ಕೋಟ ಜೋಡಿ ಕೊಲೆ: ಇಬ್ಬರು ಪೊಲೀಸ್‌ ಸಿಬಂದಿ ಬಂಧನ


Team Udayavani, Feb 12, 2019, 3:57 AM IST

polic.jpg

ಕೋಟ: ಇಲ್ಲಿನ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯ ಜಿಲ್ಲಾ ಸಶಸ್ತ್ರ ಪೊಲೀಸ್‌ ಮೀಸಲು ಪಡೆಯ ಇಬ್ಬರು ಪೇದೆಗಳನ್ನು ಬಂಧಿಸಲಾಗಿದೆ. ಪ್ರಕರಣದ  ಪ್ರಮುಖ  ಆರೋಪಿಗಳಿಗೆ ಪರಾರಿಯಾಗಲು ನೆರವು ನೀಡಿದ್ದ ಆರೋಪ ಇವರ ಮೇಲಿದೆ. ಆ ಮೂಲಕ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 8ಕ್ಕೇರಿದೆ.

ಮಂದಾರ್ತಿ ಸಮೀಪದ ನಡೂರು ನಿವಾಸಿ ಪವನ್‌ ಅಮೀನ್‌ ಮತ್ತು  ನಾಡ ಗುಡ್ಡೆಯಂಗಡಿಯ ವೀರೇಂದ್ರ ಅಚಾರ್ಯ ಬಂಧಿತರು. ಬಂಧಿತರನ್ನು ರವಿವಾರ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಅವ ರಿಗೆ ಫೆ. 15ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

ಆರೋಪಿಗಳೊಂದಿಗೆ ಒಡನಾಟ
ಪವನ್‌ ಮತ್ತು  ವೀರೇಂದ್ರ  ಅವರಿಗೆ  ಆರೋಪಿಗಳಾದ ಹರೀಶ್‌ ರೆಡ್ಡಿ, ರಾಜ ಶೇಖರ ರೆಡ್ಡಿ, ಮಹೇಶ ಗಾಣಿಗ ಮತ್ತು ಸಂತೋಷ ಕುಂದರ್‌ ಮುಂತಾದವರೊಂದಿಗೆ ಹಲವು ವರ್ಷದಿಂದ ಒಡನಾಟವಿತ್ತು.  ಜ.26ರಂದು   ಕೊಲೆ ನಡೆಸಿದ ಬಳಿಕ ಎಲ್ಲ ಪ್ರಮುಖ ಅರೋಪಿಗಳು ಪವನ್‌ಗೆ ಸೇರಿರುವ ಹೆಬ್ರಿಯ ಕುಚ್ಚಾರಿನ ಮನೆಯಲ್ಲಿ ರಾತ್ರಿ ತಂಗಿದ್ದರು. ಜ. 27ರಂದು ಬೆಳಗ್ಗೆ  ಹರೀಶ್‌ ರೆಡ್ಡಿಯು ಪವನ್‌ಗೆ ಕರೆ ಮಾಡಿ ಒಂದು ಸಿಮ್‌ ಮತ್ತು ಮೊಬೈಲ್‌, ಹಣ ಮತ್ತು ಕೆಲವು ವಸ್ತುಗಳನ್ನು ಕಳುಹಿಸಿ ಕೊಡಲು ಕೇಳಿದ್ದ. ಅವುಗಳನ್ನು ಪವನ್‌ ಅಮೀನ್‌, ಪ್ರಣವ್‌ ಭಟ್‌ ಎಂಬಾ ತನ ಮೂಲಕ  ಅರೋಪಿಗಳಿಗೆ ತಲುಪಿಸಿದ್ದಾನೆ.

ಅನಂತರ  ರಾತ್ರಿ ವೀರೇಂದ್ರ ಅಚಾರ್ಯನೊಂದಿಗೆ ಸೇರಿ ಕಾರಿನ ವ್ಯವಸ್ಥೆ ಮಾಡಿಕೊಟ್ಟು  ಅರೋಪಿಗಳನ್ನು ಅಗುಂಬೆ, ಎನ್‌.ಅರ್‌.ಪುರ, ಮಲ್ಲಂದೂರು ಮುಂತಾದೆಡೆಯ ತನ್ನ ಸಂಬಂಧಿಕರ ಮನೆಗಳಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದಾನೆ. ಜ. 28ರಂದು ಅರೋಪಿಗಳನ್ನು ಮಲ್ಲಂದೂರಿನಲ್ಲಿಯೆ ಬಿಟ್ಟು ವೀರೇಂದ್ರನೊಂದಿಗೆ  ಕಾರಿನಲ್ಲಿ ವಾಪಸ್‌ ಬರುವಾಗ, ಹರೀಶ್‌ ರೆಡ್ಡಿ ಕೊಟ್ಟ ಮೊಬೈಲ್‌  ಮತ್ತು ಇತರ ವಸ್ತುಗಳನ್ನು ಬಚ್ಚಿಡಲು ಸಹಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಪರಾರಿಯಾಗಲು ಉಪಯೋಗಿಸಿದ್ದ  ಕಾರು, ಮೊಬೈಲ್‌ ಮತ್ತು ಇತರ  ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಪವನ್‌ ಜತೆ ತೆರಳಿದ್ದ  ವೀರೇಂದ್ರ
ಸಂಬಂಧಿಯೋರ್ವರ ಮೂಲಕ ಪವನ್‌ಗೆ  ಹಲವು ವರ್ಷಗಳ ಹಿಂದೆ  ಹರೀಶ್‌ ರೆಡಿªಯ ಸಂಪರ್ಕವಾಗಿತ್ತು ಹಾಗೂ  ಮೂರು ವರ್ಷಗಳಿಂದ ಆಗಾಗ ಜತೆ ಸೇರುತ್ತಿದ್ದರು. ಜೋಡಿ ಕೊಲೆ ನಡೆಸಿದ  ಬಳಿಕ ಪರಾರಿಯಾಗಲು ಹರೀಶ್‌ ರೆಡ್ಡಿ ಹಲವರ ಬಳಿ ನೆರವು ಯಾಚಿಸಿದ್ದು, ಪವನ್‌ಗೂ ಕರೆ ಮಾಡಿ ನೆರವು ಕೋರಿದ್ದ. ಹೀಗಾಗಿ  ವೀರೇಂದ್ರ ಆಚಾರ್ಯನೊಂದಿಗೆ ಸೇರಿ ಸಹಾಯ ಮಾಡಿದ್ದಾನೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇನ್ನೂ ಹಲವರ ಬಂಧನ
ಪ್ರಕರಣದ ಆರೋಪಿಗಳಿಗೆ ಪರಾರಿಯಾಗಲು ಹಾಗೂ ಅಡಗಿಕೊಳ್ಳಲು ಇನ್ನೂ ಹಲವು ಮಂದಿ ಸಹಾಯ ನೀಡಿದ್ದು, ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.