್ಸ್ ರೈಲುಗಳನ್ನು ಓಡಿಸಲಾಗುವುದು ಎಂದು ತಿಳಿದುಬಂದಿದೆ.
ಮಹಾರಾಷ್ಟ್ರದ ರೋಹಾದಿಂದ ಮಂಗಳೂರು ಸಮೀಪದ ತೋಕೂರು ವರೆಗೆ 760 ಕಿ.ಮೀ. ದೂರದ ಕೊಂಕಣ ರೈಲ್ವೇ ಹಳಿಯಲ್ಲಿ ಸುಮಾರು 1,287 ಕೋ.ರೂ. ವೆಚ್ಚದಲ್ಲಿ ವಿದ್ಯುದೀಕರಣಗೊಳಿಸಲಾಗಿದೆ. 2017ರಲ್ಲಿ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಕೊರೊನಾ ಕಾರಣದಿಂದ ಕಾಮಗಾರಿ ವೇಗಕ್ಕೆ ಹಿನ್ನಡೆಯಾಗಿತ್ತು. ಈಗ ಎಲ್ಲ ಬಗೆಯ ಪರೀಕ್ಷೆ, ಪರಿಶೀಲನೆ ನಡೆದು ಉದ್ಘಾಟನೆಯಾಗಲಿದೆ.
ವಿದ್ಯುದೀಕರಣದಿಂದ ಇಂಧನ ವೆಚ್ಚದಲ್ಲಿ ಭಾರೀ ಪ್ರಮಾಣದ ಉಳಿತಾಯ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?