Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


Team Udayavani, Apr 29, 2024, 12:21 AM IST

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

ಕುಂದಾಪುರ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರವಡಿ ಗ್ರಾಮದ ಹಳೆಕಟ್ಟು ಎಂಬಲ್ಲಿ ಎ. 28ರಂದು ಸಂಭವಿಸಿದ್ದು, ಪತಿ ಹಾಗೂ ಆತನ ಮನೆಯವರು ಕಿರುಕುಳ ನೀಡಿರುವುದಾಗಿ ಆರೋಪಿಸಿ ಮೃತಳ ತಾಯಿ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇಲ್ಲಿನ ನಿವಾಸಿ ಜಗದೀಶ್‌ ಅವರ ಪತ್ನಿ ಸೌಜನ್ಯಾ (27) ಆತ್ಮಹತ್ಯೆ ಮಾಡಿ ಕೊಂಡವರು. ಈ ದಂಪತಿಗೆ ಒಂದೂವರೆ ವರ್ಷದ ಹೆಣ್ಣು ಮಗುವಿದೆ.

ಪ್ರಕರಣದ ವಿವರ: ಕುಂಭಾಶಿ ನಿವಾಸಿಯಾದ ಸೌಜನ್ಯಾ ಅವರ ವಿವಾಹವು ಕೊರವಡಿಯ ಬಸವ ಅವರ ಪುತ್ರ ಜಗದೀಶ್‌ ಅವರೊಂದಿಗೆ 2021ರ ಮೇ 1ರಂದು ನಡೆದಿತ್ತು. ಎ. 27ರಂದು ರಾತ್ರಿ 9 ಗಂಟೆಗೆ ಸೌಜನ್ಯಾ ತನ್ನ ಸೋದರಮಾವ ಉದಯ ಅವರಿಗೆ ಕರೆ ಮಾಡಿ ತನಗೆ ಪತಿ ಜಗದೀಶ, ಅವರ ತಾಯಿ ಚಂದು, ಪತಿಯ ಅಕ್ಕಂದಿರಾದ ಶೋಭಾ, ಶ್ಯಾಮಲಾ ಹಾಗೂ ಮೈದುನ ಪುಂಡಲೀಕ ತುಂಬಾ ತೊಂದರೆ ಕೊಡುತ್ತಿದ್ದಾರೆ ಎಂದು ಹೇಳಿದ್ದರು.

ಈ ವೇಳೆ ಉದಯ ಅವರು ಬುದ್ಧಿವಾದ ಹೇಳಿ ಒಳ್ಳೆಯ ರೀತಿಯಲ್ಲಿ ಸಂಸಾರ ನಡೆಸುವಂತೆ ತಿಳಿಸಿದ್ದರು.

ಆದರೆ ಬಳಿಕ ಸೌಜನ್ಯಾ ಅವರು ಮತ್ತೆ ರಾತ್ರಿ 9.45ರ ವೇಳೆಗೆ ಉದಯ ಅವರಿಗೆ ಕರೆ ಮಾಡಿ, ಪತಿ ಜಗದೀಶ್‌ ತನಗೆ ಹೊಡೆದು ಹಿಂಸೆ ನೀಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು. ಅದರಂತೆ ಉದಯ ಅವರು ಜಗದೀಶ್‌ ಅವರ ಮನೆಗೆ ತೆರಳಿದ್ದು, ಈ ವೇಳೆ ಜಗದೀಶ್‌ ಅವರು ಪತ್ನಿ ಸೌಜನ್ಯಾ ಅವರನ್ನು ಎ. 28ರಂದು ತವರು ಮನೆಗೆ ಬಿಟ್ಟು ಹೋಗುವುದಾಗಿ ತಿಳಿಸಿದ್ದರು. ಆದರೆ ಎ. 27ರ ಮಧ್ಯರಾತ್ರಿ 12.34ಕ್ಕೆ ಜಗದೀಶ್‌ ಅವರು ಉದಯ ಅವರಿಗೆ ಕರೆ ಮಾಡಿ, ಕೂಡಲೇ ಮನೆಗೆ ಬನ್ನಿ ಎಂದು ತಿಳಿಸಿದ್ದರು. ಅದರಂತೆ ಉದಯ ಅವರು ಅಲ್ಲಿಗೆ ತೆರಳಿದಾಗ ಜಗದೀಶ್‌ ಅವರ ಮನೆಯವರು ಕಾರಿನಲ್ಲಿ ಮನೆಯಿಂದ ಕೋಟೇಶ್ವರದ ಆಸ್ಪತ್ರೆಗೆ ಹೊರಟಿದ್ದರು. ಉದಯ ಅವರನ್ನು ಹಿಂಬಾಲಿಸಿಕೊಂಡು ಆಸ್ಪತ್ರೆಯಲ್ಲಿ ಹೋಗಿ ವಿಚಾರಿಸಿದಾಗ ಸೌಜನ್ಯಾ ಅವರು ಪತಿಯ ಮನೆಯ ಒಳಗಡೆ ರಾತ್ರಿ 9.30ರಿಂದ ಮಧ್ಯರಾತ್ರಿ 12.30ರ ಮಧ್ಯದ ಅವಧಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತಿಳಿದುಬಂದಿತ್ತು.

ಘಟನಾ ಸ್ಥಳಕ್ಕೆ ಕುಂದಾಪುರ ವೃತ್ತ ನಿರೀಕ್ಷಕ ನಂದಕುಮಾರ್‌, ಎಸ್‌ಐ ವಿನಯ್‌ ಕೊರ್ಲಹಳ್ಳಿ ಹಾಗೂ ಸಿಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪ್ರಭಾರ ತಹಶೀಲ್ದಾರ್‌ ಪ್ರದೀಪ್‌ ಅವರು ಪಂಚನಾಮೆ ನಡೆಸಿದರು.

ಕುಸಿದು ಬಿದ್ದು ಸಾವು
ಕೋಟ: ಕಾರ್ಮಿಕನೋರ್ವ ಕಾರ್ಖಾನೆಯಲ್ಲಿ ಅಸೌಖ್ಯದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಹಂಗಾರಕಟ್ಟೆ ಶಿಪ್‌ ಬಿಲ್ಡಿಂಗ್‌ ನಲ್ಲಿ ಎ. 26ರಂದು ಸಂಭವಿಸಿದೆ.

ಉತ್ತರಪ್ರದೇಶ ಮೂಲದ ಅನಿಲ್‌ ಕುಮಾರ್‌ (30) ಮೃತ ಕಾರ್ಮಿಕ.

ಅವರು ಹಂಗಾರಕಟ್ಟೆ ಶಿಪ್‌ ಕಾರ್ಖಾನೆಯಲ್ಲಿ ಹೌಸ್‌ ಕೀಪಿಂಗ್‌ ಕೆಲಸ ಮಾಡಿಕೊಂಡಿದ್ದು ರೂಂನಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ತತ್‌ಕ್ಷಣ ಬ್ರಹ್ಮಾವರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

25-udupi

Udupi: ನಗರಸಭಾ ಸದಸ್ಯನ ಕಾರಿಗೆ ಕಲ್ಲು ಎಸೆತ

18-missing-case

Missing case: ಹಾವಂಜೆ: ಯುವತಿ ನಾಪತ್ತೆ

17-thekkatte

Kumbhashi: ಟಯರ್‌ ಸಿಡಿದು ರಸ್ತೆ ವಿಭಾಜಕ ಏರಿದ ಕಾರು !

16-brahmavara

Bramavara: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

14-basrur

Road Mishap; ಬಳ್ಕೂರು: ಸ್ಕೂಟರ್‌ಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.