ಭೂಸಂತ್ರಸ್ತರ ಪೇಪರ್‌ ಸ್ಟಾಲ್‌, ಟ್ರಾಲಿಗೂ ಖೊಕ್‌ !

ಕೊಂಕಣ ರೈಲ್ವೇ ಸಂತ್ರಸ್ತರ ಗೋಳಿಗೆ ಕೊನೆಯಿಲ್ಲ

Team Udayavani, Feb 13, 2021, 8:10 AM IST

ಭೂಸಂತ್ರಸ್ತರ ಪೇಪರ್‌ ಸ್ಟಾಲ್‌, ಟ್ರಾಲಿಗೂ ಖೊಕ್‌ !

ಉಡುಪಿ: ಕೊಂಕಣ ರೈಲ್ವೇ ನಿರ್ಮಾಣ ವಾಗುವಾಗ ಭೂಮಿ ಬಿಟ್ಟುಕೊಟ್ಟವರ ಮನೆಯ ಸದಸ್ಯರಿಗೆ ಉದ್ಯೋಗ ಕೊಡುವಲ್ಲಿ, ವಿದ್ಯಾರ್ಹತೆ ಇದ್ದರೂ ಭಡ್ತಿ ನೀಡುವಲ್ಲಿ ಅನ್ಯಾಯವಾಗಿದೆ ಎಂಬ ದೂರು ಕೇಳಿಬರುತ್ತಿರುವಂತೆ, ಭೂ ಸಂತ್ರಸ್ತರ ಕುಟುಂಬದ ಸದಸ್ಯರಿಗೆ ಕೊಟ್ಟ ಪೇಪರ್‌ – ಫ್ರೂಟ್‌ ಸ್ಟಾಲ್‌, ಟ್ರಾಲಿಗಳನ್ನೂ ಹಿಂಪಡೆದು ಕೊಂಡಿರುವುದು ಬೆಳಕಿಗೆ ಬಂದಿದೆ.

ಉಡುಪಿ ಬುಡ್ನಾರಿನ ಸಿಂಧು ಶೆಟ್ಟಿ ಅವರ 3.08 ಎಕ್ರೆ ಭೂಮಿ ಕೊಂಕಣ ರೈಲ್ವೇಗೆ ಹೋಗಿತ್ತು. ಪುತ್ರಿ ಶಕುಂತಳಾ ಶೆಟ್ಟಿ ಅವರಿಗೆ ಪೇಪರ್‌ ಸ್ಟಾಲ್‌ ನಡೆಸಲು ಅನುಮತಿ ನೀಡಲಾಗಿತ್ತು. ಪೇಪರ್‌ ಸ್ಟಾಲ್‌ಗ‌ಳಿಗೆ ಆದ್ಯತೆಯ ನೆಲೆ ಇದೆ. ಸುಮಾರು 15 ವರ್ಷ ನಡೆಸಿದರು. ಕಳೆದ ವರ್ಷ ಈ ಅಂಗಡಿಯನ್ನು ಟೆಂಡರ್‌ಗೆ ಕರೆದರು. ಈಗ ಶಕುಂತಳಾ ಶೆಟ್ಟಿಯವರಿಗೆ ಸ್ಟಾಲ್‌ ಇಲ್ಲ

ಶೆಟ್ಟಿಯವರು ಪ್ರಶ್ನಿಸಿದಾಗ “ನಮಗೆ ನಿಮ್ಮ ಬಾಡಿಗೆ ಸಾಕಾಗುವುದಿಲ್ಲ. ಹೆಚ್ಚಿನ ಆದಾಯಕ್ಕೆ ಟೆಂಡರ್‌ ಅನಿವಾರ್ಯ. ನಿಮಗೆ ಈಗಾಗಲೇ ನೋಟಿಸ್‌ ನೀಡಿದ್ದೇವೆ’ ಎಂದು ಉತ್ತರಿಸಿದರಂತೆ. “ನಮಗೆ ನೋಟಿಸ್‌ ನೀಡಿಲ್ಲ. ನೋಟಿಸ್‌ ಬೋರ್ಡ್‌ನಲ್ಲಿ, ಪತ್ರಿಕೆಗಳಲ್ಲಿ ಹಾಕಿದ್ದರೆ ನಮಗೆ ಗೊತ್ತಾಗಿಲ್ಲ. ಕೋರ್ಟು ಕಚೇರಿ ಅಲೆಯಲು ಆಗುವುದಿಲ್ಲ ಎಂಬ ಕಾರಣಕ್ಕೆ ಅಲ್ಲಿಗೇ ಬಿಟ್ಟೆವು’ ಎನ್ನುತ್ತಾರೆ ಶೆಟ್ಟಿಯವರು.

ಗೋವಾ, ಮಹಾರಾಷ್ಟ್ರಗಳಲ್ಲೂ ಹೀಗೆ ಆಗಿದೆ. ಪತ್ರಿಕೆ, ಪುಸ್ತಕಗಳನ್ನು ಮಾತ್ರ ಮಾರಬಹುದು  ಎಂಬ ನಿಯಮಗಳಿಗೆ ಸ್ಟಾಲ್‌ಗ‌ಳವರು ತಕರಾರು ಎತ್ತಿದ್ದು, ಕೆಲವರು ಅದನ್ನು ನಡೆಸಲು ಬೇರೆಯವರಿಗೆ ನೀಡಿರುವುದೂ ಗಮನಕ್ಕೆ ಬಂದಿದೆ ಎಂದು ಕೊಂಕಣ ರೈಲ್ವೇಯವರೂ ತಕರಾರು ತೆಗೆದಿದ್ದರು. ಈಗ ಟೆಂಡರ್‌ನಲ್ಲಿ ಹೆಚ್ಚಿನ ಮೊತ್ತ ಸಿಕ್ಕಿದಾಗ ತಿಂಡಿ, ಕುಡಿಯುವ ನೀರು ಇತ್ಯಾದಿಗಳನ್ನು (ಮಲ್ಟಿ ಪರ್ಪಸ್‌) ಮಾರಾಟ ಮಾಡಬಹುದು ಎಂದು ಅನುಮತಿ ನೀಡಲಾಯಿತು. ಭೂಸಂತ್ರಸ್ತ ಸ್ಟಾಲ್‌ನವರು ಟೆಂಡರ್‌ ಮೂಲಕ ಹೆಚ್ಚಿನ ಬಾಡಿಗೆ ಕೊಡಬೇಕಾಯಿತು.

ಇಂತಹ ಸ್ಟಾಲ್‌ಗ‌ಳು ಎತ್ತಂಗಡಿಯಾಗಿ ಮಾಲಕರು ಸಂತ್ರಸ್ತರಾಗುವುದು ಇಲ್ಲಿ ಮಾತ್ರವಲ್ಲ. ಹಿಂದೆ ಸ್ಥಳೀಯ ಸಂಸ್ಥೆಗಳು ಪತ್ರಿಕೆಗಳ ಸ್ಟಾಲ್‌ಗ‌ಳಿಗೆ ಆದ್ಯತೆಯಲ್ಲಿ, ಕಡಿಮೆ ಬಾಡಿಗೆಯಲ್ಲಿ ಅವಕಾಶ ಕೊಡುತ್ತಿದ್ದರು. ಕ್ರಮೇಣ ಊರು ಬೆಳೆದಂತೆ, ಐದು ವರ್ಷಗಳಿಗೊಮ್ಮೆ ಅಧ್ಯಕ್ಷರು, ಆಡಳಿತ ಮಂಡಳಿ ಬದಲಾದಂತೆ ಅವರ ಮರ್ಜಿ ಬದಲಾಗುತ್ತಿತ್ತು, ಟೆಂಡರ್‌ ಕ್ರಮ ಆರಂಭವಾಯಿತು. ಕೇವಲ ಪತ್ರಿಕೆಗಳನ್ನು ಮಾರಿದರೆ ಈ ಮೊತ್ತ ಪಾವತಿಸಲು ಆಗುವುದಿಲ್ಲ. ಹೀಗಾಗಿ ಆದ್ಯತೆಯಲ್ಲಿ ಇರಬೇಕಾದ ಪೇಪರ್‌ ಸ್ಟಾಲ್‌ಗ‌ಳಲ್ಲಿ ಹೆಚ್ಚು ಬಾಡಿಗೆ ಕೊಡಬಹುದಾದ ವ್ಯಾಪಾರಗಳು ಕುದುರಿವೆ.

ಟ್ರಾಲಿಗಳು ರದ್ದು  :

ರೈಲು ನಿಲ್ದಾಣಗಳ ಪ್ಲಾಟ್‌ಫಾರಂಗಳಲ್ಲಿ ಹಣ್ಣು, ಎಳನೀರು ಇತ್ಯಾದಿಗಳನ್ನು ಚಲಿಸಿಕೊಂಡು ಮಾರಾಟ ಮಾಡುವ ಟ್ರಾಲಿಗಳಿಗೆ ಅನುಮತಿ ಕೊಡುವಾಗ, ಟ್ರಾಲಿಗಳನ್ನು ಒಂದೆಡೆ ನಿಲ್ಲಿಸಿಕೊಂಡು ಮಾರಾಟ ಮಾಡುವ ಹಣ್ಣಿನ ಸ್ಟಾಲ್‌ಗ‌ಳಿಗೂ ಅನುಮತಿ ಕೊಡುವಾಗ ಭೂ ಸಂತ್ರಸ್ತರ ಕೋಟಾದಡಿ ನೀಡಲಾಯಿತು. ಇವುಗಳಿಂದ ಪ್ರಯಾಣಿಕರಿಗೆ ಅಡೆತಡೆಯಾಗುತ್ತದೆಂಬ ರೈಲ್ವೇ ಬೋರ್ಡ್‌ನ ಶಿಫಾರಸಿನಂತೆ ಮೂರು ವರ್ಷಗಳ ಹಿಂದೆ ರದ್ದುಪಡಿಸಲಾಯಿತು. ಇಂತಹ ಸಂತ್ರಸ್ತರು ಸುಮಾರು 50 ಮಂದಿ ಇದ್ದು, ಅವರಿಗೆ ನಿಲ್ದಾಣದ ಬೇರೆ ಅಂಗಡಿಗಳನ್ನು ನೀಡಬಹುದಾಗಿದ್ದರೂ ಹಾಗೆ ಮಾಡಲಿಲ್ಲ ಎಂಬ ದೂರು ಇದೆ.

ಮಾತನಾಡುವೆ :

ಕೊಂಕಣ ರೈಲ್ವೇಯಲ್ಲಿ ಭೂಸಂತ್ರಸ್ತರಿಗೆ ಉದ್ಯೋಗ, ಭಡ್ತಿ, ಸ್ಟಾಲ್‌ ಹಂಚಿಕೆಯಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸಂಬಂಧಪಟ್ಟವರ ಜತೆ ಮಾತನಾಡುತ್ತೇನೆ. ಇದುವರೆಗೆ ಈ ವಿಷಯ ನನ್ನ ಗಮನಕ್ಕೆ ಬಂದಿರಲಿಲ್ಲ. ಶೋಭಾ ಕರಂದ್ಲಾಜೆ,  ಸಂಸದರು, ಉಡುಪಿ ಚಿಕ್ಕಮಗಳೂರು ಕ್ಷೇತ್ರ

ಪಾರದರ್ಶಕತೆ :

ಕೊಂಕಣ ರೈಲ್ವೇ ಮಾರ್ಗದರ್ಶೀ ಸೂತ್ರದಂತೆ ನೇಮಕಾತಿ ಪ್ರಕ್ರಿಯೆ ಪಾರದರ್ಶಕ ರೀತಿಯಲ್ಲಿ ನಡೆಯುತ್ತದೆ. ಖಾಲಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು. ಎಲ್ಲ ಪ್ರಕ್ರಿಯೆಗಳಲ್ಲೂ ಪಾರದರ್ಶಕತೆ ಕಾಪಾಡಿಕೊಳ್ಳಲಾಗುತ್ತದೆ. ಶಕುಂತಳಾ ಶೆಟ್ಟಿಯವರು ಟೆಂಡರ್‌ನಲ್ಲಿ ಭಾಗವಹಿಸಬೇಕಿತ್ತು. ಅರ್ಜಿ ಸಲ್ಲಿಸಿದ್ದರೆ ಅವರಿಗೇ ಸಿಗುತ್ತಿತ್ತು. ಅವರ ಸಂಬಂಧಿಯೊಬ್ಬರಿಗೆ ಭೂಸಂತ್ರಸ್ತರ ಕೋಟಾದಲ್ಲಿ ನೌಕರಿ ಸಿಕ್ಕಿದೆ. ಪ್ರಯಾಣಿಕರ ಸುರಕ್ಷೆಗಾಗಿ ರೈಲ್ವೇ ಮಂಡಳಿಯ ನಿರ್ಧಾರದಂತೆ ಇಡೀ ದೇಶದಲ್ಲಿ ಟ್ರಾಲಿಗಳನ್ನು ರದ್ದುಗೊಳಿಸಲಾಯಿತು. – ಸುಧಾ ಕೃಷ್ಣಮೂರ್ತಿ, ಪಿಆರ್‌ಒ, ಕೊಂಕಣ ರೈಲ್ವೇ, ಮಂಗಳೂರು

ಸ್ಟಾಲ್‌ನಂತೆ ಉದ್ಯೋಗ ಕಿತ್ತುಕೊಳ್ಳುತ್ತಾರೋ? :

ಉಡುಪಿ ರೈಲು ನಿಲ್ದಾಣದ ನಮ್ಮ ಪೇಪರ್‌ ಸ್ಟಾಲ್‌ನಲ್ಲಿ ಮುಖ್ಯವಾಗಿ ಉದಯವಾಣಿ ಸಮೂಹದ ಪತ್ರಿಕೆಗಳನ್ನು ಇರಿಸುತ್ತಿದ್ದೆವು. ಭೂಸಂತ್ರಸ್ತರ ಕೋಟಾದಡಿ ನೀಡಿದ ಸ್ಟಾಲನ್ನು ಏಕಾಏಕಿ ಕಿತ್ತುಕೊಂಡಾಗ ನಾವು ಮಂಗಳೂರಿನ ಹಿರಿಯ ಅಧಿಕಾರಿಗಳಲ್ಲಿ ಕೇಳಿದೆವು. “ನಿಮಗೆ ಭೂಸಂತ್ರಸ್ತರ ಕೋಟಾದಡಿ ಅಂಗಡಿ ಕೊಟ್ಟದ್ದು ಹೌದು. ಇದನ್ನು ವರ್ಷ ವರ್ಷ ನವೀಕರಣ ಮಾಡಲೇಬೇಕೆಂದಿಲ್ಲ’ ಎಂದು ಉತ್ತರಿಸಿದರು. ನಮಗೆ ಟೆಂಡರ್‌ನ ಯಾವ ಮಾಹಿತಿಯೂ ಇದ್ದಿರಲಿಲ್ಲ. ಈಗ ನಾವು ಕೇಳುವ ಪ್ರಶ್ನೆ: “ಭೂಸಂತ್ರಸ್ತರಿಗೆ ಉದ್ಯೋಗವನ್ನು ಕೊಟ್ಟರು. ಕೊಟ್ಟ ಉದ್ಯೋಗವನ್ನು ಮುಂದುವರಿಸಬೇಕೆಂದಿಲ್ಲ ಎಂದು ಹೇಳುತ್ತಾರೋ?’ ಶಕುಂತಳಾ ಶೆಟ್ಟಿ, ಭೂಸಂತ್ರಸ್ತರು

ಮುಂದಿನ ಹೆಜ್ಜೆ ಚಿಂತನೆ :

1993ರಲ್ಲಿ ಕೊಂಕಣ ರೈಲ್ವೇ ನಿರ್ಮಾಣವಾಗುವಾಗ ಉಡುಪಿ ಕುಕ್ಕಿಕಟ್ಟೆಯಲ್ಲಿ ಭೂಸ್ವಾಧೀನವಾದ ಜಾಗಕ್ಕೆ ಸಿಕ್ಕಿದ ಮೊತ್ತ ಭಾರೀ ಕಡಿಮೆ (ಸೆಂಟ್‌ ಒಂದಕ್ಕೆ 1,700 ರೂ.). ಆಗ ನಾನು ಮತ್ತು ಮಣಿಪಾಲದ ಹರೀಶ್‌ ಹೆಗ್ಡೆಯವರು ಹೋರಾಟ ಮಾಡಿದೆವು. ನಮಗೆ ಉದ್ಯೋಗದ ಲಾಭವೂ ಆಗಲಿಲ್ಲ. ಈಗ ಮುಂದೇನು ಮಾಡಬೇಕೆಂಬ ಚಿಂತನೆಯಲ್ಲಿದ್ದೇವೆ.  ನಾರಾಯಣ ಶೇರಿಗಾರ್‌, ಕುಕ್ಕಿಕಟ್ಟೆ, ಉಡುಪಿ

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.