ಕೋಟ : ಕಲ್ಮರ್ಗಿಯ ರೈಸ್ ಮಿಲ್ ಮೇಲೆ ಜಿಲ್ಲಾಧಿಕಾರಿಗಳ ದಿಢೀರ್ ದಾಳಿ : ಅಕ್ರಮ ಅಕ್ಕಿ ವಶ

600 ಕ್ವಿಂಟಲ್ಗೂ ಅಧಿಕ ಅಕ್ರಮ ದಾಸ್ತಾನಿನ ಅನ್ನಭಾಗ್ಯ ಅಕ್ಕಿ ವಶ

Team Udayavani, Nov 2, 2020, 8:46 PM IST

0000

 ಕೋಟ: ಶಿರಿಯಾರ ಗ್ರಾ.ಪಂ. ವ್ಯಾಪ್ತಿಯ  ಕಲ್ಮರ್ಗಿಯಲ್ಲಿರುವ  ರೈಸ್ ಮಿಲ್ ಮೇಲೆ  ಸೋಮವಾರ ಅಪರಾಹ್ನ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಅಧಿಕಾರಿಗಳೊಂದಿಗೆ ದಿಢೀರ್ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡು ಸಾಗಾಟ ನಡೆಸಲು ಯತ್ನಿಸುತ್ತಿದ್ದ ಅನ್ನಬಾಗ್ಯ ಯೋಜನೆಯ ಸುಮಾರು 600 ಕ್ವಿಂಟಾಲ್ ಗೂ ಅಧಿಕ ತೂಕದ ಅಕ್ಕಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಅಕ್ರಮದ ಕರಿತು ಕಳೆದ ಒಂದು ತಿಂಗಳಿಂದ  ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಽಕಾರಿಗಳೊಂದಿಗೆ ಖಚಿತ ಮಾಹಿತಿ ಸಂಗ್ರಹಿಸಿದ್ದರು.  ವಶಪಡಿಸಿಕೊಂಡ ಅಕ್ಕಿಯ ಮೌಲ್ಯ ಸುಮಾರು 16.5 ಲಕ್ಷ ರೂ ಎಂದು ಅಂದಾಜಿಸಲಾಗಿದೆ. ಈ ಸಂದರ್ಭ 6 ಲಾರಿ, ಎರಡು 407 ವಾಹನ, ಒಂದು ಟಾಟಾ 909 ಹಾಗೂ  ಮಾರುತಿ ಇಕೋ ವಾಹನ ಮತ್ತು 3 ಲಾರಿ ಚಾಲಕರು ಮತ್ತು ಕ್ಲೀನರ್ ಗಳನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಅನ್ನಭಾಗ್ಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಫಲಾನುಭವಿಗಳಿಂದ  ಖರೀದಿಸಿ ಅದಕ್ಕೆ ಪಾಲೀಶ್ ಮಾಡಿ ಹೊರ ರಾಜ್ಯ, ಹೊರ ಜಿಲ್ಲೆಗಳಿಗೆ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತಿತ್ತು. ಇದೀಗ ಅಕ್ಕಿ ಮಿಲ್ ಸೀಜ್ ಮಾಡಲಾಗಿದ್ದು ಗಿರಿಣಿಯ ಗೋಡೌನ್ ನಲ್ಲಿ ಇನ್ನಷ್ಟು ಪ್ರಮಾಣದ ಅಕ್ರಮ ದಾಸ್ತಾನಿರುವ ಸಾಧ್ಯತೆ ಇದ್ದು ಮಂಗಳವಾರ ಈ ಕುರಿತು ಹೆಚ್ಚಿನ ತನಿಖೆ ನಡೆಯಲಿದೆ.

ಅಕ್ರಮದ ಕುರಿತು ಮಾಹಿತಿ ನೀಡಿ :- ಬಡವರಿಗೆ ನೀಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನಿರಿಸುವುದು, ಮಾರಾಟ ಮಾಡುವ ಜಾಲ ಜಿಲ್ಲೆಯಲ್ಲಿ ಸಕ್ರಿಯವಾಗಿದ್ದು, ಕಳೆದ ತಿಂಗಳು ಕುಂದಾಪುರ ತಾಲೂಕಿನಲ್ಲಿ ಈ ರೀತಿಯ   ಜಾಲವನ್ನು  ಪತ್ತೆ ಮಾಡಲಾಗಿದೆ. ಜಿಲ್ಲೆಯಲ್ಲಿರುವ ಇಂತಹ ಜಾಲಗಳನ್ನು ಪತ್ತೆ ಹಚ್ಚಲು ಜಿಲ್ಲಾಡಳಿತ ಸಕಲ ಪ್ರಯತ್ನ  ಮಾಡುತ್ತಿದ್ದು, ಸಾರ್ವಜನಿಕರಿಗೆ ಈ ಕುರಿತು  ಮಾಹಿತಿ ಇದ್ದಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ದಾಳಿಯಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕ ಗಜೇಂದ್ರ, ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ, ಬ್ರಹ್ಮಾವರ ವೃತ್ತನಿರೀಕ್ಷಕ ಆನಂತಪದ್ಮನಾಭ, ಕೋಟ ಠಾಣೆ ಕೈಂ ವಿಭಾಗದ ಉಪನಿರೀಕ್ಷಕಿ ಪುಷ್ಪಾ, ಆಹಾರ ನಿರೀಕ್ಷಕರಾದ ಪಾರ್ವತಿ, ಕುಂದಾಪುರ ವಿಭಾಗದ ಸುರೇಶ್, ಶಿರಿಯಾರ ಗ್ರಾಮಲೆಕ್ಕಾಧಿಕಾರಿ ಶರತ್ ಶೆಟ್ಟಿ, ಕೃಷ್ಣ ಮರಕಾಲ ಮುಂತಾದವರು ಉಪಸ್ಥಿತರಿದ್ದರು. ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.