ಶಾಲಾ ಹಂತದಲ್ಲಿ ಕೊಂಕಣಿ ಕಲಿಕೆ: ಡಾ| ಮೋಹನ್‌ ಪೈ ಕರೆ


Team Udayavani, Mar 22, 2021, 1:47 AM IST

ಶಾಲಾ ಹಂತದಲ್ಲಿ ಕೊಂಕಣಿ ಕಲಿಕೆ: ಡಾ| ಮೋಹನ್‌ ಪೈ ಕರೆ

ಉಡುಪಿ: ಕೊಂಕಣಿ ಭಾಷಿಕರು ಶೇ. 99 ಶಿಕ್ಷಿತರಾದರೂ ಕೊಂಕಣಿ ಭಾಷಾ ಸಾಹಿತ್ಯದಲ್ಲಿ ಹಿಂದೆ ಇದ್ದಾರೆ. ಇದನ್ನು ಬಲಪಡಿಸಲು ಶಾಲಾ ಹಂತಗಳಲ್ಲಿಯೇ ಕೊಂಕಣಿ ಭಾಷೆಯನ್ನು ಕಲಿಸುವಂತಾಗಬೇಕು. ಇದಕ್ಕಾಗಿ ಸರಕಾರ ಕೊಂಕಣಿ ಶಿಕ್ಷಕರ ನೇಮಕಕ್ಕೆ ಮುಂದಾಗಬೇಕು ಎಂದು ಕೊಂಕಣಿ ಸಾಹಿತ್ಯ ಸಮ್ಮೇಳನಾಧ್ಯಕ್ಷ, ನಿವೃತ್ತ ವೈದ್ಯಕೀಯ ಪ್ರಾಧ್ಯಾಪಕ ಡಾ| ಕಸ್ತೂರಿ ಮೋಹನ್‌ ಪೈ ಆಶಿಸಿದರು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಎರಡು ದಿನಗಳ ಕಾಲ ಮಣಿಪಾಲದ ಆರ್‌ಎಸ್‌ಬಿ ಸಭಾಭವನದಲ್ಲಿ ಏರ್ಪಡಿಸಿದ ಕೊಂಕಣಿ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಂಗ್ಲಿಷ್‌ಗಿರುವಂತೆ ಕೊಂಕಣಿ ಪಠ್ಯ ಪುಸ್ತಕವೂ ಏಕರೂಪತೆಯನ್ನು (ಸ್ಟಾಂಡರ್ಡ್‌) ಹೊಂದಿರಬೇಕು. ಕೊಂಕಣಿ ಭಾಷೆಯನ್ನು ಶಾಲಾ ಹಂತಗಳಲ್ಲಿ ಬೆಳೆಸಬೇಕು. ಕೊಂಕಣಿ ಶಿಕ್ಷಕರ ನೇಮಕಕ್ಕೆ ಸರಕಾರ ಕ್ರಮ ವಹಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಡಾ| ಮೋಹನ್‌ ಪೈ ಹೇಳಿದರು.

ಸಮ್ಮೇಳನದ ಯಶಸ್ವಿಗೆ ಸ್ಥಳೀಯ ಸದಸ್ಯರು, ಸಮ್ಮೇಳನ ಸಮಿತಿಯು ವಿಶೇಷ ಪರಿಶ್ರಮ ವಹಿಸಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ| ಕೆ. ಜಗದೀಶ ಪೈ ಹೇಳಿದರು.

ಉಡುಪಿ ಧರ್ಮಪ್ರಾಂತದ ಬಿಷಪ್‌ ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ಅವರು ಅಕಾಡೆಮಿಯು ಭಾಷೆ, ಸಂಸ್ಕೃತಿಗೆ ಉತ್ತೇಜನ ನೀಡುತ್ತಿದೆ. ವಿಶೇಷ ಆಚಾರ ವಿಚಾರ, ಮೌಲ್ಯಗಳನ್ನು ಹೊಂದಿದ ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಸಂಸ್ಕೃತಿಯ ಬೇರುಗಳನ್ನುಹೊಂದಿದ ಭಾಷೆ ಕೊಂಕಣಿಯಾಗಿದೆ. ಈಗ ಅಮೆರಿಕ ಸಹಿತ ವಿದೇಶಗಳಲ್ಲೂ ಕೊಂಕಣಿ ಭಾಷಿಗರ ಸಂಘಟನೆಗಳಿವೆ ಎಂದರು.

ಪುರಾತನವಾದ ಕೊಂಕಣಿ ಭಾಷೆಯ ಸಂಸ್ಕೃತಿಯನ್ನು ಉಳಿಸಲು ಸಮ್ಮೇಳನ ಕಾಳಜಿ ವಹಿಸಿದೆ ಎಂದು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಶ್ಲಾ ಸಿದರು.

ಚೀನದವರು ಚೀನೀ ಭಾಷೆಯ ಮೂಲಕ ಜಾಗತಿಕ ಮಟ್ಟಕ್ಕೆ ಏರಿದರು.ಮಲ ಯಾಳದವರು ಶಿಕ್ಷಿತರಾದರೂ ಮಾತೃಭಾಷೆಯನ್ನು ಬಿಟ್ಟುಕೊಡುವು ದಿಲ್ಲ. ಅದೇ ರೀತಿ ಕೊಂಕಣಿ ಭಾಷಿಕರು ತಮ್ಮ ಭಾಷೆಯನ್ನು ಬಿಟ್ಟು ಕೊಡ ಬಾರದು. ನವಾಯತ್‌ ಮುಸ್ಲಿಮರ ಭಾಷೆಯೂ  ಕೊಂಕಣಿ ಆಗಿದೆ ಎಂದು ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ನಕ್ವಾ ಯಾಹ್ಯಾ ಹೇಳಿದರು.

ಭಾಷಾ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಡಬೇಕಾಗಿದೆ. ವಿಶ್ವ ಕೊಂಕಣಿ ಕೇಂದ್ರದ ಮೂಲಕ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಸಮ್ಮೇಳನದ ಗೌರವ ಸಲಹೆಗಾರ ಡಾ| ನಂದಗೋಪಾಲ ಶೆಣೈ ಹೇಳಿದರು. ಉದ್ಯಮಿಗಳಾದ ಮಂಗಳೂರಿನ ನಿಶಾಂತ್‌ ಶೇಟ್‌, ಹುಬ್ಬಳ್ಳಿಯ ಸತೀಶ್‌ ಶೇಜವಾಡ್ಕರ್‌ ಶುಭ ಕೋರಿದರು. ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್‌, ಉದ್ಯಮಿ ವಿಶ್ವನಾಥ ಶೆಣೈ, ಮಂಗಳೂರು ಪೂರ್ಣಾ

ನಂದ ಪ್ರತಿಷ್ಠಾನದ ಡಿ. ರಮೇಶ ನಾಯಕ್‌, ಅಕಾಡೆಮಿ ಸದಸ್ಯೆ ಪೂರ್ಣಿಮಾ ಸುರೇಶ ನಾಯಕ್‌, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಅಮೃತ್‌ ಶೆಣೈ, ಕಾರ್ಯಾಧ್ಯಕ್ಷ ಮಹೇಶ ಠಾಕೂರ್‌, ಉಪಾಧ್ಯಕ್ಷ ಗಣೇಶ ನಾಯಕ್‌ ಕಲ್ಮರ್ಗಿ, ಪೆರ್ಣಂಕಿಲ ಶ್ರೀಶ ನಾಯಕ್‌, ಅಕಾಡೆಮಿ ರಿಜಿಸ್ಟ್ರಾರ್‌ ಮನೋಹರ ಕಾಮತ್‌ ಮೊದಲಾದವರು ಉಪಸ್ಥಿತರಿದ್ದರು.

ಸಮ್ಮೇಳನದ ಸಲಹೆಗಾರ ಕುಯಿ ಲಾಡಿ ಸುರೇಶ್‌ ನಾಯಕ್‌ ಸ್ವಾಗತಿಸಿ, ಸಾಣೂರು ನರಸಿಂಹ ಕಾಮತ್‌ ಕಾರ್ಯಕ್ರಮ ನಿರ್ವಹಿಸಿದರು.  ಮುಕಾರಿ ವರಸ್‌  ಕೆಡ್ಯಾಲಾಂತು ಸಮ್ಮೇಳನ್‌ ಮುಕಾರಿ ವರಸ್‌ ಕೊಡ್ಯಾಲಾಂತು ಕೊಂಕಣಿ ಸಾಹಿತ್ಯ ಸಮ್ಮೇಳನ್‌ ಆಯೋಜನ್‌ ಕೊರ್ಚಾಕ್‌ ಮಣಿಪಾಲ್‌ ಕೊಂಕಣಿ ಸಾಹಿತ್ಯ ಸಮ್ಮೇಳನ್‌ ನಿರ್ಣಯ್‌ ಗೆತ್ಲಾ… (ಮುಂದಿನ ವರ್ಷ ಮಂಗಳೂರಿನಲ್ಲಿ ಕೊಂಕಣಿ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ಮಣಿಪಾಲದ ಸಮ್ಮೇಳನ ನಿರ್ಣಯ

ವನ್ನು ಅಂಗೀಕರಿಸಿದೆ) ಸಾಹಿತ್ಯ ಸಮ್ಮೇಳನ ಅಂಗೀಕರಿಸಿದ ನಿರ್ಣಯ

ಗಳನ್ನು ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ| ಕೆ.ಜಗದೀಶ ಪೈ “ಜೈ ಕೊಂಕಣಿ’ ಉದ್ಗಾರದ ಮೂಲಕ ಪ್ರಕಟಿಸಿದರು.

ನಿರ್ಣಯಗಳು :

ಶಾಲೆಗಳಲ್ಲಿ ಮಾತೃಭಾಷೆಯಾಗಿ ಕೊಂಕಣಿ ಕಲಿಕೆ

 ಸ್ನಾತಕೋತ್ತರ ಸ್ತರದಲ್ಲಿ ಕೊಂಕಣಿ ಅಧ್ಯಯನ ವಿಷಯ, ಶಿಕ್ಷಕರ ನೇಮಕ

 42 ಭಾಷಿಕರನ್ನು ಒಟ್ಟಿಗೆ ತರುವ ಕಾರ್ಯಕ್ರಮ ಆಯೋಜನೆ

 ಮಂಗಳೂರಿನಲ್ಲಿ ಕೊಂಕಣಿ ಅಧ್ಯಯನ ಮತ್ತು ಸಂಶೋಧನ ಕೇಂದ್ರ ತೆರೆಯಲು ಹೆಚ್ಚುವರಿ 3 ಕೋ.ರೂ. ಅನುದಾನ

ಅಕಾಡೆಮಿ ಅನುದಾನ 2 ಕೋ.ರೂ.ಗೆ ಏರಿಕೆ

ಸಮ್ಮೇಳನಾಧ್ಯಕ್ಷರ  1968ರ ನೆನಪು :

ನಾನು ಎಂಬಿಬಿಎಸ್‌ ಶಿಕ್ಷಣವನ್ನು ಮಣಿಪಾಲದಲ್ಲಿ ಪಡೆಯುತ್ತಿರುವಾಗ (1968) ಮಣಿಪಾಲದ ಗೀತಾ ಮಂದಿರದಲ್ಲಿದ್ದ ಡಾ| ಟಿಎಂಎ ಪೈಯವರು ಯಾವುದೇ ಸಮುದಾಯದ ಕೊಂಕಣಿ ಭಾಷಿಗರಿದ್ದರೆ ಅವರನ್ನು ವಿಚಾರಿಸಿ ವಿಶೇಷ ಆಸ್ಥೆ ತೋರಿಸುವ ಮೂಲಕ “ಕೊಂಕಣಿಗರೆಲ್ಲ ಒಂದು’ ಎಂಬ ಸಂದೇಶ ಸಾರುತ್ತಿದ್ದರು. ಈಗ ಅದರ ಪಕ್ಕದಲ್ಲಿಯೇ ಆರ್‌ಎಸ್‌ಬಿ ಸಭಾಭವನ ಎದ್ದು ನಿಂತಿರುವುದು ಸಂತೋಷ ಎಂದು ಡಾ| ಕಸ್ತೂರಿ ಮೋಹನ್‌ ಪೈ ಹೇಳಿದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.