ಕಡತದಲ್ಲೇ ಉಳಿದ ಕೊರಗ, ಜೇನುಕುರುಬರ ಕನಸು


Team Udayavani, Feb 26, 2022, 6:15 AM IST

ಕಡತದಲ್ಲೇ ಉಳಿದ ಕೊರಗ, ಜೇನುಕುರುಬರ ಕನಸು

ಸಾಂದರ್ಭಿಕ ಚಿತ್ರ.

ಉಡುಪಿ: ಕೊರಗರು, ಜೇನು ಕುರುಬ ಸಮುದಾಯದ ಅರ್ಹ ಫ‌ಲಾನುಭವಿಗಳಿಗೆ ಸರಕಾರದಿಂದ ಮಂಜೂರಾದ ಮನೆಗಳು ಕಡತದಲ್ಲೇ ಉಳಿದುಕೊಂಡಿವೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ 437 ಮನೆಗಳನ್ನು ಈ ಎರಡು ಸಮುದಾಯದ ಕುಟುಂಬಗಳಿಗೆ ಸರಕಾರ ಈಗಾಗಲೇ ಮಂಜೂರು ಮಾಡಿದೆ. ಆದರೆ ತಾಂತ್ರಿಕ ಸಮಸ್ಯೆಯಿಂದ ಮನೆ ನಿರ್ಮಾಣಕ್ಕೆ ಅನುದಾನವೇ ಬಿಡುಗಡೆಯಾಗಿಲ್ಲ.

ಈ ಸಮುದಾಯಗಳ ಮನೆ ನಿರ್ಮಾಣದ ಜವಾಬ್ದಾರಿಯನ್ನು ಸರಕಾರ ಈಗ ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ವಹಿಸಿದೆ. ನಿಗಮದಿಂದ ಮನೆ ನಿರ್ಮಾಣಕ್ಕೆ ಜಾಗದ ದಾಖಲೆ ಪತ್ರ, ಜಿಪಿಎಸ್‌ ಮಾಡಿಸುವುದು ಇತ್ಯಾದಿ ಕಡ್ಡಾಯಗೊಳಿಸಿದೆ. ಮನೆ ನಿರ್ಮಾಣಕ್ಕೆ 3.50 ಲಕ್ಷ ರೂ. ನೀಡಲಾಗುತ್ತದೆ. ಇದರಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ 1.75 ಲ.ರೂ., ಡಾ| ಅಂಬೇಡ್ಕರ್‌ ನಿವಾಸ್‌ ಯೋಜನೆಯಡಿ 1.75 ಲಕ್ಷ ರೂ. ನೀಡಬೇಕು ಎಂಬ ಒಪ್ಪಂದವಿದೆ. ತಾಂತ್ರಿಕ ಸಮಸ್ಯೆ, ಅನುದಾನದ ಹಂಚಿಕೆಯ ವಿಳಂಬದಿಂದ ಮಂಜೂರಾದ ಮನೆಗಳು ಫ‌ಲಾನುಭವಿಗಳ ಕೈ ಸೇರುತ್ತಿಲ್ಲ.

ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್‌ ಸಂಖ್ಯೆ, ಪಡಿತರ ಚೀಟಿಯನ್ನು ನಿಗಮದ ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡುವುದು ಕಡ್ಡಾಯ ಮಾಡಲಾಗಿದೆ. ನಿವೇಶದ ದಾಖಲೆಗಳನ್ನು ಅಪ್‌ ಲೋಡ್‌ ಮಾಡುವುದು ಕಡ್ಡಾಯವಲ್ಲ ಎಂದು ಸರಕಾರ ಹೇಳುತ್ತಿದೆ. ಆದರೆ ಜಿಪಿಎಸ್‌ ಮಾಡಿಸುವುದು ಭೂ ದಾಖಲೆಗಳನ್ನು ಅಪ್‌ಲೋಡ್‌ ಮಾಡದೇ ಇದ್ದರೆ ಮನೆ ಕಟ್ಟಲು ಅನುದಾನ ಬರುತ್ತಿಲ್ಲ.

ಕೊರಗ ಸಮುದಾಯದ ಅನೇಕರಲ್ಲಿ ಸ್ವಂತ ಭೂಮಿ ಇಲ್ಲದೇ ಇರುವುದು ಸರಕಾರಕ್ಕೂ ಗೊತ್ತಿದ್ದರೂ ಕಠಿನ ನಿಯಮ ಮಾಡಿರುವುದು ಸರಿಯಲ್ಲ. ಕೊರಗ ಮತ್ತು ಜೇನು ಕುರುಬ ಸಮುದಾಯದ ಅನೇಕ ಕುಟುಂಬ
ಗಳಲ್ಲಿ ನಿವೇಶನವೇ ಇಲ್ಲ. ಬಹುತೇಕ ಕಡೆಗಳಲ್ಲಿ ಡೀಮ್ಡ್ ಫಾರೆಸ್ಟ್‌ನಲ್ಲಿ ವಾಸವಾಗಿದ್ದಾರೆ. ಹೀಗಾಗಿ ಸರಕಾರ ಮೊದಲ ನಿವೇಶನ ಮಂಜೂರು ಮಾಡಿ ಆ ಮೇಲೆ ಮನೆ ನಿರ್ಮಾಣಕ್ಕೆ ಅನುದಾನ ಒದಗಿಸಬೇಕು ಎಂಬುದು ಸಮುದಾಯಗಳ ಆಗ್ರಹವಾಗಿದೆ.

ಇನ್ನೂ ಪರಿಶೀಲನೆಯಲ್ಲಿದೆ
ಉಭಯ ಜಿಲ್ಲೆಗೆ 437 ಮನೆ ಮಂಜೂರಾಗಿದೆ. ಮನೆ ನಿರ್ಮಾಣದ ಫ‌ಲಾನುಭವಿಗಳ ಪಟ್ಟಿ ರಾಜೀವ್‌ಗಾಂಧಿ ವಸತಿ ನಿಗಮಕ್ಕೆ ಸಲ್ಲಿಸಲಾಗಿದೆ. ಆದರೂ ಸರಕಾರದ ಹಂತದಲ್ಲಿ ಇನ್ನೂ ಪರಿಶೀಲನೆಯಲ್ಲೇ ಇದೆ. ಪ್ರತೀ ಮನೆಯ ನಿರ್ಮಾಣಕ್ಕೆ 3.50 ಲಕ್ಷ ರೂ. ನೀಡಲಾಗುತ್ತದೆ. ಅರ್ಹ ಕುಟುಂಬಕ್ಕೆ ಮನೆ ನಿರ್ಮಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರಕಾರ ಕೂಡಲೇ ಕ್ರಮ ತೆಗೆದುಕೊಳ್ಳುವ ಆವಶ್ಯಕತೆಯಿದೆ.

ನಿಗಮಕ್ಕೆ ನೀಡಿರುವುದೇ ತೊಡಕು
ಈ ಹಿಂದೆ ಕೊರಗ, ಜೇನುಕುರುಬ ಸಮುದಾಯಕ್ಕೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಮನೆ ಮಂಜೂರಾತಿ ಮಾಡಲಾಗುತ್ತಿತ್ತು. ಆಗ ಯಾವುದೇ ಸಮಸ್ಯೆ ಇಲ್ಲದೇ ಮನೆ ನಿರ್ಮಾಣವೂ ನಡೆಯುತ್ತಿದ್ದವು. ರಾಜೀವ್‌ಗಾಂಧಿ ವಸತಿ ನಿಗಮಕ್ಕೆ ಈ ಜವಾಬ್ದಾರಿ ವಹಿಸಿರುವುದರಿಂದ ಮನೆ ನಿರ್ಮಾಣ ಕಾರ್ಯವೇ ಜಟಿಲವಾಗುತ್ತಿದೆ. ನಿಗಮದಿಂದ ಗ್ರಾ.ಪಂ. ಮೂಲಕ ಮನೆ ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೆ ನಿಗಮದಿಂದ ಕೇಳುವ ದಾಖಲೆಗಳನ್ನು ಈ ಸಮುದಾಯ ಒದಗಿಸುವುದು ಕಷ್ಟವಾಗುತ್ತಿದೆ. ಈ ಸಮಸ್ಯೆ ಬಗ್ಗೆ ಸರಕಾರದ ಗಮನಕ್ಕೂ ತಂದಿದ್ದೇವೆ ಎಂದು ಅಧಿಕಾರಿಯೊಬ್ಬರು ವಿವರ ನೀಡಿದರು.

ಪರಿಶಿಷ್ಟ ಪಂಗಡ ಇಲಾಖೆಯಿಂದಲೇ ಕೊರಗ ಮನೆ ಹಂಚಿಕೆ ಮಾಡುವ ವ್ಯವಸ್ಥೆ ಪುನಃ ಆಗಬೇಕು. ಇದನ್ನು ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ನೀಡಿರುವುದರಿಂದ ನಿಗಮದ ನಿಯಮವು ಕೊರಗರು ವಸತಿ ಪಡೆಯಲು ಅಡ್ಡಿಯಾಗುತ್ತಿದೆ.
-ಕೆ. ರಘುಪತಿ ಭಟ್‌, ಉಡುಪಿ ಶಾಸಕ

ಕೊರಗ ಮತ್ತು ಜೇನು ಕುರುಬ ಸಮುದಾಯಕ್ಕೆ ಮಂಜೂರಾದ ಮನೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎದುರಾಗಿರುವ ತಾಂತ್ರಿಕ ಸಮಸ್ಯೆಯ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಿವೇಶನ ಇಲ್ಲದವರಿಗೆ ನಿವೇಶನ ನೀಡುವ ಕಾರ್ಯವೂ ಆಗುತ್ತಿದೆ.
– ಕೂರ್ಮಾ ರಾವ್‌ ಎಂ., ಜಿಲ್ಲಾಧಿಕಾರಿ, ಉಡುಪಿ

ಕೊರಗ ಸಮುದಾಯದಲ್ಲಿ ಅನೇಕರಿಗೆ ಇನ್ನೂ ನಿವೇಶನವೇ ಸಿಕ್ಕಿಲ್ಲ. ಮನೆ ನಿರ್ಮಾಣವನ್ನು ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ನೀಡಿರುವುದು ಸರಿಯಲ್ಲ. ಇದರಿಂದ ಅನೇಕ ಅರ್ಹ ಫ‌ಲಾನುಭವಿಗಳಿಗೆ ಸರಕಾರದ ಅನುದಾನದಲ್ಲಿ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
-ವಿ. ಗಣೇಶ್‌ ಕೊರಗ, ಕೊರಗ ಸಮುದಾಯದ ಮುಖಂಡ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.